ಮರಳು ಸಮಸ್ಯೆ : ಪರಿಹಾರಕ್ಕೆ ಕ್ರಮ: ಆಗ್ರಹ
Team Udayavani, Dec 4, 2021, 4:38 AM IST
ಸಾಂದರ್ಭಿಕ ಚಿತ್ರ..
ಮಂಗಳೂರು: ಮರಳು ಸಮಸ್ಯೆಯಿಂದ ನಿರ್ಮಾಣ ಚಟುವಟಿಕೆಗಳು ಸಂಕಷ್ಟದಲ್ಲಿದ್ದು ಜಿಲ್ಲಾಡಳಿತ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಕೈಗೆಟಕುವ ದರದಲ್ಲಿ ಮರಳು ಲಭ್ಯವಾಗುವಂತೆ ಮಾಡಬೇಕು ಎಂದು ದ.ಕ. ಸಿವಿಲ್ ಕಾಂಟ್ರಾಕ್ಟರ್ ಅಸೋಸಿಯೇಶನ್ ಆಗ್ರಹಿಸಿದೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್ ಅಧ್ಯಕ್ಷ ಮಹಾಬಲ ಕೊಟ್ಟಾರಿ ಅವರು ಜಿಲ್ಲೆಯಲ್ಲಿ ಮರಳುಗಾರಿಕೆ ಪರವಾನಿಗೆ ಅವಧಿ ಸೆ. 16ಕ್ಕೆ ಮುಗಿದಿದೆ. ಮರಳುಗಾರಿಕೆ ನಿಷೇಧಿಸಲ್ಪಟ್ಟು ಎರಡು ತಿಂಗಳು ಕಳೆದಿದ್ದು ನವೆಂಬರ್ ಕೊನೆಗೆ ಮರಳು ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಡಿಸೆಂಬರ್ ತಿಂಗಳಾದರೂ ಇನ್ನೂ ಮರಳು ಲಭ್ಯವಾಗುತ್ತಿಲ್ಲ ಎಂದರು.
ಮಂಗಳೂರಿನಲ್ಲಿ ನಿರ್ಮಾಣ ಕಾಮಗಾರಿಗಳಿಗೆ ಪ್ರತಿದಿನ ಸುಮಾರು 500 ಲೋಡ್ ಮರಳು ಅವಶ್ಯವಿದೆ. ದುಬಾರಿ ದರದಿಂದಾಗಿ ಅಗತ್ಯ ಮರಳು ಖರೀದಿಸಲು ಆಗುತ್ತಿಲ್ಲ. ಇದರಿಂದ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ 413 ಕೋವಿಡ್ ಪಾಸಿಟಿವ್ ಸೋಂಕು ಪತ್ತೆ: ನಾಲ್ವರು ಸಾವು
ಬೆಥಮೆಟ್ರಿಕ್ಸ್ ಸರ್ವೆ ವರದಿ ಎನ್ಐಟಿಕೆಗೆ ಹೋಗಿದ್ದು ಅವರ ತಾಂತ್ರಿಕ ವರದಿ ಜಿಲ್ಲಾಡಳಿತಕ್ಕೆ ಇನ್ನೂ ಸಲ್ಲಿಕೆಯಾಗಿಲ್ಲ .ಜಿಲ್ಲಾಧಿಕಾರಿ ಅಧ್ಯಕ್ಷತೆಯ ಮರಳು ಸಮಿತಿಯಲ್ಲಿ ಇದನ್ನು ಮಂಡಿಸಿ, ಅನುಮೋದನೆ ಪಡೆದ ಅನಂತರ ಸರಕಾರಕ್ಕೆ ಅನುಮತಿಗೆ ಕಳುಹಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆಗಳು ತ್ವರಿತವಾಗಿ ನಡೆಯಬೇಕಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕೂಡಲೇ ಗಮನಹರಿಸಬೇಕು. ತಪ್ಪಿದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದರು.
ಉಪಾಧ್ಯಕ್ಷ ದಿನಕರ ಸುವರ್ಣ,ಕಾರ್ಯದರ್ಶಿ ಉಮೇಶ್ ದಂಡಕೇರಿ, ಜತೆ ಕಾರ್ಯದರ್ಶಿ ಅಶೋಕ್ ಕುಲಾಲ್ ಇದ್ದರು.
ಕಡಿಮೆ ಮರಳು ದಿಬ್ಬ ?
ಬೆಥಮೆಟ್ರಿಕ್ಸ್ ಸರ್ವೆ ವರದಿಯಲ್ಲಿ ಮರಳುದಿಬ್ಬ ಸಂಖ್ಯೆ ಅತ್ಯಂತ ಕಡಿಮೆ ಇರುವುದಾಗಿ ಮಾಹಿತಿ ಲಭ್ಯವಾಗಿದೆ. ಇದು ನಿಜವಾಗಿದ್ದರೆ ಮರಳು ಸಮಸ್ಯೆ ಕಾಡಲಿದೆ. ಮರಳು ದಿಬ್ಬ ಪತ್ತೆ ಕಾರ್ಯದಲ್ಲಿ ನದಿ ಪರಿಸರದ ಬಗ್ಗೆ ವಾಸ್ತವಿಕ ಜ್ಞಾನ ಹೊಂದಿರುವ ಸ್ಥಳೀಯ ಮೀನುಗಾರರ ನೆರವು ಪಡೆಯುತ್ತಿಲ್ಲ. ಇದು ಒಟ್ಟು ಮರಳು ಲಭ್ಯತೆ ಗುರುತಿಸುವಲ್ಲಿ ಬಹಳಷ್ಟು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗೌರವಾಧ್ಯಕ್ಷ ಪುರುಷೋತ್ತಮ ಕೊಟ್ಟಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ