ಇಂದಿನಿಂದ ಶಾಲಾ ಮಕ್ಕಳ ವಾಹನ ಚಾಲಕರ ಮುಷ್ಕರ
Team Udayavani, Jul 11, 2019, 5:41 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ಕಾನೂನು ಪಾಲನೆ ಹೆಸರಿನಲ್ಲಿ ಶಾಲಾ ಮಕ್ಕಳ ವಾಹನ ಚಾಲಕರ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳ ವಾಹನ ಚಾಲಕರು ಜು. 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸುಮಾರು 5,000 ಮಕ್ಕಳ ಶಾಲಾ ವಾಹನಗಳು ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ.
ಮಕ್ಕಳ ವಾಹನಗಳ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ ಆ ವಾಹನಗಳಲ್ಲಿ ದಿನನಿತ್ಯ ಶಾಲೆಗಳಿಗೆ ಬರುವ ಮಕ್ಕಳಿಗೆ ತೊಂದರೆಯಾಗಲಿದೆ. ಪ್ರತಿಭಟನೆ ಬಗ್ಗೆ ಎಲ್ಲ ಶಾಲೆ ಮತ್ತು ಮಕ್ಕಳ ಪೋಷಕರಿಗೆ ತಿಳಿಸಲಾಗಿದೆ ಎಂದು ಸಂಘದ ಪ್ರಮುಖರು ಹೇಳಿದ್ದಾರೆ. ಈ ನಡುವೆ ಪ್ರತಿಭಟನೆಗೆ ಅವಕಾಶ ಇಲ್ಲ ಎಂಬುದಾಗಿ ಈಗಾಗಲೇ ಸಂಘದವರಿಗೆ ತಿಳಿಸಲಾಗಿದ್ದು, ಪ್ರತಿಭಟನೆ ನಡೆಸಿದರೆ ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗಳೂರು ನಗರದಲ್ಲಿ ಸುಮಾರು 2,000 ಮತ್ತು ಜಿಲ್ಲೆಯಲ್ಲಿ ಸುಮಾರು 5,000 ರಿಕ್ಷಾ, ಆಮ್ನಿ, ಮ್ಯಾಕ್ಸಿಕ್ಯಾಬ್, ಮಿನಿ ಬಸ್ಗಳು ಮಕ್ಕಳನ್ನು ದಿನನಿತ್ಯ ಶಾಲೆಗೆ ಬಿಡುವ ಕೆಲಸವನ್ನು ಮಾಡುತ್ತಿವೆ. ಮಕ್ಕಳನ್ನು ಖಾಸಗಿ ವಾಹನಗಳಲ್ಲಿ ಶಾಲೆಗೆ ಕರೆದೊಯ್ಯುವಾಗ ಇಂತಿಷ್ಟೇ ಮಕ್ಕಳನ್ನು ಸಾಗಿಸಬೇಕೆಂಬ ನಿಯಮವಿದೆ. ಕೆಲವು ವಾಹನ ಚಾಲಕರು ನಿಯಮ ಗಾಳಿಗೆ ತೂರಿ ಮಿತಿಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ತಪಾಸಣೆ ನಡೆಸಿ ಅಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಎಲ್ಲೋ ಆದ ಘಟನೆಗಳನ್ನು ನೆಪ ಮಾಡಿ ಕೊಂಡು ಕಾನೂನು ರಕ್ಷಣೆಯ ಹೆಸರಿನಲ್ಲಿ ಪೊಲೀಸರು ಶಾಲಾ ಮಕ್ಕಳ ವಾಹನ ಚಾಲಕರ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಅತ್ತಾವರ ತಿಳಿಸಿದ್ದಾರೆ.
ನಾಳೆ ಬೃಹತ್ ಪ್ರತಿಭಟನ ಪ್ರದರ್ಶನ
ಜು. 11ರಿಂದ ಮುಷ್ಕರ ನಡೆಯಲಿದ್ದು, 12ರಂದು ಬೆಳಗ್ಗೆ 10ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನ ಪ್ರದರ್ಶನ ಜರಗಲಿದೆ.
ಶಾಲಾ ವಾಹನಗಳ ಚಾಲಕ ರಿಗೆ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅಪರಾಧ ವಿಭಾಗದ ಡಿಸಿಪಿ ಮತ್ತು ಸಂಚಾರ ವಿಭಾಗದ ಎಸಿಪಿ ಈಗಾಗಲೇ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಪ್ರಮುಖ ರೊಂದಿಗೆ ಮಾತುಕತೆ ನಡೆಸಿದ್ದಾರೆ. ಇದರ ಹೊರತಾಗಿಯೂ ಪ್ರತಿಭಟಿ ಸಿದರೆ ನ್ಯಾಯಾಲಯ ನಿಂದನೆ ಮಾಡಿ ದಂತಾಗುತ್ತದೆ. ಅಂತಹ ವಾಹನಗಳ ಚಾಲಕರ ವಿರುದ್ಧ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ.
– ಸಂದೀಪ್ ಪಾಟೀಲ್, ಮಂಗಳೂರು ನಗರ ಪೊಲೀಸ್ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ