ಮೊಡಂಕಾಪು ಪ.ಜಾ.-ಪಂ. ಬಾಲಕರ ಹಾಸ್ಟೆಲ್‌ ಕಟ್ಟಡ ಶಿಥಿಲ

5 ದಶಕ ಹಳೆಯ ಕಟ್ಟಡ; ಪಂಚಾಂಗ-ಗೋಡೆಗಳಲ್ಲಿ ಬಿರುಕು

Team Udayavani, Oct 19, 2019, 4:33 AM IST

l-16

ಮೊಡಂಕಾಪು ಪ. ಜಾತಿ-ಪಂಗಡದ ಬಾಲಕರ ಹಾಸ್ಟೆಲ್‌ನ ಶಿಥಿಲ ಕಟ್ಟಡ.

ಕಲ್ಲಡ್ಕ: ಐದು ದಶಕಗಳ ಪೂರ್ವದಲ್ಲಿ ನಿರ್ಮಾಣಗೊಂಡ, ಬಂಟ್ವಾಳ ಸಮಾಜ ಕಲ್ಯಾಣ ಇಲಾಖೆಯ ಸುಪರ್ದಿಯಲ್ಲಿರುವ ಮೊಡಂಕಾಪು ಪ. ಜಾತಿ-ಪಂಗಡದ ಬಾಲಕರ ಹಾಸ್ಟೆಲ್‌ ಕಟ್ಟಡ ಶಿಥಿಲವಾಗಿ ಅಪಾಯ ಆಹ್ವಾನಿಸುತ್ತಿದ್ದರೂ ಅಧಿಕಾರಿಗಳಿಂದ ಸುಣ್ಣಬಣ್ಣದ ನಿರ್ವಹಣೆ ಮುಂದುವರಿದಿದೆ.

ಕಟ್ಟಡದ ಪಂಚಾಂಗದಲ್ಲಿ, ಗೋಡೆಗಳಲ್ಲಿ ಬಿರುಕುಗಳಿವೆ. ಜೋರು ಮಳೆ ಬಂದರೆ ಛಾವಣಿ ಸೋರುತ್ತದೆ. 55 ವಿದ್ಯಾರ್ಥಿಗಳಿರುವ ಈ ಹಾಸ್ಟೆಲ್‌ ಕಟ್ಟಡ ದುಃಸ್ಥಿತಿಯಲ್ಲಿದ್ದು, ನೂತನ ಕಟ್ಟಡ ನಿರ್ಮಾಣದ ಯೋಜನೆ ಹಾಕಬೇಕಾಗಿದೆ. ಆದರೆ ಇಲಾಖೆ ಕಟ್ಟಡಕ್ಕೆ ಬರೀ ಸುಣ್ಣ-ಬಣ್ಣದ ಲೇಪನ ಮಾಡಿ ಕೈತೊಳೆದುಕೊಳ್ಳುತ್ತಿದೆ.

10 ಲಕ್ಷ ರೂ. ಬಿಡುಗಡೆ
ಹಾಲಿ ಶೈಕ್ಷಣಿಕ ವರ್ಷದಲ್ಲಿ ಹಾಸ್ಟೆಲ್‌ ನಿರ್ವಹಣೆಗಾಗಿ ಅಂದಾಜು 10 ಲಕ್ಷ ರೂ. ಬಿಡುಗಡೆ ಆಗಿದೆ. ಅದರಲ್ಲಿ ಅಲ್ಲಲ್ಲಿ ದುರಸ್ತಿ, ಕಟ್ಟಡ ಪೂರ್ತಿ ಸುಣ್ಣ ಬಳಿದು ಮುಕ್ತಾಯ ಮಾಡುವುದು ಇಲಾಖೆಯ ಯೋಜನೆ.

ಕಟ್ಟಡ ದುರ್ಬಲ
ಹಾಸ್ಟೆಲ್‌ ಕಟ್ಟಡ ದುರ್ಬಲಗೊಂಡಿರುವು ದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಸುರಕ್ಷತೆಯ ಭೀತಿಯಿದೆ. ಇಲ್ಲಿರುವ ವಿದ್ಯಾರ್ಥಿಗಳಲ್ಲಿ ಶೇ. 60ಕ್ಕೂ ಹೆಚ್ಚು ಮಂದಿ ಹೊರ ಜಿಲ್ಲೆಯವರು. ಇಲಾಖೆ ಕೂಡ ಹಾಸ್ಟೆಲ್‌ ಕಟ್ಟಡದ ಸುಸ್ಥಿತಿಯ ಬಗ್ಗೆ ಹೆಚ್ಚಿನ ಗಮನ ಹರಿಸಿದಂತಿಲ್ಲ. ಶಾಶ್ವತ ಅನುದಾನವನ್ನು ಬಿಡುಗಡೆಗೊಳಿಸಿ ನೂತನ ಕಟ್ಟಡ ನಿರ್ಮಿಸಬೇಕಾದ ಅನಿವಾರ್ಯವನ್ನು ಸರಕಾರಕ್ಕೆ ಮನದಟ್ಟು ಮಾಡಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಭೀತಿಯಿಲ್ಲದೆ ಕಲಿಯುವ ವಾತಾವರಣ ನಿರ್ಮಾಣವಾಗಲಿದೆ.

ವರದಿ ಪಡೆದು ಸೂಕ್ತ ಕ್ರಮ
ಹಾಸ್ಟೆಲ್‌ ಕಟ್ಟಡ ದುರ್ಬಲಗೊಂಡಿರುವ ಬಗ್ಗೆ ಮಾಹಿತಿ ಪಡೆದು, ಸಂಬಂಧಪಟ್ಟ ಅಧಿಕಾರಿ ಹಾಗೂ ಎಂಜಿನಿಯರಿಂಗ್‌ ವಿಭಾಗದಿಂದ ವರದಿಯನ್ನು ಸ್ವೀಕರಿಸಿ
ಸೂಕ್ತ ಕ್ರಮ ಕೈಗೊಳ್ಳಲಾಗುವುದು.
 - ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಶಾಸಕರು

ಮೇಲಧಿಕಾರಿಗಳ ಗಮನಕ್ಕೆ
ಹಾಸ್ಟೆಲ್‌ ಕಟ್ಟಡ ದುರಸ್ತಿಗಾಗಿ 10 ಲಕ್ಷ ರೂ. ಅನುದಾನ ಬಂದಿದೆ. ಮಳೆಗಾಲದಲ್ಲಿ ಮಳೆ ನೀರು ಸೋರುತ್ತಿರುವ ಹಿನ್ನೆಲೆಯಲ್ಲಿ ಹೆಂಚುಗಳನ್ನು ಬದಲಿಸಿದ್ದೇವೆ. ಗೋಡೆಗಳಿಗೆ ಪೈಂಟಿಂಗ್‌ ಆಗದೆ ಹಲವು ವರ್ಷಗಳಾದ ಕಾರಣ ಪೈಂಟಿಂಗ್‌ ಕೆಲಸ ನಡೆದಿದೆ. ಪ್ರತಿ ವರ್ಷ ರಿಪೇರಿ ಮಾಡುತ್ತಾ ಇದ್ದೇವೆ. ರಿಪೇರಿ ಕಾಮಗಾರಿಗೆ ಸರಕಾರಕ್ಕೆ 35 ಲಕ್ಷ ರೂ. ಹೆಚ್ಚುವರಿ ಪ್ರಸ್ತಾವನೆ ಕಳುಹಿಸಲಾಗಿದೆ. ನೂತನ ಕಟ್ಟಡ ನಿರ್ಮಾಣದ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು.
 - ಮೋಹನ್‌, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಂಟ್ವಾಳ

- ರಾಜಾ ಬಂಟ್ವಾಳ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.