ಕಡಬ ಸರಸ್ವತೀ ವಿದ್ಯಾಲಯ: ಮೈನವಿರೇಳಿಸಿದ ಸಾಂಸ್ಕೃತಿಕ ವೈಭವ


Team Udayavani, Dec 15, 2019, 9:57 PM IST

SARASWATHI-2

ಕಡಬ: ಕಡಬದ ಹನುಮಾನ್‌ ನಗರ (ಕೇವಳ) ದಲ್ಲಿರುವ ಸರಸ್ವತೀ ಪದವಿ ಪೂರ್ವ ವಿದ್ಯಾಲಯದ ವಠಾರದಲ್ಲಿ ಶನಿವಾರ ರಾತ್ರಿ ಜರಗಿದ ಸರಸ್ವತೀ ವಿದ್ಯಾಲಯದ ವಾರ್ಷಿಕ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ವೈಭವ ಜನರ ಮನಸೂರೆಗೊಳಿಸಿತು. ಸಾಹಸ ಕಸರತ್ತುಗಳು ರೋಮಾಂಚನಗೊಳಿಸಿದವು.

ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ, ಕರಾಟೆ, ಮಲ್ಲಕಂಬ, ದೊಂದಿ ಪ್ರದರ್ಶನದೊಂದಿಗೆ ಬಕಾಸುರ ವಧೆ ಯಕ್ಷರೂಪಕ, ದ್ವಿಚಕ್ರ ಸಮತೋಲನ, ದೇಶ ಭಕ್ತಿಗೀತೆ, ಶಿಶು ನೃತ್ಯ, ಕೋಲಾಟ, ಯೋಗಾಸನ, ಜನಪದ ಗೀತೆ, ವೀರಗಾಸೆ, ದೀಪಾರತಿ, ಕೂಪಿಕಾ, ಹಾಡಿನ ಜತೆಗೆ ವಿದ್ಯಾರ್ಥಿಗಳಿಂದ ಕುಂಚದಲ್ಲಿ ವೀರ ಸಾವರ್ಕರ್‌ ವರ್ಣಚಿತ್ರ ರಚನೆ, ಜಲಿಯನ್‌ವಾಲಾ ಭಾಗ್‌ ಹತ್ಯಾಕಾಂಡದ ಕಿರುನಾಟಕ, ಕುಣಿತ ಭಜನೆ ಹಾಗೂ ವಿದ್ಯಾರ್ಥಿಗಳಿಂದ ಸಾಹಸ ಪ್ರದರ್ಶನ ಜರಗಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಎಂ. ಕೃಷ್ಣ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಕೃಷ್ಣ ಶೆಟ್ಟಿ ಕಡಬ, ಬೆಂಗಳೂರಿನ ಉದ್ಯಮಿ ಮಾಧವ ಗೌಡ ಕತ್ಲಡ್ಕ, ಮೈಸೂರಿನ ಉದ್ಯಮಿ ದಿವಾಕರ ದಾಸ್‌, ಖ್ಯಾತ ವಕೀಲ ಮಹೇಶ್‌ ಕಜೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಡಬದ ಉದ್ಯಮಿ ಸುಂದರ ಗೌಡ ಮಂಡೆಕರ, ಡಾ| ಸೌಮ್ಯಾ ಪ್ರಸಾದ್‌ ಕೋಡಿಂಬಾಳ, ಹಾಸನದ ರಂಗೇಗೌಡ, ಆರೆಸ್ಸೆಸ್‌ ಜಿಲ್ಲಾ ಕಾರ್ಯವಾಹ ಸುಭಾಶ್ಚಂದ್ರ ಕಳಂಜ, ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಂಗಯ್ಯ ಶೆಟ್ಟಿಗಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಬೆಂಗಳೂರಿನ ಉದ್ಯಮಿ ರಂಜಿತ್‌, ಕಡಬ ಸಿ.ಎ. ಬ್ಯಾಂಕ್‌ ಅಧ್ಯಕ್ಷ ರಮೇಶ್‌ ಕಲ್ಪುರೆ ಅಭ್ಯಾಗತರಾಗಿದ್ದರು.

ಶ್ರೀ ಭಾರತಿ ಶಿಶು ಮಂದಿರದ ಅಧ್ಯಕ್ಷ ಪ್ರಕಾಶ್‌ ಎನ್‌.ಕೆ., ವ್ಯವಸ್ಥಾಪಕಿ ಸವಿತಾ ಶಿವಸುಬ್ರಹ್ಮಣ್ಯ ಭಟ್‌, ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಹೇಶ್‌ ನಿಟಿಲಾಪುರ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶೈಲಶ್ರೀ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮಾಧವ ಕೋಲ್ಪೆ ಉಪಸ್ಥಿತರಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿದ್ಯಾಲಯದ ಸಂಚಾಲಕ ಮಂಕುಡೆ ವೆಂಕಟ್ರಮಣ ರಾವ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕಿ ಪ್ರೇಮಲತಾ ನಿರೂಪಿಸಿದರು. ಉಪನ್ಯಾಸಕ ನಾಗರಾಜ್‌, ಶಿಕ್ಷಕರಾದ ಶಿವಪ್ರಸಾದ್‌ ಹಾಗೂ ಲಕ್ಷ್ಮೀಶ ಆರಿಗ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವಿದ್ಯಾಲಯದ ಅಧ್ಯಕ್ಷ ರವಿರಾಜ ಶೆಟ್ಟಿ ಕಡಬ ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.