ಕಿಂಡಿ ಅಣೆಕಟ್ಟು ಉದ್ಘಾಟನೆ
Team Udayavani, Jan 18, 2018, 11:34 AM IST
ತೋಕೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಯೋಜ ನೆಯು ಇಂದು ಗ್ರಾಮೀಣ ಭಾಗದ ಸಂಜೀವಿನಿಯಾಗಿದೆ. ಕುಡಿಯುವ ನೀರಿನ ಆದ್ಯತೆಗೆ ಪಡುಪಣಂಬೂರು ಪಂ. ನರೇಗಾ ಯೋಜನೆಯನ್ನು
ಬಳಸಿಕೊಂಡಿರುವುದು ಮಾದರಿಯಾಗಿದೆ ಎಂದು ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಹೇಳಿದರು. ಪಡುಪಣಂಬೂರು ಗ್ರಾ.ಪಂ.ನ ತೋಕೂರು ದೇವಸ್ಥಾನದ ಬಳಿ ನಿರ್ಮಿಸಿರುವ 4.90 ಲಕ್ಷ ರೂ. ವೆಚ್ಚದ ಕಿಂಡಿಅಣೆಕಟ್ಟು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತ್ನ ಅಧ್ಯಕ್ಷ ಮೋಹನ್ದಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಗ್ರಾಮಸ್ಥರ ವಿಶೇಷ ಸಹಕಾರ ನೀಡಿರುವುದರಿಂದ ಇಂತಹ ಕಿಂಡಿ ಅಣೆಕಟ್ಟು ನಿರ್ಮಿಸಲು ಸಾಧ್ಯವಾಗಿದೆ. ಕುಡಿಯುವ ನೀರಿನ ಬವಣೆಗೆ ಪೂರಕವಾಗಿ ವರ್ಷದ ಹಿಂದೆಯೇ ಈ ಯೋಜನೆಯನ್ನು ರೂಪಿಸಿರುವುದರಿಂದ ಕೃಷಿ ಸಹಿತ ನೀರಿನ ಅಭಾವಕ್ಕೆ ನೆರವು ನೀಡಿದಂತಾಗಿದೆ ಎಂದರು.
ಸಂಘ, ಸಂಸ್ಥೆಗಳ ಸಹಕಾರ
ಸುವರ್ಣ ಮಹೋತ್ಸವದ ವರ್ಷಾಚರಣೆಯಲ್ಲಿರುವ ತೋಕೂರು ಯುವಕ ಸಂಘದ ಸಾಮಾಜಿಕ ಚಟುವಟಿಕೆಯ
ಯೋಜನೆಯಲ್ಲಿ ಹಾಗೂ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್ನ ಸಹಕಾರದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ.
ಗ್ರಾ.ಪಂ. ಉಪಾಧ್ಯಕ್ಷೆ ಸುರೇಖಾ ಕರುಣಾಕರ್, ಸದಸ್ಯರಾದ ಹೇಮಂತ್ ಅಮೀನ್, ಸಂತೋಷ್ ಕುಮಾರ್, ಲೀಲಾ ಬಂಜನ್, ದಿನೇಶ್ ಕುಲಾಲ್, ಹಳೆಯಂಗಡಿ ಪಿಸಿಎ ಬ್ಯಾಂಕ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಸಿ.ಕೋಟ್ಯಾನ್, ಜಿ.ಪಂ. ಮಾಜಿ ಸದಸ್ಯ ಈಶ್ವರ ಕಟೀಲು, ಉದ್ಯಮಿ ಸಂತೋಷ್ ಆರ್. ಶೆಟ್ಟಿ, ತೋಕೂರು ಮಹಿಳಾ ಮಂಡಳಿಯ ಅಧ್ಯಕ್ಷೆ ವಿನೋದಾ ಭಟ್, ವಿಶ್ವಬ್ಯಾಂಕ್ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್, ಗ್ರಾಮಸ್ಥರಾದ ರಮೇಶ್ ದೇವಾಡಿಗ, ಬಶೀರ್ ಕಲ್ಲಾಪು, ವಿಜಯ ಕುಮಾರ್ ರೈ, ದಾಮೋದರ ಶೆಟ್ಟಿ, ವಿಪುಲ್ಲ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿ, ಶೇಖರ್ ಶೆಟ್ಟಿಗಾರ್, ಗೋಪಾಲ ಮೂಲ್ಯ, ಪದ್ಮನಾಭ ಸಾಲ್ಯಾನ್, ಶಂಕರ್ ಪೂಜಾರಿ, ದುರ್ಗಾಪ್ರಸಾದ್ ಶೆಟ್ಟಿ, ಪರಮೇಶ್ವರ ಶೆಟ್ಟಿಗಾರ್, ಮಧುಸೂಧನ್, ಯಶೋಧಾ ಪಿ. ರಾವ್, ಪುಷ್ಪಾ ಕೆ., ಸಂಶುದ್ದಿನ್, ಸಲಾವುದ್ದಿನ್, ಪ್ರಿಯದರ್ಶಿನಿ, ಪಂಚಾಯತ್ ಸಿಬಂದಿ ಅಭಿಜಿತ್ ಮತ್ತಿತರರು ಉಪಸ್ಥಿತರಿದ್ದರು. ತೋಕೂರು ಯುವಕ ಸಂಘದ ಅಧ್ಯಕ್ಷ ಹರಿದಾಸ್ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ