ಮಾತೃಭಾಷೆ ಉಳಿಸಿ, ಬೆಳೆಸಿ: ಶಕುಂತಳಾ


Team Udayavani, Nov 2, 2017, 11:57 AM IST

2-Mng-5.jpg

ಪುತ್ತೂರು: ಬೆಂಗಳೂರು, ಮಂಗಳೂರಿನಲ್ಲೂ ಕನ್ನಡ, ತುಳು ಮಾಯವಾಗುತ್ತಿದೆ. ಇದೇ ರೀತಿ ಮುಂದುವರಿದರೆ
ಕರ್ನಾಟಕದಲ್ಲೇ ನಾವು ಪರಕೀಯರಾಗಿ ಬಾಳುವ ಸ್ಥಿತಿ ಬಂದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಖೇದ ವ್ಯಕ್ತಪಡಿಸಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಆಶ್ರಯದಲ್ಲಿ ಪುತ್ತೂರು ಪುರಭವನದಲ್ಲಿ ಬುಧವಾರ
ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಇವತ್ತು ಬೆಂಗಳೂರಿನಲ್ಲಿ ಹೋಗಿ ಕನ್ನಡ ಹುಡುಕುವ ಸ್ಥಿತಿ ಇದೆ. ಮಂಗಳೂರಿನಲ್ಲಿ ಹೋಗಿ ತುಳು ಹುಡುಕುವ ಸ್ಥಿತಿ ಇದೆ. ಮುಂದೊಂದು ದಿನ ಈ ರಾಜ್ಯದಲ್ಲಿ ಕರ್ನಾಟಕವನ್ನೇ ಹುಡುಕುವ ಸ್ಥಿತಿ ಬಾರದಂತೆ ಎಚ್ಚರ ವಹಿಸಬೇಕಾದ ಅಗತ್ಯವಿದೆ. ಹಿರಿಯರು ಕನ್ನಡಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಇನ್ನು ಕೂಡ ಹಿರಿಯರಿಂದಲೇ ಕನ್ನಡದ
ಸೇವೆ ನಿರೀಕ್ಷಿಸಲಾಗದು. ಅದೇ ರೀತಿ ಮುಂದಿನ ಪೀಳಿಗೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಬೆಳೆಸುವ ಮಕ್ಕಳನ್ನು ತಯಾರು ಮಾಡಬೇಕಿದೆ ಎಂದರು.

ಮಾತೆಯರಿಂದ ರಕ್ಷಣೆ ಸಾಧ್ಯ
ವಕೀಲ ಮಹೇಶ್‌ ಕಜೆ ಮಾತನಾಡಿ, ಕನ್ನಡ ಭಾಷೆ, ಕನ್ನಡ ಸಂಸ್ಕೃತಿ ಮತ್ತು ಕನ್ನಡತನವನ್ನು ಸಂರಕ್ಷಿಸಲು ಸಾಧ್ಯವಿದೆ
ಎಂದಾದರೆ ಅದು ಮಾತೆಯರಿಂದ ಮಾತ್ರ ಸಾಧ್ಯ. ಮಕ್ಕಳಿಗೆ ಕನ್ನಡ ಸಂಸ್ಕೃತಿಯನ್ನು ಉಣ ಬಡಿಸುವ ಮೂಲಕ ಎಳವೆಯಲ್ಲೇ ಕನ್ನಡತನ ಮೂಡಿಸಲು ಸಾಧ್ಯವಿದೆ ಎಂದರು. ಕನ್ನಡ ನಾಡು ಎಂಬುದು ಕೇವಲ ಮಣ್ಣಲ್ಲ. ಅನುಭವಿಸಿದವರಿಗೆ ಅದು ಹೃದಯದ ತುಡಿತ. ಅಂತರ್‌ ದೃಷ್ಟಿಯಿಂದ ನೋಡಿದರೆ ಕರ್ನಾಟಕ ಎಂಬುದು ಒಂದು ದಿವ್ಯ ಮಂತ್ರ ಎಂದರು.

ಆಗಸ್ಟ್‌ 15ರಂದು ನಮಗೆ ಸಿಕ್ಕಿದ ಸ್ವಾತಂತ್ರ್ಯ ಸಂಭ್ರಮದ ಜತೆಗೆ ವಿಭಜನೆಯ ನೋವನ್ನೂ ನೀಡಿತು. ಆದರೆ ಕನ್ನಡ ರಾಜ್ಯೋತ್ಸವದ ನವೆಂಬರ್‌ ಒಂದು ಕೇವಲ ಏಕೀಕರಣದ ಸಂಭ್ರಮ ನೀಡಿತು. ಕರ್ನಾಟಕವನ್ನು ಕಟ್ಟುವುದು ಗಡಿಯಿಂದಲ್ಲ, ಹೋರಾಟ, ಹಾರಾಟದಿಂದಲ್ಲ. ಕನ್ನಡದ ಪುಟ್ಟ ಪುಟ್ಟ ಮನಸ್ಸುಗಳನ್ನು ಕಟ್ಟುವ ಮೂಲಕ ಕನ್ನಡತನ ಉಳಿಸಲು ಸಾಧ್ಯ ಎಂದರು. 

ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌, ಪುತ್ತೂರು ನಗರ ಯೋಜನ ಪ್ರಾ ಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ಸಾಂದರ್ಭಿಕವಾಗಿ ಮಾತನಾಡಿದರು. ತಹಶೀಲ್ದಾರ್‌ ಅನಂತ ಶಂಕರ್‌, ನಗರಸಭೆ ಪೌರಾಯುಕ್ತೆ ರೂಪಾ ಶೆಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್‌ ಶ್ರೀಧರ್‌ ಕೋಡಿಜಾಲ್‌ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ
ವಂದಿಸಿದರು.

ರಾಜ್ಯೋತ್ಸವದ ಮೆರವಣಿಗೆ
ಸಭಾ ಕಾರ್ಯಕ್ರಮಕ್ಕೆ ಮೊದಲು ದರ್ಬೆ ವೃತ್ತದಿಂದ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಯಿತು. ಹಿರಿಯ ಸಾಹಿತಿ, ವಕೀಲರಾದ ಬಿ. ಪುರಂದರ ಭಟ್‌ ಮೆರವಣಿಗೆಗೆ ಚಾಲನೆ ನೀಡಿದರು. ಕನ್ನಡ ಭುವನೇಶ್ವರಿ ಮಂಟಪ, ಶಾಲಾ ಕಾಲೇಜು ಮಕ್ಕಳ ಸ್ಕೌಟ್ಸ್‌, ಗೈಡ್ಸ್‌, ರೋವರ್, ಚೆಂಡೆ ಇತ್ಯಾದಿಗಳು ಮೆರವಣಿಗೆಯಲ್ಲಿ ಸಾಗಿಬಂದಿತು. 

ಟಾಪ್ ನ್ಯೂಸ್

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.