ಮರಳುಗಾರಿಕೆ: ಡಿ.ಸಿ.ನೇತೃತ್ವದ ತಂಡ ದಾಳಿ
Team Udayavani, Jan 16, 2018, 11:25 AM IST
ಮಂಗಳೂರು: ಸಿಆರ್ಝಡ್ ವ್ಯಾಪ್ತಿಯ ಕೆಲವು ಕಡೆ ಅಕ್ರಮದಕ್ಕೆ ನಿರ್ಮಿಸಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ನೇತೃತ್ವದ ತಂಡದವರು ಮೂಡುಶೆಡ್ಡೆ, ಪಡುಶೆಡ್ಡೆ, ಜಪ್ಪಿನ ಮೊಗರು ಸೇರಿದಂತೆ ಹಲವೆಡೆ ಹಠಾತ್ ಧಾಳಿ ನಡೆಸಿ 800ಕ್ಕೂ ಅಧಿಕ ಲೋಡ್ ಮರಳು, ಡ್ರೆಜ್ಜಿಂಗ್ ಮೆಷಿನ್, ಲಾರಿಯನ್ನು ವಶಪಡಿಸಿಕೊಂಡು ಮುಟ್ಟುಗೋಲು ಹಾಕಿದ್ದಾರೆ.
ಮಂಗಳೂರು ತಾಲೂಕಿನ ಮರವೂರು ವೆಂಟೆಡ್ ಡ್ಯಾಂ ಪಕ್ಕದ ಪಡುಶೆಡ್ಡೆ, ಮೂಡುಶೆಡ್ಡೆ, ಮಂಜಲ್ಪಾದೆ ಸುತ್ತಮುತ್ತ ದಾಳಿ ನಡೆಸಿ 5 ಮರಳು ಧಕ್ಕೆ ಮುಟ್ಟುಗೊಲು ಹಾಕಲಾಗಿದ್ದು, 800 ಕ್ಕೂ ಅಧಿಕ ಲೋಡ್ ಮರಳು, ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. 6ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, 40ಬೋಟು, ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ ಆರಂಭಿಸಿದ ಧಾಳಿ ಸೋಮವಾರ ಸಂಜೆಯವರೆಗೆ ಮುಂದುವರಿದಿದೆ ಎಂದು ಪ್ರಕಟನೆ ತಿಳಿಸಿದೆ.
ದಾಳಿ ಮಾಡಿದ ತಂಡದಲ್ಲಿ ತಹಶೀಲ್ದಾರ್ ಗುರುಪ್ರಸಾದ್, ಎಸಿ ರೇಣುಕಾಪ್ರಸಾದ್, ಹಿರಿಯ ಭೂ ವಿಜ್ಞಾನಿ ನಿರಂಜನ್, ಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಕಾವೂರು, ಪಾಂಡೇಶ್ವರ ಪೊಲೀಸರು ಭಾಗವಹಿಸಿದ್ದರು.
ಮರಳು ಶಿರಾಡಿ ಕಾಮಗಾರಿಗೆ: ಪಡುಶೆಡ್ಡೆಯಲ್ಲಿ ವಶಪಡಿಸಿಕೊಂಡ ಎಲ್ಲಾ ಮರಳನ್ನು ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೀಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಮೂಲಕ ಗಣಿ ಇಲಾಖೆಗೆ ರಾಜಧನ ಪಾವತಿಸಿ, ಶಿರಾಡಿಗೆ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ