ಆಗಸ್ಟ್‌  ಪ್ರಥಮ ವಾರದಲ್ಲಿ ಮರು ಆರಂಭ ನಿರೀಕ್ಷೆ


Team Udayavani, Jul 30, 2021, 7:00 AM IST

ಆಗಸ್ಟ್‌  ಪ್ರಥಮ ವಾರದಲ್ಲಿ ಮರು ಆರಂಭ ನಿರೀಕ್ಷೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಿಆರ್‌ಝಡ್‌ ಹಾಗೂ ನಾನ್‌ ಸಿಆರ್‌ಝಡ್‌ ವಲಯದಲ್ಲಿ  ಜೂ. 1ರಿಂದ‌ ಎರಡು ತಿಂಗಳು ಜಾರಿಯಲ್ಲಿದ್ದ ಮರಳುಗಾರಿಕೆ ನಿಷೇಧ ಜು. 31ಕ್ಕೆ ಕೊನೆಗೊಳ್ಳಲಿದೆ. ಆಗಸ್ಟ್‌ ಪ್ರಥಮ ವಾರದಲ್ಲಿ ಮರು ಆರಂಭಿಸಲು ಸಿದ್ಧತೆಗಳು ನಡೆಯುತ್ತಿವೆ.

ಜಿಲ್ಲಾಧಿಕಾರಿ ಅಧ್ಯಕ್ಷತೆ ಯಲ್ಲಿರುವ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಮರಳುಗಾರಿಕೆ ಪುನರಾರಂಭ ಕುರಿತಂತೆ ಸಭೆ ನಡೆಸಿ ಅಧಿಸೂಚನೆ ಹೊರಡಿಸಿದ ಬಳಿಕ ಮರಳುಗಾರಿಕೆಗೆ ಚಾಲನೆ ದೊರಕ ಲಿದೆ. ಹಾಲಿ ಅವಧಿಯಲ್ಲಿ  ಸಿಆರ್‌ಝಡ್‌ ವಲಯದಲ್ಲಿ ನೀಡಿರುವ ಪರವಾನಿಗೆ ಅವಧಿ ಸೆಪ್ಟಂಬರ್‌ ಅಂತ್ಯದವರೆಗೆ ಇದ್ದು ಅಲ್ಲಿಯ ವರೆಗೆ ಸಿಆರ್‌ಝಡ್‌ ವಲಯದಲ್ಲಿ ಮರಳು ತೆಗೆಯಲು ಅವಕಾಶವಿದೆ. ಬಳಿಕ

ಹೊಸದಾಗಿ ಬ್ಯಾಥಮೆಟ್ರಿಕ್‌ ಸರ್ವೇ ಆಗಿ  ಮರಳು ದಿಬ್ಬ ಗುರುತಿಸಿ  ಪರಿಸರ ಇಲಾಖೆಯ ಅನುಮತಿ ಪಡೆದು ಮರಳು ಗಾರಿಕೆ ಆರಂಭಗೊಳ್ಳಬೇಕಿದೆ.   2020ರ ನವೆಂಬರ್‌ನಲ್ಲಿ ಮರು ಆರಂಭ ಗೊಂಡಿತ್ತು. ಸಿಆರ್‌ಝಡ್‌ ವ್ಯಾಪ್ತಿಯೊಳಗೆ ಬರುವ ನೇತ್ರಾವತಿಯಲ್ಲಿ  8, ಗುರುಪುರ ನದಿಯಲ್ಲಿ 4 ಹಾಗೂ

ಶಾಂಭವಿ ನದಿಯಲ್ಲಿ  1  ಬ್ಲಾಕ್‌ ಸೇರಿದಂತೆ 13 ಬ್ಲಾಕ್‌ಗಳಲ್ಲಿ (ದಿಬ್ಬ) ಈ ಬಾರಿ ಮರಳು ತೆರವಿಗೆ ಪರಿಸರ ಇಲಾಖೆಯಿಂದ ಅನುಮತಿ ಲಭಿಸಿ ಎರಡು ಹಂತಗಳಲ್ಲಿ 105 ಮಂದಿ ಗುತ್ತಿಗೆದಾರರಿಗೆ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು. ಸಿಆರ್‌ಝಡ್‌ನ‌ಲ್ಲಿ  ಕಳೆದ ನವೆಂಬರ್‌ನಿಂದ  ಮೇ 10ರ ವರೆಗೆ ಒಟ್ಟು 2,26,852 ಮೆ.ಟನ್‌  ಮರಳು ತೆರವುಗೊಳಿಸಲಾಗಿತ್ತು. ನಾನ್‌ ಸಿಆರ್‌ಝಡ್‌ ವಲಯದಲ್ಲಿ ಇ-ಟೆಂಡರ್‌ ಮೂಲಕ 16 ಬ್ಲಾಕ್‌ಗಳ ಗುತ್ತಿಗೆ ಮಂಜೂರು ಮಾಡಲಾಗಿದ್ದು 1,66,684 ಮೆಟ್ರಿಕ್‌ ಟನ್‌  ಮರಳು ತೆರವುಗೊಳಿಸಲಾಗಿತ್ತು.

ಉಡುಪಿಯಲ್ಲೂ ಸಿದ್ಧತೆ:

ಉಡುಪಿ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಆ. 1ರಿಂದ ಮರಳುಗಾರಿಕೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಮರಳುಗಾರಿಕೆ ನಡೆಸುವವರ ಬಳಿ ಮಾತುಕತೆ ನಡೆಸುತ್ತಿದ್ದು ಸೋಮವಾರ ಖಚಿತ ಚಿತ್ರಣ ಸಿಗಲಿದೆ.

ಉಡುಪಿ ಜಿಲ್ಲೆಯಲ್ಲಿ 8,000 ಮೆಟ್ರಿಕ್‌ ಟನ್‌ ಮರಳು ಉತ್ಪಾದಿಸುವ ಗುರಿ ಹೊಂದಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಇದು ಮುಂದಿನ ಜೂನ್‌ ವರೆಗೆ ಸಾಕಾಗಲಿದೆ. ಸರಕಾರದಿಂದ ಹಸಿರುನಿಶಾನೆ ಸಿಕ್ಕಿದ ತತ್‌ಕ್ಷಣ ಆರಂಭವಾಗಲಿದೆ.

ಹೊಸದಾಗಿ ಪ್ರಕ್ರಿಯೆ:

ಸಿಆರ್‌ಝಡ್‌ ವಲಯದಲ್ಲಿ ಈ ಬಾರಿಯ ಮರಳುಗಾರಿಕೆ ಅನುಮತಿ ಅವಧಿ ಮುಕ್ತಾಯಗೊಂಡ ಹೊಸದಾಗಿ ಪ್ರಕ್ರಿಯೆಗಳು ನಡೆಯಬೇಕಿದೆ. ನೇತ್ರಾವತಿ, ಫಲ್ಗುಣಿ ಹಾಗೂ ಶಾಂಭವಿ ನದಿಯ ಸಿಆರ್‌ಝಡ್‌ ವಲಯದಲ್ಲಿ ಬ್ಯಾಥಮೆಟ್ರಿಕ್‌ ಸರ್ವೇ ನಡೆದು ಮರಳು ದಿಬ್ಬಗಳನ್ನು ಗುರುತಿಸಿದ ಬಳಿಕ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ವರದಿಯನ್ನು ಪರಿಶೀಲಿಸಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿಗೆ (ಕೆಸಿಝಡ್‌ಎಂ) ಅನುಮೋದನೆಗೆ ಕಳುಹಿಸಿಕೊಡುತ್ತದೆ. ಕೆಸಿಝಡ್‌ಎಂ ಇದನ್ನು ಪರಿಶೀಲಿಸಿ ಅನುಮೋದನೆ ನೀಡಿದ ಬಳಿಕ ಹೊಸದಾಗಿ ಮರಳುಗಾರಿಕೆ ಪ್ರಕ್ರಿಯೆಗಳಿಗೆ ಚಾಲನೆ ದೊರಕುತ್ತದೆ.

ದ.ಕ. ಜಿಲ್ಲೆಯಲ್ಲಿ ಜೂ. 1ರಿಂದ ಇದ್ದ 2 ತಿಂಗಳ ಮರಳು ಗಾರಿಕೆಗೆ ನಿಷೇಧ ಜು. 31ಕ್ಕೆ ಕೊನೆಯಾಗುತ್ತದೆ. ಮರಳು  ಉಸ್ತುವಾರಿ ಸಮಿತಿ ಸಭೆ ನಡೆಸಿ ಮುಂದಿನ ಕ್ರಮದ ಬಗ್ಗೆ ಸೂಚಿಸಲಾಗುವುದು. – ಡಾ| ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ, ಜಿಲ್ಲಾ ಮರಳು  ಉಸ್ತುವಾರಿ ಸಮಿತಿಯ ಅಧ್ಯಕ್ಷ

ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಪುನಃ ಆರಂಭಿಸಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಸರಕಾರ ದಿಂದ ಸೂಚನೆ ಬಂದ ತತ್‌ಕ್ಷಣ ಆರಂಭವಾಗಲಿದೆ.– ಜಿ. ಜಗದೀಶ್‌,  ಜಿಲ್ಲಾಧಿಕಾರಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಅಧ್ಯಕ್ಷ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.