‘ಕೃಷಿ ಕ್ಷೇತ್ರದಲ್ಲಿ ವೈಜ್ಞಾನಿಕ ಬದಲಾವಣೆ’
Team Udayavani, Apr 6, 2022, 12:24 PM IST
ಸುಳ್ಯ: ಎಲ್ಲರೂ ಸಮಾನರಾಗಿ ಬದುಕಬೇಕೆಂದು ಶ್ರಮಿಸಿದವರಲ್ಲಿ ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ ರಾಂ ಕೂಡ ಒಬ್ಬರು. ಈ ಬಗೆಗಿನ ಕಾನೂನು ಪರಿಣಾಮಕಾರಿಯಾಗಿ ಜಾರಿಗೆ ತರಲು ಶ್ರಮಿಸಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಅವರು ಬಯಸುತ್ತಿದ್ದರು ಹಾಗೂ ಅವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ದೇಶದ ಕಟ್ಟ ಕಡೆಯ ಸಮುದಾಯದ ಹಿತರಕ್ಷಣೆಗಾಗಿಯೂ ಅವರು ಕಾರ್ಯ ಪ್ರವೃತ್ತರಾಗಿದ್ದರು. ಕೃಷಿ ಕ್ಷೇತ್ರದಲ್ಲಿ ಅನೇಕ ವೈಜ್ಞಾ ನಿಕ ಬದಲಾವಣೆ ತಂದಿದ್ದರು ಎಂದು ಸುಳ್ಯ ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಹೇಳಿದರು.
ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣ ಸಮಿತಿ ಆಶ್ರಯದಲ್ಲಿ ಹಸುರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ| ಬಾಬು ಜಗಜೀವನ್ ರಾಂ ಅವರ 115ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ತಹಶೀಲ್ದಾರ್ ಅನಿತಾಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ಚಂದ್ರಮತಿ ಪ್ರಮುಖ ಭಾಷಣ ನೆರವೇರಿಸಿದರು.
ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ ಉಪಸ್ಥಿತರಿದ್ದರು. ವಸತಿ ನಿಲಯ ಮೇಲ್ವಿಚಾರಕ ಮಾಧವ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ