ಕರಾವಳಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಕರೆ?
Team Udayavani, Jan 19, 2021, 2:30 AM IST
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಿಷೇಧಿತ “ತುರಾಯ’ ಸ್ಯಾಟಲೈಟ್ ಫೋನ್ ಬಳಸಿ ಮಾತುಕತೆ ನಡೆಸಿರುವ ಬಗ್ಗೆ ಮತ್ತೆ ಅನುಮಾನ ಮೂಡಿದೆ.
ದ.ಕ., ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಬಗ್ಗೆ ಲೊಕೇಶನ್ ಪತ್ತೆಯಾಗಿದೆ ಎನ್ನಲಾಗಿದ್ದು, 10 ದಿನಗಳಲ್ಲಿ 3 ಬಾರಿ ಬಳಸಲಾಗಿದೆ ಎಂಬ ಮಾಹಿತಿ ಗುಪ್ತಚರ ತನಿಖಾ ತಂಡ “ರಾ’ಗೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಕಳೆದ ಜೂ. 23ರಂದು ಇದೇರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಭಯೋತ್ಪಾದಕ ಚಟುವಟಿಕೆ ಸಂಬಂಧಿಸಿ ಈ ರೀತಿ ಸ್ಯಾಟಲೈಟ್ ಫೋನ್ಗಳನ್ನು ಬಳಸುವ ಸಾಧ್ಯತೆ ಗಳಿರುತ್ತವೆ ಎಂದು ಹೇಳಲಾಗುತ್ತಿದ್ದು, ಗುಪ್ತಚರ ಇಲಾಖೆಗಳು ಈ ಬಗ್ಗೆ ವಿಶೇಷ ನಿಗಾ ವಹಿಸಿ ತನಿಖೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.
ಬಂಟ್ವಾಳ ಪ್ರದೇಶ ದಲ್ಲಿ ಸ್ಯಾಟಲೈಟ್ ಫೋನ್ ಸಿಗ್ನಲ್ ಲಭ್ಯವಾಗಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ಐಎಸ್ಡಿಯಿಂದ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಲಾಗುವುದು. ಈಗ ನಾನು ಕರಾವಳಿ ಭಾಗದಲ್ಲಿಯೇ ಇದ್ದು, ಕೂಡಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು– ಭಾಸ್ಕರ ರಾವ್ ಎಡಿಜಿಪಿ, ಆಂತರಿಕಾ ಭದ್ರತಾ ದಳ (ಐಎಸ್ಡಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ