ಕೇರಳ ಗಡಿಯಲ್ಲೂ ಸ್ಯಾಟಲೈಟ್‌ ಫೋನ್‌ ಬಳಕೆ ಹೆಚ್ಚಳ? ಗುಪ್ತಚರ ಇಲಾಖೆಗೆ ತಲೆನೋವು


Team Udayavani, Jan 8, 2023, 7:57 AM IST

ಕೇರಳ ಗಡಿಯಲ್ಲೂ ಸ್ಯಾಟಲೈಟ್‌ ಫೋನ್‌ ಬಳಕೆ ಹೆಚ್ಚಳ? ಗುಪ್ತಚರ ಇಲಾಖೆಗೆ ತಲೆನೋವು

ಮಂಗಳೂರು/ಕಾಸರಗೋಡು: ಇದುವರೆಗೆ ಕರಾ ವಳಿಯ ಹಲವೆಡೆ ಸದ್ದು ಮಾಡುತ್ತಿದ್ದ ನಿಷೇಧಿತ ಸ್ಯಾಟಲೈಟ್‌ ಫೋನ್‌ ಈಗ ಕೇರಳ-ಕರ್ನಾಟಕ ಗಡಿಭಾಗದಲ್ಲೂ ರಿಂಗಣಿಸುತ್ತಿ ರುವುದು ಭದ್ರತ ಪಡೆಗಳಿಗೆ ಸವಾಲಾಗಿ ಪರಿಣಮಿಸಿದೆ.

ಗುರುವಾರ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕು ಎಣ್ಮಕಜೆ ಪಂಚಾಯತ್‌ನ ಸ್ವರ್ಗ, ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯ ಒಂದು ಕಿ.ಮೀ. ಪ್ರದೇಶ ವ್ಯಾಪ್ತಿಯಲ್ಲಿ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಪತ್ತೆಯಾಗಿರುವ ಬಗ್ಗೆ ವರದಿಯಾಗಿತ್ತು. ಈಗಾಗಲೇ ಕೇರಳದ ಸ್ಪೆಷಲ್‌ ಬ್ರಾಂಚ್‌ ಪೊಲೀಸರು ಇದರ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಈ ಮಧ್ಯೆ ಕೇರಳ-ಕರ್ನಾಟಕದ ಗಡಿಯಲ್ಲಿನ ಬಂಟಾಜೆ, ಕೇರಳದ ಪರಪ್ಪ ರೇಂಜ್‌ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಪ್ರದೇಶದಲ್ಲೂ ಸ್ಯಾಟಲೈಟ್‌ ಫೋನ್‌ ಬಳಸುತ್ತಿರಬಹುದೆಂದು ಶಂಕಿಸಲಾಗಿದೆ.

ಕೆಲವು ವರ್ಷಗಳಿಂದ ದಕ್ಷಿಣ ಕನ್ನಡ, ಉಡುಪಿಯ ಕಾಡಂಚಿನ ಭಾಗಗಳಲ್ಲಿ ಕೆಲವೊಮ್ಮೆ ನಿಷೇಧಿತ ತುರಾಯಾ ಸ್ಯಾಟಲೈಟ್‌ ಫೋನ್‌ ಕರೆಗಳು ಬರುತ್ತಿರುವುದನ್ನು ಗುಪ್ತಚರ ಇಲಾಖೆ ಗಮನಿಸಿತ್ತು. ಆದರೆ ಇದರ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಕೇಂದ್ರೀಯ ಗುಪ್ತಚರ ಇಲಾಖೆ ತನಿಖೆ ಕೈಗೊಂಡಿರುವುದು ಬಿಟ್ಟರೆ ಇದುವರೆಗೆ ಬೇರೆ ಮಾಹಿತಿ ಬಹಿರಂಗಪಡಿಸಿಲ್ಲ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರು ಈ ಸಂಬಂಧ ಪ್ರತಿಕ್ರಿಯಿಸಿದ್ದು, ಗುರುವಾರ ನಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ಸ್ಯಾಟಲೈಟ್‌ ಫೋನ್‌ ಕರೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಿಲ್ಲ ಎಂದು ಖಚಿತಪಡಿಸಿದ್ದಾರೆ.

ಮಂಗಳೂರಿನ ಕಂಕನಾಡಿ ಬಳಿ ನ. 19ರಂದು ಕುಕ್ಕರ್‌ ಬಾಂಬ್‌ ಸ್ಫೋಟ ಸಂಭವಿಸಿತ್ತು. ಅದಕ್ಕೆ ಒಂದು ದಿನ ಮೊದಲು ಬಂಟ್ವಾಳ ಬಳಿಯ ಕಕ್ಕಿಂಜೆ ಅರಣ್ಯ ಪ್ರದೇಶದಲ್ಲಿ ತುರಾಯಾ ಸ್ಯಾಟಲೈಟ್‌ ಫೋನ್‌ ಕ್ರಿಯಾಶೀಲವಾಗಿತ್ತು. ಅಲ್ಲದೇ ಕಕ್ಕಿಂಜೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 2 ಕಡೆಗಳಲ್ಲಿ, ಉಡುಪಿಯ ಒಂದು ಕಡೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್‌ ಫೋನ್‌ ರಿಂಗಣಿಸಿತ್ತು. ನವೆಂಬರ್‌ನಲ್ಲಿ 15 ದಿನಗಳ ಅಂತರದಲ್ಲಿ ನಾಲ್ಕು ಕಡೆಗಳಿಂದ ಸ್ಯಾಟಲೈಟ್‌ ಫೋನ್‌ ಬಳಸಲಾಗಿದೆ ಎನ್ನಲಾಗಿದೆ.

ಇದಕ್ಕೆ ಮೊದಲು ಜೂನ್‌ ತಿಂಗಳಲ್ಲಿ ಮಂಗಳೂರು ಹೊರವಲಯದ ನಾಟೆಕಲ್‌, ಕುಳಾಯಿ ಹಾಗೂ ಉತ್ತರ ಕನ್ನಡದ ಯಲ್ಲಾಪುರದ ನಾಲ್ಕು ಕಡೆ ಸ್ಯಾಟಲೈಟ್‌ ಫೋನ್‌ ಸಿಗ್ನಲ್‌ ಸಂಪರ್ಕವಾಗಿರುವುದು ಪತ್ತೆಯಾಗಿತ್ತು. ಮೊಬೈಲ್‌ ಫೋನ್‌ನಲ್ಲಾದರೆ ಟವರ್‌ ಲೊಕೇಶನ್‌ ಹಿಡಿದುಕೊಂಡು ತನಿಖೆ ನಡೆಸುವುದು ಸುಲಭ. ಆದರೆ ಸ್ಯಾಟಲೈಟ್‌ ಫೋನ್‌ ನೇರ ಉಪಗ್ರಹ ಮೂಲಕ ಕರೆಬರುವುದು ಹಾಗೂ ಇವುಗಳ ಸಂಸ್ಥೆಗಳು ವಿದೇಶಿ ಕಂಪೆನಿಗಳಾಗಿರುವುದು ಭಾರತೀಯ ಬೇಹು ಸಂಸ್ಥೆಗಳ ತನಿಖೆಗೆ ಕೊಂಚ ಅಡ್ಡಿಯಾಗಿದೆ.

ಸ್ವರ್ಗದಲ್ಲಿ ಇಂಟೆಲಿಜೆನ್ಸ್‌
ನಿಗಾ ಇರಿಸಿದೆ.ದ.ಕ. ವ್ಯಾಪ್ತಿಯಲ್ಲಿ ಗುರುವಾರ ಸ್ಯಾಟಲೈಟ್‌ ಫೋನ್‌ ಕರೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ

-ಹೃಷಿಕೇಶ್‌ ಸೋನಾವಣೆ, ಎಸ್ಪಿ, ದ.ಕ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.