ಸುವರ್ಣ ಮಹೋತ್ಸವದ ಆಚರಣೆ ಸಿದ್ಧತೆಯಲ್ಲಿರುವ ಸಂಘ

ಕೊನ್ನೆಪದವು ಹಾಲು ಉತ್ಪಾದಕರ ಸಹಕಾರ ಸಂಘ

Team Udayavani, Feb 18, 2020, 4:34 AM IST

ben-32

ಮೂಡುಬಿದಿರೆ ಸಮೀಪದ ಹೊಸಬೆಟ್ಟು ವ್ಯಾಪ್ತಿಯ ನಾಲ್ಕು ಗ್ರಾಮಗಳ ನಾಗರಿಕರಿಗೆ ಕೊನ್ನೆಪದವು ಹಾಲು ಉತ್ಪಾದಕರ ಸಂಘವು ಸ್ವಉದ್ಯೋಗ ನೀಡುವುದರ ಜತೆಗೆ ಗ್ರಾಮೀಣಾಭಿವೃದ್ಧಿಗೆ ಸಹಕರಿಸುತ್ತಿದೆ. ಸುವರ್ಣ ಮಹೋತ್ಸವದ ಆಚರಣೆಯ ಸಿದ್ಧತೆಯಲ್ಲಿರುವ ಈ ಸಂಘವು ವ್ಯಾಪ್ತಿಯಲ್ಲಿ ಹಲವು ಸಾಮಾಜಿಕ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದೆ.

ಮೂಡುಬಿದಿರೆ: ಸಮೀಪದ ಹೊಸಬೆಟ್ಟು, ಇರುವೈಲು, ಪುಚ್ಚೆಮೊಗರು ಹಾಗೂ ತೋಡಾರು ಗ್ರಾಮಗಳ ವ್ಯಾಪ್ತಿಯಲ್ಲಿ ಕೊನ್ನೆಪದವು ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾರಂಭವಾದದ್ದು 1974ರ ಎಪ್ರಿಲ್‌ 30ರಂದು. ಲಾರೆನ್ಸ್‌ ನಝೆತ್‌ ಸ್ಥಾಪಕಾಧ್ಯಕ್ಷರು. 75 ಮಂದಿ ಸದಸ್ಯರಿಂದ ಪ್ರಾರಂಭವಾದ ಈ ಸಂಘದಲ್ಲಿ ಸದ್ಯ 162 ಮಂದಿ ಸದಸ್ಯರಿದ್ದಾರೆ.

18 ವರ್ಷ ಬಾಡಿಗೆ ಕಟ್ಟಡದಲ್ಲಿದ್ದ ಸಂಘಕ್ಕೆ 1992ರಲ್ಲಿ ಕೊನ್ನೆಪದವಿನಲ್ಲಿಯೇ ಸ್ವಂತ ಕಟ್ಟಡ ಭಾಗ್ಯ ಲಭಿಸಿತು. ಪ್ರಾರಂಭದಲ್ಲಿ ಸುಮಾರು 400 ಲೀ. ಹಾಲು ಸಂಗ್ರಹವಾಗುತ್ತಿದ್ದರೆ ಈಗ 1200 ಲೀ. ಹಾಲು ಸಂಗ್ರಹವಾಗುತ್ತಿದೆ. ಮೊದಲು ಕೆನರಾ ಮಿಲ್ಕ್ ಯೂನಿಯನ್‌ಗೆ, ಅನಂತರ ಕೆಎಂಫ್‌ಗೆ ಹಾಲು ನೀಡಲಾಗುತ್ತಿದೆ.

ಅಧ್ಯಕ್ಷರು
ಅಧ್ಯಕ್ಷರು: ಸ್ಥಾಪಕಾಧ್ಯಕ್ಷ ಲಾರೆನ್ಸ್‌ ನಝ್ರೆತ್‌ ಅವರ ಅನಂತರ ವಲೇರಿಯನ್‌ ಕುಟಿನ್ಹಾ, ಸಿಪ್ರಿಯನ್‌ ಸಾಂತ್ಮಯೋರ್‌, ಇ. ಫೆಡ್ರಿಕ್‌ ಪಿಂಟೋ, ಜೆ.ಪಿ. ಕುಲಾಸೋ, ಅಲೆಕ್ಸ್‌ ಲೋಬೋ, ಲಿಯೋ ವಾಲ್ಟರ್‌ ನಝ್ರೆತ್‌, ಮನೋಜ್‌ ಆಲ್ವಾರಿಸ್‌ ಅನಂತರ ಮತ್ತೂಮ್ಮೆ ಲಿಯೋ ವಾಲ್ಟರ್‌ ನಝ್ರೆತ್‌ ಸೇವೆ ಸಲ್ಲಿಸುತ್ತಿದ್ದಾರೆ.

ಕಾರ್ಯದರ್ಶಿ
ಕಾರ್ಯದರ್ಶಿಗಳಾಗಿ ಎ.ಬಿ. ಅಲ್ವಾರಿಸ್‌, ಜಯರಾಮ ರಾವ್‌ ಮತ್ತು ಸಂಘದಲ್ಲಿ ಒಟ್ಟು 32 ವರ್ಷಗಳ ಸೇವಾನುಭವ ಹೊಂದಿರುವ ಶಿವಯ್ಯ ಅವರು 2006ರಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಹಾಲು ಒಕ್ಕೂಟದಿಂದ ನಮ್ಮ ಸದಸ್ಯರಿಗೆ ಸಿಗುವ ಪ್ರಯೋಜನಗಳನ್ನು ಸಮರ್ಪಕವಾಗಿ ನೀಡಲು ಪರಿಶ್ರಮಿಸುತ್ತಿದ್ದೇವೆ. ಸದಸ್ಯರು, ನಿರ್ದೇಶಕರು ಹಾಗೂ ಹಾಲು ಒಕ್ಕೂಟದವರ ಉತ್ತಮ ಸಹಕಾರದಿಂದ ಸಂಘ ಮುನ್ನಡೆಯುತ್ತಿದೆ. ಈಗಿನ ಅವಧಿಯಲ್ಲಿ ನಾವು ಸುವರ್ಣ ಮಹೋತ್ಸವವನ್ನು ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಆಚರಿಸುವ ಸಿದ್ಧತೆಯಲ್ಲಿದ್ದೇವೆ. – ಲಿಯೋ ವಾಲ್ಟರ್‌ ನಝ್ರೆತ್‌, ,ಅಧ್ಯಕ್ಷರು, ಅಧ್ಯಕ್ಷರು, ಕೊನ್ನೆಪದವು ಹಾಲು ಉತ್ಪಾದಕರ ಸಹಕಾರ ಸಂಘ

ಮುಂದಿನ ಉದ್ದೇಶಗಳು
ಬಲ್ಕ್ ಮಿಲ್ಕ್ ಕೂಲರ್‌ ವ್ಯವಸ್ಥೆಯನ್ನು 5,000 ಲೀಟರ್‌ಗೆರಿಸುವ ಚಿಂತನೆ ಇದೆ. ಜತೆಗೆ ಮುಂದೆ ಸುವರ್ಣ ಮಹೋತ್ಸವ ಆಚರಣೆಯನ್ನು ಸೂಕ್ತವಾಗಿ ಏರ್ಪಡಿಸುವ ಯೋಚನೆ ಇದೆ.

ಪ್ರಶಸ್ತಿ
2019ರಲ್ಲಿ ಸಂಘವು “ಉತ್ತಮ ಗುಣಮಟ್ಟದ ಹಾಲಿನ ಸಂಘ’ ಎಂಬ ಮಂಗಳೂರು ತಾಲೂಕು ಮಟ್ಟದ ಪ್ರಶಸ್ತಿ ಗಳಿಸಿದೆ. ಕ್ರಮಬದ್ಧವಾಗಿ ಚುನಾವಣೆ ನಡೆಸಲಾಗುತ್ತಿದೆ.
6 ವರ್ಷಗಳಿಂದ ಸದಸ್ಯರಿಗೆ ಶೇ.25 ಡಿವಿಡೆಂಡ್‌, ಜತೆಗೆ ಶೇ. 65 ಬೋನಸ್‌ ನೀಡಲಾಗುತ್ತಿದೆ.

-  ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.