ನಿತ್ಯ ಕಲಿತು ಕಲೆಯನ್ನು ಉಳಿಸಿ: ಡಾ| ಹೆಗ್ಗಡೆ


Team Udayavani, Aug 23, 2017, 7:00 AM IST

Veerendra-Heggade-650.jpg

ಬೆಳ್ತಂಗಡಿ: ಯಕ್ಷಗಾನ ಕಲಾವಿದರು ಪರಕಾಯ ಪ್ರವೇಶ ಮಾಡಿ ಪಾತ್ರಗಳಿಗೆ ಜೀವಂತಿಕೆ ತುಂಬುವ ಪ್ರಯತ್ನ ಮಾಡಬೇಕು. ನಿತ್ಯವೂ ಕಲಿತು ಕಲೆಯನ್ನು ಉಳಿಸಿ ಬೆಳೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಸಂಜೆ ಧರ್ಮಸ್ಥಳದಲ್ಲಿ ಸುರತ್ಕಲ್‌ನ ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌ ಆಶ್ರಯದಲ್ಲಿ ಆಯೋಜಿಸಲಾದ ಶೇಣಿ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೇಣಿ ಅವರ ವಾಕ್‌ ಚಾತುರ್ಯದಿಂದ ಯಕ್ಷಗಾನ ಕಲೆಯ ದಿಗ್ಗಜರಾಗಿ ಮೆರೆದರು, ವಿಜೃಂಭಿಸಿದರು. ಇಂತಹ ಶ್ರೇಷ್ಠ ಕಲಾವಿದರಿಂದಾಗಿ ಕೌತುಕ ವಾಗಿದ್ದ ಯಕ್ಷಗಾನ ಬೌದ್ಧಿಕವಾಗಿ ಪ್ರಬುದ್ಧರಾದ ಹಾಗೂ ವಿಮರ್ಶಕರಾದ ಅಭಿಮಾನಿಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು ಎಂದು ಹೇಳಿದರು. ಧರ್ಮಸ್ಥಳ ಮೇಳದಲ್ಲಿ  ಶೇಣಿಯವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಹರಿದಾಸ ಗಂಭೀರ, ಪಿ.ವಿ. ರಾವ್‌ ಮತ್ತು ಭುಜಬಲಿ ಧರ್ಮಸ್ಥಳ ಅಭಿನಂದನ ಭಾಷಣ ಮಾಡಿದರು. ಹಿರಿಯ ಯಕ್ಷಗಾನ ಕಲಾವಿದ ಎಂ. ಕೆ. ರಮೇಶ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು.

ಸಮ್ಮಾನಕ್ಕೆ  ಕೃತಜ್ಞತೆ ವ್ಯಕ್ತಪಡಿಸಿದ ಎಂ. ಕೆ . ರಮೇಶ ಆಚಾರ್ಯ ಯಕ್ಷಗಾನ ರಂಗದಲ್ಲಿ ತನಗೆ ನೋವಿಗಿಂತ ಹೆಚ್ಚು ನಲಿವೇ ಸಿಕ್ಕಿದೆ. ಆರ್ಥಿಕ ಸಂಗ್ರಹಕ್ಕಿಂತಲೂ ಸಜ್ಜನರ ಅಭಿಮಾನ ಮತ್ತು ಪ್ರೋತ್ಸಾಹ ಪಡೆದಿರುವುದು ತನಗೆ ಅತ್ಯಂತ ತೃಪ್ತಿ ಮತ್ತು ಸಂತೋಷವನ್ನುಂಟುಮಾಡಿದೆ ಎಂದವರು ತಿಳಿಸಿದರು. ತಾನು ಶೇಣಿ ಒಡನಾಡಿಯಾಗಿ 19 ವರ್ಷಗಳ ಕಾಲ ಕಲಾ ಸೇವೆ ಮಾಡಿರುವುದನ್ನು ಸ್ಮರಿಸಿದ ಅವರು ಶೇಣಿ ಯಕ್ಷಗಾನ ರಂಗದ ಶಕ ಪುರುಷ ಎಂದು ಬಣ್ಣಿಸಿದರು. ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್‌ ಸ್ವಾಗತಿಸಿದರು. ಹರಿಕೃಷ್ಣ  ಪುನರೂರು ವಂದಿಸಿದರು. ಬಳಿಕ ‘ಸತ್ಯ ಹರಿಶ್ಚಂದ್ರ’ ಯಕ್ಷಗಾನ ಬಯಲಾಟ ನಡಯಿತು.

ಕಲೆಗೆ ಮೌಲ್ಯ ತುಂಬಿದ್ದ ಶೇಣಿ
ಕಲಾವಿದರು ಪರಕಾಯ ಪ್ರವೇಶ ಮಾಡಿ ಆ ಪಾತ್ರವಾಗಿಯೇ ರಂಗಸ್ಥಳಕ್ಕೆ ಬರಬೇಕು. ಪಾತ್ರಧಾರಿಯಾಗುವ ಬದಲು ಪಾತ್ರವಾಗಿಯೇ ಮಾತನಾಡಬೇಕು, ಅಭಿನಯಿಸಬೇಕು. ಹರಿಕಥೆ, ತಾಳಮದ್ದಳೆ ಹಾಗೂ ಯಕ್ಷಗಾನದಲ್ಲಿ ಪರಿಣತರಾಗಿ ಅಪಾರ ಪಾಂಡಿತ್ಯ ಮತ್ತು ಪ್ರೌಢ ಅನುಭವ ಹೊಂದಿದ ಶೇಣಿ ಗೋಪಾಲಕೃಷ್ಣ ಭಟ್‌ ಯಕ್ಷಗಾನ ಕಲೆಗೆ ಮೌಲ್ಯ ತುಂಬಿದರು.
– ಡಾ| ವೀರೇಂದ್ರ ಹೆಗ್ಗಡೆ, ಧರ್ಮಾಧಿಕಾರಿ

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.