ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ: ಬಗೆಹರಿಯದ ಗೊಂದಲ, ಮತ್ತೆ ಮರಳು ಅಭಾವ


Team Udayavani, Nov 10, 2022, 9:04 AM IST

ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ: ಬಗೆಹರಿಯದ ಗೊಂದಲ, ಮತ್ತೆ ಮರಳು ಅಭಾವ

ಮಂಗಳೂರು : ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಗೊಂದಲ ಮುಂದುವರಿದಿರುವಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮರಳು ಅಭಾವ ಸೃಷ್ಟಿಯಾಗಿದೆ.

ಪ್ರಸ್ತುತ ನಾನ್‌ ಸಿಆರ್‌ಝಡ್‌ ಹಾಗೂ ಶಂಭೂರು ಹಾಗೂ ಅದ್ಯಪಾಡಿ ಯಾರ್ಡ್‌ನಿಂದ ಮರಳು ಸರಬರಾಜು ಆಗುತ್ತಿದ್ದರೂ ಇದರ ಗುಣಮಟ್ಟದ ಬಗ್ಗೆ ಎದ್ದಿರುವ ಅಪಸ್ವರ ಮತ್ತು ಅಸಮರ್ಪಕ ಸರಬರಾಜು ವ್ಯವಸ್ಥೆ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗಳ ಮರಳು ಆವಶ್ಯಕತೆಯನ್ನು ನೀಗಿಸಲು ವಿಫಲವಾಗಿದೆ. ಮುಖ್ಯವಾಗಿ ವೈಯುಕ್ತಿಕ ಮನೆಗಳನ್ನು ನಿರ್ಮಾಣ ಮಾಡುವವರು ಕಾಮಗಾರಿ ಸ್ಥಗಿತಗೊಳಿಸಿ ಮರಳಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದರವೂ ದುಬಾರಿಯಾಗಿದೆ ಎಂದು ಮನೆ ನಿರ್ಮಾಣಗಾರರು ಹೇಳುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಇದೀಗ ಮತ್ತೆ ಮರಳು ಸಮಸ್ಯೆ ಸೃಷ್ಟಿ ಯಾಗಿದ್ದು ನಿರ್ಮಾಣ ಕಾಮಗಾರಿಗಳಿಗೆ ಅವಶ್ಯ ಮರಳು ಕೊರತೆ ಎದುರಾಗಿದೆ. ಇದರಿಂದಾಗಿ ಕಾಮ ಗಾರಿಗಳು ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು ಎಂದು ಜಿಲ್ಲಾ ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ನ
ಮಹಾಬಲ ಕೊಟ್ಟಾರಿಯವರು ಉದಯವಾಣಿಗೆ ತಿಳಿಸಿದ್ದಾರೆ.

ಅನುಮತಿ: ಬಗೆಹರಿಯದ ಗೊಂದಲ
ದ.ಕ. ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ ಒಟ್ಟು 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಸಿಆರ್‌ಝಡ್‌ ವಲಯದಲ್ಲಿ ಯಂತ್ರೋಪಕರಣಗಳನ್ನು ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಆದೇಶ ನೀಡಿದೆ. ಆದರೆ ಈ ಆದೇಶದ ಅನುಷ್ಟಾನದ ಕುರಿತಂತೆ ಜಿಲ್ಲಾಡಳಿತದ ಗೊಂದಲದಿಂದಾಗಿ ಇನ್ನೂ ಮರಳುಗಾರಿಕೆ ಆರಂಭವಾಗಿಲ್ಲ.

ತಾತ್ಕಾಲಿಕ ಪರವಾನಿಗೆದಾರರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ದ.ಕ.ಜಿಲ್ಲಾಡಳಿತದ ಜತೆಗೆ ರಾಜ್ಯ ಸರಕಾರ ಕೂಡಾ ಪ್ರತಿವಾದಿಗಳಾಗಿದ್ದು ಇದರಿಂದಾಗಿ ಅನುಮತಿ ನೀಡಲು ರಾಜ್ಯ ಸರಕಾರದಿಂದ ಸೂಚನೆ ಅಗತ್ಯವಿದೆ ಎಂಬ ನೆಲೆಯಲ್ಲಿ ಈ ಬಗ್ಗೆ ವಿವರಣೆ ಕೋರಿ ಜಿಲ್ಲಾಡಳಿತ ಈಗಾಗಲೇ ರಾಜ್ಯ ಸರಕಾರಕ್ಕೆ ಪತ್ರ ಬರೆದಿರುವುದಾಗಿ ನಿಕಟಪೂರ್ವ ಜಿಲ್ಲಾಧಿಕಾರಿ ಡಾ| ಕೆ.ವಿ.ರಾಜೇಂದ್ರ ತಿಳಿಸಿದ್ದರು. ಸಿಆರ್‌ಝಡ್‌ ವಲಯದಲ್ಲಿ ಸಾಂಪ್ರಾದಾಯಿಕ ಮರಳುಗಾರಿಕೆಗೆ ಸಂಬಂಧಿಸಿ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್‌ ರದ್ದು ಪಡಿಸಿ ಮರಳುಗಾರಿಕೆಗೆ ಅನುಮತಿ ನೀಡುವಂತೆ ಸೂಚಿಸಿರುವ ಹಿನ್ನಲೆಯಲ್ಲಿ ಇದಕ್ಕೆ ಮತ್ತೆ ರಾಜ್ಯ ಸರಕಾರದ ಅನುಮತಿ ಅವಶ್ಯವಿರುವುದಿಲ್ಲ ಎಂಬುದು ಅರ್ಜಿ ಸಲ್ಲಿಸಿದ್ದ ತಾತ್ಕಾಲಿಕ ಪರವಾನಿಗೆದಾರರ ವಾದವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ನಿಷೇಧ ಕೋರಿ ಅಲ್ಲಿನ ಕೆಲವು ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಸಿರುಪೀಠ ಅಲ್ಲಿ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಯನ್ನು ನಿಷೇಧಿಸಿ 2022ರ ಮೇ 18 ರಂದು ಆದೇಶ ನೀಡಿತ್ತು. ಇದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮೇ 21 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದರು.ಇದನ್ನು ಪ್ರಶ್ನಿಸಿ 57 ಮಂದಿ ಪರವಾನಿಗೆದಾರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಪರಿಶೀಲಿಸಿ ಕ್ರಮ
ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಸಿಆರ್‌ಝಡ್‌ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವಂತೆ ತಾತ್ಕಾಲಿಕ ಪರವಾನಿಗೆದಾರರು ಅರ್ಜಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ನಿರ್ಧಾರ ಕೈಗೊಳ್ಳಬೇಕಾಗಿರುವ ಹಿನ್ನಲೆಯಲ್ಲಿ ಅರ್ಜಿಯನ್ನು ಸಮಿತಿಗೆ ಕಳುಹಿಸಲಾಗುವುದು. ಸಮಿತಿ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ.

– ರವಿ ಕುಮಾರ್‌ ಎಂ.ಆರ್‌.
ದ.ಕ.ಜಿಲ್ಲಾಧಿಕಾರಿ,ಅಧ್ಯಕ್ಷರು, ಜಿಲ್ಲಾ ಮರಳು ಉಸ್ತುವಾರಿ ಸಮಿತಿ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.