ಮರಳುಗಾರಿಕೆ: 1 ಲಕ್ಷ ಚ.ಮೀ. ವ್ಯಾಪ್ತಿಯಲ್ಲಿ ಬೇಥಮೆಟ್ರಿ ಸರ್ವೆ


Team Udayavani, Jul 31, 2018, 7:25 AM IST

sand-mining-sybolic-pic-600.jpg

ಮಂಗಳೂರು: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಬೇಥಮೆಟ್ರಿ ಸರ್ವೆ ನಡೆಸಿದೆ. ನದಿಯ ತಳಭಾಗದ ಅಧ್ಯಯನವನ್ನು ಕೈಗೊಂಡು ಸೂಕ್ತ ಸ್ಥಳದಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡುವುದು ಇದರ ಉದ್ದೇಶ. ಈ ವರದಿ ಹಾಗೂ ಎನ್‌.ಐ.ಟಿ.ಕೆ.ಯ ತಾಂತ್ರಿಕ ವರದಿ ಪರಿಗಣಿಸಿ ಅರ್ಹ ಮರಳುಗಾರಿಕೆ ನಡೆಸುವವರಿಗೆ ಜಿಲ್ಲಾಡಳಿತ ಅನುಮತಿ ನೀಡಲಿದೆ. ಆ. 2ರಂದು ದ.ಕ. ಜಿಲ್ಲಾ ಮರಳು ನಿಗಾ ಸಮಿತಿ ಈ ಕುರಿತು ಅಂತಿಮ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಸಿ.ಆರ್‌.ಝಡ್‌. ವ್ಯಾಪ್ತಿಯಲ್ಲಿನ ನದಿಗಳಲ್ಲಿ ಮರಳೆತ್ತುವ ಪ್ರದೇಶಗಳ ಅಧ್ಯಯನವನ್ನು ಜಿಯೊಮೆರೈನ್ಸ್‌ ಸಂಸ್ಥೆ ಕೈಗೊಂಡಿದ್ದು, ಇದರಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆ, ಮೀನುಗಾರಿಕಾ ಇಲಾಖೆ ಸಿಬಂದಿ ಭಾಗವಹಿಸಿದ್ದಾರೆ. ಕರಾವಳಿ ನದಿ ಪಾತ್ರದ ಸುಮಾರು 1 ಲಕ್ಷ ಚ. ಮೀಟರ್‌ ಪ್ರದೇಶದಲ್ಲಿ ಎರಡು ದಿನಗಳ ಕಾಲ ಸರ್ವೆ ನಡೆಸಲಾಗಿದೆ. ಇದುವರೆಗೆ ಎನ್‌.ಐ.ಟಿ.ಕೆ. ನೀಡುವ ಉಪಗ್ರಹ ಆಧಾರಿತ ಅಧ್ಯಯನ ಹಾಗೂ ತಾಂತ್ರಿಕ ವರದಿ ಆಧಾರದಲ್ಲಿ ಸಿಆರ್‌ಝಡ್‌ ಮರಳು ತೆಗೆಯುವ ನಿರ್ಧಾರ ಕೈಗೊಳ್ಳಲಾಗುತ್ತಿತ್ತು. ದೋಣಿಯಲ್ಲಿ ತೆರಳಿ ಜಿ.ಪಿ.ಎಸ್‌. ಇಕೋ ಸೌಂಡರ್‌ ಮತ್ತಿತರ ಉಪಕರಣಗಳ ಸಹಾಯದಲ್ಲಿ ನದಿಯ ಆಳದಲ್ಲಿರುವ ಮರಳು, ಹೂಳು ಹಾಗೂ ಕಲ್ಲಿನ ಪ್ರಮಾಣವನ್ನು ಸರ್ವೆ ಮಾಡಲಾಗಿದೆ. ಯಾವ ಮರಳು ಯೋಗ್ಯವಾಗಿದೆ ಹಾಗೂ ಯಾವುದು ಅಲ್ಲ ಎಂಬುದನ್ನು ಸರ್ವೆ ಮೂಲಕ ಕಂಡುಕೊಳ್ಳಲಾಗಿದೆ. 

ಈ ಮಧ್ಯೆ ಸಿ.ಆರ್‌.ಝಡ್‌. ಪ್ರದೇಶದಲ್ಲಿ ಸರ್ವೆ ಪ್ರಕ್ರಿಯೆ ಪೂರ್ಣಗೊಂಡು ರಾಜ್ಯಮಟ್ಟದ ಅನುಮೋದನಾ ಸಮಿತಿಯಿಂದ ಅನುಮತಿ ಸಿಗುವುದಕ್ಕೆ ಕೆಲವು ದಿನ ಕಾಯಬೇಕಾಗಬಹುದು ಎಂದು ಕೂಡ ಹೇಳಲಾಗುತ್ತಿದೆ. ಆದರೆ ನದಿಗಳ ಸಮೀಕ್ಷಾ ಪ್ರಕ್ರಿಯೆ ಪೂರ್ಣಗೊಂಡು ವರದಿ ಸಿಕ್ಕಿದ ಬಳಿಕ ಅಗತ್ಯವಿರುವ ಕಡೆಗಳಲ್ಲಿ ಮಾತ್ರ ಮರಳುಗಾರಿಕೆ ನಡೆಸಲು ಈ ಬಾರಿ ಅವಕಾಶ ನೀಡಲಾಗುವುದು ಎಂದು ದ.ಕ. ಜಿಲ್ಲಾಡಳಿತ ಈಗಾಗಲೇ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಏನಿದು ಬೇಥಮೆಟ್ರಿ ಸರ್ವೆ?
ಜಲಸಂಪನ್ಮೂಲಗಳಲ್ಲಿ ನೀರಿನ ತಳದ ನೆಲದ ಸಮೀಕ್ಷೆಯನ್ನು ಬೇಥಮೆಟ್ರಿ ಸರ್ವೆ ಎನ್ನುತ್ತಾರೆ. ಸಾಮಾನ್ಯವಾಗಿ ಸೋನಾರ್‌ ಉಪಕರಣದ ಮೂಲಕ ಇದನ್ನು ನಡೆಸುತ್ತಾರೆ. ಸೋನಾರ್‌ ಉಪಕರಣದ ಮೂಲಕ ಧ್ವನಿ ಅಥವಾ ಬೆಳಕನ್ನು ಹಾಯಿಸಿ, ಅದು ತಳದಿಂದ ಪ್ರತಿಫ‌ಲಿಸಿ ಹಿಂದಿರುಗಿ ಬರುವ ಸಮಯವನ್ನು ಆಧರಿಸಿ ಆಳ, ಅಲ್ಲಿರುವ ವಸ್ತುಗಳು ಇತ್ಯಾದಿ ಮಾಹಿತಿ ಪಡೆಯಲಾಗುತ್ತದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.