ದ.ಕ.: ನಾಳೆಯಿಂದ ಪ್ರತೀ ಶನಿವಾರ ಪೂರ್ತಿ ತರಗತಿ
ಮಳೆಯ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯಿಂದ ಈ ಕ್ರಮ
Team Udayavani, Aug 23, 2019, 3:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಧಿಸಿದ ಭಾರೀ ಮಳೆ ಮತ್ತು ಪ್ರವಾಹ ಸ್ಥಿತಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರಿಂದ ಉಂಟಾಗಿರುವ ತರಗತಿ ಕೊರತೆಯನ್ನು ಭರ್ತಿ ಮಾಡುವ ಉದ್ದೇಶದಿಂದ ಇನ್ನು ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ ಶಿಕ್ಷಣ ಇಲಾಖೆಯು ಸಂಬಂಧಿಸಿದ ಶಾಲೆಗಳಿಗೆ ಸೂಚನೆ ನೀಡಿದೆ.
ಈ ವಿಶೇಷ ತರಗತಿಗಳು ಆಗಸ್ಟ್ 24ರಿಂದಲೇ ಪ್ರಾರಂಭಗೊಳ್ಳಲಿದೆ. ಆದರೆ ರವಿವಾರ ಯಾವುದೇ ತರಗತಿಗಳು ನಡೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಡಿ.ಡಿ.ಪಿ.ಐ. ವೈ. ಶಿವರಾಮಯ್ಯ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಒಟ್ಟು 13 ಶನಿವಾರ, ಉಳಿದ ಕಡೆಗಳಲ್ಲಿ 12 ಶನಿವಾರ ಮಧ್ಯಾಹ್ನದ ತರಗತಿಗಳು ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಕಾಣಿಸಿಕೊಂಡಿದ್ದ ಕಾರಣ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಢಿಲ್ ಅವರು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ ತಿಂಗಳ ಪ್ರಾರಂಭದಲ್ಲಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ