ರಾಜೀನಾಮೆ ವಾಪಸ್ಗೆ ಆಗ್ರಹ; ಒಲ್ಲದ ಸೆಂಥಿಲ್
Team Udayavani, Sep 9, 2019, 5:56 AM IST
ಮಂಗಳೂರು: ಶಶಿಕಾಂತ್ ಸೆಂಥಿಲ್ ಅವರನ್ನು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಿತೈಷಿಗಳು ರವಿವಾರ ಜಿಲ್ಲಾಧಿಕಾರಿ ಬಂಗಲೆ ಯಲ್ಲಿ ಭೇಟಿ ಮಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಆಗ್ರಹಿಸಿದರು.
ರಾಜೀನಾಮೆ ಹಿಂದೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸೆಂಥಿಲ್, ನಾನು ನಂಬಿದ ತಣ್ತೀ ಸಿದ್ಧಾಂತಗಳಿಗೆ ವಿರುದ್ಧವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜೀನಾಮೆ ಬಳಿಕ ಅವರು ಶುಕ್ರವಾರ, ಶನಿವಾರ ಯಾರ ಸಂಪರ್ಕಕ್ಕೂ ಲಭಿಸಿರಲಿಲ್ಲ. ಶನಿವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ನೂತನ ಜಿಲ್ಲಾಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು. ರವಿವಾರ ಜಿಲ್ಲಾಧಿಕಾರಿ ಬಂಗ್ಲೆಯಲ್ಲಿದ್ದರು.
ಇಂದು ಚೆನ್ನೈಗೆ?
ರವಿವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಅಧಿಕಾರಿಗಳು, ಹಿತೈಷಿಗಳೊಂದಿಗೆ ಮಾತುಕತೆ ನಡೆಸಿರುವ ಸೆಂಥಿಲ್ ಸಂಜೆ ಖಾಸಗಿ ಕಾರಿನಲ್ಲಿ ಬಂಗಲೆಯಿಂದ ತೆರಳಿದ್ದರು. ಹುಟ್ಟೂರು ಚೆನ್ನೈಗೆ ಸೋಮ ವಾರ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೆಲವೇ ದಿನಗಳಲ್ಲಿ ತೀರ್ಮಾನ
ಹಿತೈಷಿಗಳ ಜತೆಗೆ ಮಾತನಾಡಿರುವ ಸೆಂಥಿಲ್ ಮುಂದಿನ ಕಾರ್ಯಯೋಜನೆಯ ಬಗ್ಗೆ ಕೆಲವೇ ದಿನದಲ್ಲಿ ನಿರ್ಧಾರ ಕೈಗೊಳ್ಳಲಿದ್ದು, ಮತ್ತೆ ಕರ್ನಾಟಕಕ್ಕೆ ಬರುವ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಗಳಿಗೆ ಉತ್ತರಿಸಲಾರೆ
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸೆಂಥಿಲ್, ಆರೋಪಗಳಿಗೆ ತಲೆಕೆಡಿಸುವುದಿಲ್ಲ. ಪ್ರಾಮಾಣಿಕವಾಗಿ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿರುವ ವಿಶ್ವಾಸ ನನಗಿದೆ. ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ಮರಳುಗಾರಿಕೆ ವಿರುದ್ಧ ಕಠಿನ ಕ್ರಮ ಕೈಗೊಂಡಿರುವುದು ನಿಜ. ಅದು ಒಪ್ಪಿಗೆಯಾಗದ ಕೆಲವರು ಈಗ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲ ಉತ್ತರಿಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ