ಮಾರ್ಚ್ 12 ಕುಕ್ಕೆಯಲ್ಲಿ ಸರಳ ಸಾಮೂಹಿಕ ವಿವಾಹ ‘ಸಪ್ತಪದಿ’
Team Udayavani, Jan 10, 2023, 7:20 AM IST
ಸುಬ್ರಹ್ಮಣ್ಯ : ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ. 12ರಂದು ಸರಳ ಸಾಮೂಹಿಕ ವಿವಾಹ “ಸಪ್ತಪದಿ’ ನಡೆಯಲಿದೆ.
ವಿವಾಹವಾಗಲು ಬಯಸುವವರು ದೇವಸ್ಥಾನದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಫೆ. 15ರೊಳಗೆ ಮರಳಿಸಬೇಕು. ವಿವಾಹಕ್ಕೆ ಆಗಮಿಸುವ ಬಂಧುಗಳಿಗೆ, ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆ ಇರಲಿದೆ. ಹೆಚ್ಚಿನ ಮಾಹಿತಿಗೆ 08257-281224 ಕರೆ ಮಾಡ ಬಹುದು ಎಂದು ಪ್ರಕಟನೆ ತಿಳಿಸಿದೆ.
ಸಹಾಯಹಸ್ತ
ವರನಿಗೆ ಹೂವಿನ ಹಾರ, ಪಂಚೆ, ಅಂಗಿ, ಶಲ್ಯ, ಪೇಟ, ಬಾಸಿಂಗ ಇತ್ಯಾದಿಗಳಿಗಾಗಿ ದೇವಸ್ಥಾನದಿಂದ 5 ಸಾವಿರ ರೂ. ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ 10 ಸಾವಿರ ರೂ. ನೀಡಲಾಗುವುದು. 40 ಸಾವಿರ ರೂ. ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡುಗಳನ್ನು ನೀಡಲಾಗುವುದು.
ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಒದಗಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ