ಉಳ್ಳಾಲ : ಕಿಂಡರ್ ಗಾರ್ಟನ್ ಶಿಕ್ಷಕಿ ಮೃತದೇಹ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆ
Team Udayavani, Aug 13, 2022, 9:00 AM IST
ಉಳ್ಳಾಲ : ಉಳ್ಳಾಲದ ಅಬ್ಬಕ್ಕ ಸರ್ಕಲ್ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ (50) ಅವರ ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಚಪ್ಪಲಿಗಳು ಪತ್ತೆಯಾಗಿತ್ತು.
ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಮೂಲಕ ಹುಡುಕಾಟ ನಡೆಸಲಾಯಿತು. ಅನಂತರ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅವರು ಕೆಲವು ದಿನಗಳಿಂದ ಖನ್ನತೆಗೆ ಒಳಗಾಗಿದ್ದರು. ಮನೆಯಲ್ಲೇ ನರ್ಸರಿ, ಯುಕೆಜಿ ಹಾಗೂ ಟ್ಯೂಷನ್ ತರಗತಿ ಹೊಂದಿದ್ದರು. ಮೃತರ ಪತಿ ಬಸವರಾಜ್ ಶಿವಮೊಗ್ಗದಲ್ಲಿ ನ್ಯಾಯವಾದಿಯಾಗಿದ್ದಾರೆ. ಕೊರೊನಾ ಲಾಕ್ ಡೌನ್ ಸಂದರ್ಭ ಅಸಹಾಯಕರಿಗೆ ಆಹಾರ ಕಿಟ್ ಒದಗಿಸಿದ್ದರು. ಸುಮಾರು 30 ಫೀಟ್ ಅಳದ ಬಾವಿಗೆ ಇಳಿದ ಮೊಗವೀರಪಟ್ಣ ಶಿವಾಜಿ ಜೀವರಕ್ಷಕ ಈಜುಗಾರರ ಸಂಘದ ಧನ್ರಾಜ್ ಪುತ್ರನ್, ಯೋಗೀಶ್ ಅಮೀನ್ ಮೃತದೇಹವನ್ನು ಮೇಲೆತ್ತಲು ಯಶಸ್ವಿಯಾದರು.
ಇದನ್ನೂ ಓದಿ : ಪರ್ಕಳ: ಚಿರತೆ ದಾಳಿ ಪ್ರಕರಣ : ಸತ್ತಂತೆ ನಟಿಸಿ ಬದುಕುಳಿದ ಶ್ವಾನ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್