ನಗುಮೊಗದೊಂದಿಗೆ ಶಾಲೆಯತ್ತ ಹೆಜ್ಜೆಹಾಕಿದ ವಿದ್ಯಾರ್ಥಿಗಳು


Team Udayavani, May 29, 2018, 4:50 AM IST

school-re-open-28-5.jpg

ಮಹಾನಗರ: ಒಂದು ತಿಂಗಳ ಕಾಲ ಬೇಸಗೆ ರಜೆ ಅನುಭವಿಸಿದ ವಿದ್ಯಾರ್ಥಿಗಳು ಲಗುಬಗೆಯಿಂದ ಮತ್ತೆ ಶಾಲೆಗೆ ಆಗಮಿಸಿದ್ದಾರೆ. ಒಂದು ಕಡೆ ಹೊಸತಾಗಿ ಮಕ್ಕಳನ್ನು ಸೇರ್ಪಡೆಗೊಳಿಸುವಲ್ಲಿ ಶಿಕ್ಷಕರು, ಇತರ ಸಿಬಂದಿ ಬ್ಯುಸಿ ಇದ್ದರೆ, ಉಳಿದಂತೆ ಅಡಿಗೆ ಸಿಬಂದಿ ಮಕ್ಕಳಿಗೆ ಬಿಸಿ ಊಟ ತಯಾರಿಸುವಲ್ಲಿ ನಿರತರಾಗಿದ್ದರು. ಮಕ್ಕಳೆಲ್ಲಾ ರಜೆ ಮಜ ಮುಗಿಸಿ ಬೇಸರದ ಮೊಗದಿಂದ ಶಾಲೆಗೆ ಆಗಮಿಸಿದ್ದರೂ ಈ ಬಾರಿ ಶಾಲಾ ಆರಂಭೋತ್ಸವ ಇರುವ ಕಾರಣ ಶಾಲೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಇಂದು ಶಾಲಾ ಆರಂಭೋತ್ಸವ ಇರುವುದರಿಂದ ನಿನ್ನೆ ಅದಕ್ಕಾಗಿ ವಿದ್ಯಾರ್ಥಿಗಳು ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸುತ್ತಿದ್ದರು. ವಿದ್ಯಾರ್ಥಿಗಳೇ ಶಾಲೆಯನ್ನು ಗುಡಿಸಿ, ಶುಚಿಗೊಳಿಸಿ ಬೆಂಚು, ಡೆಸ್ಕ್ ಗಳನ್ನು ಕ್ಲಾಸಿನಲ್ಲಿ ಒಪ್ಪ ಓರಣವಾಗಿ ಇಡುತ್ತಿರುವ ದೃಶ್ಯ ಕಂಡುಬಂದಿತು. ಹೊಸ ಪುಸ್ತಕ, ಕೊಡೆ, ರೈನ್‌ಕೋಟ್‌ ಧರಿಸಿ ವಿದ್ಯಾರ್ಥಿಗಳು ಲಗುಬಗೆಯಿಂದ ಶಾಲೆ ಕಡೆಗೆ ಹೆಜ್ಜೆ ಹಾಕುತ್ತಿದ್ದರು. ಆಂಗ್ಲ ಮಾಧ್ಯಮದ ವ್ಯಾಮೋಹ ಹೆಚ್ಚಿದ ಕಾರಣ ಹೆತ್ತವರು ಈ ಬಾರಿ ಖಾಸಗಿ ಆಂಗ್ಲ ಮಾಧ್ಯಮಕ್ಕೆ ತಮ್ಮ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಳಿಸಿದ್ದಾರೆ.


ಕ್ಷೀಣಿಸುತ್ತಿರುವ ಸರಕಾರಿ ಶಾಲೆಯ ದಾಖಲಾತಿ
ಮಳಲಿ:
ಆಂಗ್ಲ ಹಾಗೂ ಖಾಸಗಿ ಶಾಲೆಯ ವ್ಯಾಮೋಹ ಜಾಸ್ತಿಯಾಗಿದ್ದರೂ, ಮಳಲಿಯ ಸರಕಾರಿ ಪ್ರಾಥಮಿಕ ಶಾಲೆಗೆ ಈ ಬಾರಿ 26 ಮಕ್ಕಳು ಹೊಸತಾಗಿ ಸೇರ್ಪಡೆಗೊಂಡಿದ್ದಾರೆ. ಬೇರೆ ಸರಕಾರಿ ಶಾಲೆಗೆ ಹೋಲಿಸಿದರೆ ಇಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗಿರುವುದು ಆಶಾ ಭಾವನೆ ಮೂಡಿಸಿದೆ. ಒಂದು ಕಾಲದಲ್ಲಿ ಸುಮಾರು 100 ಮಕ್ಕಳು ದಾಖಲಾಗುತ್ತಿದ್ದ ಶಾಲೆಗೆ ಇತ್ತೀಚೆಗೆ 25 ಮಕ್ಕಳು ಹೊಸತಾಗಿ ಸೇರ್ಪಡೆಗೊಂಡಿರುವುದೇ ಹೆಚ್ಚು. ಕಳೆದ ಬಾರಿ 24 ಮಕ್ಕಳು ದಾಖಲುಗೊಂಡಿದ್ದಾರೆ ಎಂದು ಪ್ರಾಥಮಿಕ ಶಾಲೆ ಮಳಲಿಯ ಪದವೀಧ ರೇತರ ಮುಖ್ಯ ಶಿಕ್ಷಕಿ ನೇತ್ರಾವತಿ ತಿಳಿಸಿದ್ದಾರೆ.


ಪೂರ್ವ ಸಿದ್ಧತೆ

ಮಕ್ಕಳಿಗೆ ಶಾಲೆಯಲ್ಲಿ ಮನರಂಜನೆ ಜತೆಗೆ ಶಾಲಾ ಆರಂಭೋತ್ಸವವನ್ನು ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿರುವುದರಿಂದ ಶಿಕ್ಷಕರು, ಮಕ್ಕಳೆಲ್ಲಾ ಸೇರಿ ಇದಕ್ಕೆ ಸಿದ್ಧರಾಗುತ್ತಿದ್ದಾರೆ. ಈ ಸಮಾರಂಭದಲ್ಲಿ ನಾನಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ಬಡಗ ಎಕ್ಕಾರು
ಎಕ್ಕಾರು:
ಬಡಗದ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 28ರಂದು ಶಾಲಾ ತರಗತಿ ಹಾಗೂ ಪರಿಸರ ಸ್ವಚ್ಛಗೊಳಿಸಲಾಯಿತು. ಶಾಲೆಯನ್ನು ತಳಿರು ತೋರಣ ಕಟ್ಟಿ ಸಿಂಗಾರಿಸಲಾಗಿತ್ತು. SDMC ಜತೆ ಶಿಕ್ಷಕರ ಸಭೆ ನಡೆಸಲಾಯಿತು. ಬಳಿಕ ಪಾಠ ವೇಳಾ ಪಟ್ಟಿ, ಕ್ರಿಯಾಯೋಜನೆ, ಶಿಕ್ಷಕ ಹಾಗೂ ತರಗತಿಗಳ ವೇಳಾ ಪಟ್ಟಿ ತಯಾರಿಸಲಾಯಿತು. ನೂತನವಾಗಿ ಸೇರ್ಪಡೆಯಾಗುತ್ತಿರುವ ವಿದ್ಯಾರ್ಥಿಗಳನ್ನು ಹೂ, ಉಡುಗೊರೆ ನೀಡಿ ಸ್ವಾಗತಿಸಲಾಯಿತು. ಸಿಹಿ ತಿಂಡಿ ಹಂಚುವಿಕೆ, ಮಧ್ಯಾಹ್ನ ಊಟದ ಜತೆಗೆ ಪಾಯಸ ನೀಡಲಾಯಿತು. 

ತೆಂಕ ಎಕ್ಕಾರು
ಎಕ್ಕಾರು:
ದ.ಕ.ಜಿ.ಪಂ. ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ತೆಂಕ ಎಕ್ಕಾರು ಇಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಭರದಿಂದ ಪೂರ್ವ ಸಿದ್ಧತೆಗಳು ಮೇ 28ರಂದು ನಡೆದಿದೆ.  ಸೋಮವಾರ ಶಾಲಾ ತರಗತಿಯನ್ನು ನೀರು ಹಾಕಿ ತೊಳೆದು ಸ್ವಚ್ಛ ಮಾಡಲಾಯಿತು. ಪರಿಸರದಲ್ಲಿರುವ ಕಸ ತೆಗೆಯಲಾಯಿತು. 

ತೋಕೂರು: ಶಾಲಾ  ಪ್ರಾರಂಭೋತ್ಸವಕ್ಕೆ ತಳಿರು ತೋರಣ

ತೋಕೂರು:
ಇಲ್ಲಿನ ಪಡು ಪಣಂಬೂರು ಗ್ರಾಮ ಪಂಚಾಯತ್‌ನ ತೋಕೂರು ಶ್ರೀ ಸುಬ್ರಹ್ಮಣ್ಯ ಅನುದಾನಿತ ಸರಕಾರಿ ಶಾಲೆಯಲ್ಲಿ ಮರಳಿ ಮಕ್ಕಳ ಕಲರವ ಕೇಳಿ ಬರಲು ಸೋಮವಾರ ಶಾಲಾ ವಠಾರವನ್ನು ಶುಚಿಗೊಳಿಸಿ, ತರಗತಿಯನ್ನು ತಳಿರು ತೋರಣದಿಂದ ಸಿಂಗರಿಸಲಾಗಿತ್ತು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.