ವಿಜ್ಞಾನಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು: ಖಾದರ್‌


Team Udayavani, Sep 8, 2019, 5:17 AM IST

UT-MANG

ಮಂಗಳೂರು: ಚಂದ್ರಯಾನ- 2ನ್ನು ವಿಜ್ಞಾನಿಗಳ ವೈಫ‌ಲ್ಯವೆಂದು ಪರಿಗಣಿಸದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ ಎಂದು ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರ ತಿಳಿಸಿದರು. ವಿಜ್ಞಾನಿಗಳು ಇದರಿಂದ ಕುಗ್ಗಬಾರದು. ಇಂದಲ್ಲ ನಾಳೆ ಅವರು ಗುರಿ ತಲುಪುವ ವಿಶ್ವಾಸ ನಮಗಿದ್ದು, ವಿಜ್ಞಾನಿಗಳು ನಮ್ಮ ಹೆಮ್ಮೆ ಎಂದರು.

ರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಾವಿರಾರು ಮಂದಿ ಸಂಕಷ್ಟಕ್ಕೀಡಾದಾಗ ನೆರವು ನೀಡಲು ಹಿಂದೆ ಮುಂದೆ ನೋಡಿದ ಪ್ರಧಾನಿ ಮೋದಿ, ರಷ್ಯಾಕ್ಕೆ ಘೋಷಿಸಿರುವ ನೂರು ಕೋ. ಡಾಲರ್‌ ನೆರವು ಹಣ ಎಲ್ಲಿಂದ? ದೇಶ ಸಂಕಷ್ಟದಲ್ಲಿರುವಾಗ ಈ ಮೂಲಕ ಸರಕಾರ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ. ಈ ಬಗ್ಗೆ ಜನತೆಗೆ ಪ್ರಧಾನಿ ಉತ್ತರಿಸಬೇಕು ಎಂದು ಖಾದರ್‌ ಒತ್ತಾಯಿಸಿದರು.

ತೊಗರಿಬೇಳೆ ರದ್ದತಿ ಹಿಂಪಡೆಯಲು ಒತ್ತಾಯ ಜನಸಾಮಾನ್ಯರಿಗೆ ಪಡಿತರ ವ್ಯವಸ್ಥೆಯಡಿ ನೀಡಲಾಗುತ್ತಿದ್ದ ತೊಗರಿ ಬೇಳೆಯನ್ನು ರದ್ದುಗೊಳಿಸಿರುವ ಸರಕಾರದ ಕ್ರಮ ಜನವಿರೋಧಿ. ಕೂಡಲೆ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಖಾದರ್‌ ಆಗ್ರಹಿಸಿದರು. ರದ್ದು ವಾಪಸ್‌ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್‌ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯ ಸರಕಾರ ಪಡಿತರ ಚೀಟಿಯ ಗೊಂದಲ ಸೃಷ್ಟಿಮಾಡಿದೆ. ಈಗಾಗಲೇ ಪ್ರವಾಹದಿಂದ ಬಹುತೇಕರ ಪಡಿತರ ಚೀಟಿ ನೀರುಪಾಲಾಗಿದೆ. ಜನರಿಗೆ ಸೌಲಭ್ಯ ನೀಡುವುದು ಬಿಟ್ಟು ಸೌಲಭ್ಯ ಕಸಿಯಲು ಹೊರಟದ್ದು ಸರಿಯಲ್ಲ. ರೇಷನ್‌ ಕಾರ್ಡ್‌ ಕಳೆದುಕೊಂಡ ಪ್ರವಾಹ ಪೀಡಿತರಿಗೆ ಕೂಡಲೇ ಆದ್ಯತೆ ಮೇರೆಗೆ ಕಾರ್ಡ್‌ ವಿತರಿಸುವ ಕಾರ್ಯ ಮಾಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹುತೇಕ ಎಲ್ಲ ಮಂತ್ರಿಗಿರಿಗಳನ್ನು ತನ್ನ ಬಳಿಯೇ ಇರಿಸಿಕೊಂಡಿದ್ದಾರೆ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಎಂಬುದನ್ನಾದರೂ ಹೇಳಲಿ ಎಂದು ಖಾದರ್‌ ಒತ್ತಾಯಿಸಿದರು.

ಸೆಂಥಿಲ್‌ ರಾಜೀನಾಮೆ ಕಳವಳಕಾರಿ
ಶಶಿಕಾಂತ್‌ ಸೆಂಥಿಲ್‌ ರಾಜೀನಾಮೆ ಕಳವಳಕಾರಿ. ಅವರಿಗೆ ದೇಶದ ಪ್ರಸಕ್ತ ಪರಿಸ್ಥಿತಿ ಬಗ್ಗೆ ಆತಂಕವಿದ್ದಲ್ಲಿ, ತನ್ನ ರಾಜೀನಾಮೆಯನ್ನು ಹಿಂದಕ್ಕೆ ಪಡೆದು ರಜೆಯಲ್ಲಿ ತೆರಳಿ ಮತ್ತೆ ಕರ್ತವ್ಯಕ್ಕೆ ಮರಳಬಹುದು. ಅಂತಹ ಅವಕಾಶ ಅವರಿಗಿದೆ. ಆ ಬಗ್ಗೆ ಅವರು ಯೋಚಿಸಬೇಕಾಗಿದೆ ಎಂದು ಖಾದರ್‌ ಹೇಳಿದರು.

ವೈಫ‌ಲ್ಯಕ್ಕೆ ರಷ್ಯಾ ಕಾರಣ:ಖಾದರ್‌ ಆರೋಪ
ಚಂದ್ರಯಾನ- 2 ವೈಫ‌ಲ್ಯದಲ್ಲಿ ರಷ್ಯಾದ ಷಡ್ಯಂತ್ರದ ಅನುಮಾನವಿದೆ ಎಂದು ಯು.ಟಿ. ಖಾದರ್‌ ಈ ಸಂದರ್ಭದಲ್ಲಿ ಆರೋಪಿಸಿದ್ದಾರೆ.

ಕೇಂದ್ರ ಸರಕಾರ 2007ರಲ್ಲಿ ಈ ಯೋಜನೆಗೆ ಅನುಮೋದನೆ ಪಡೆದಿತ್ತು. ಆ ಸಮಯದಲ್ಲಿಯೇ ಯೋಜನೆ ಸಿದ್ಧಪಡಿಸಲು ಸಹಿ ಹಾಕಿದ್ದವು. ಭಾರತ ಆರ್ಬಿಟರ್‌ ಮತ್ತು ರೋವರ್‌ ಸಿದ್ಧಪಡಿಸುವ ಜವಾಬ್ದಾರಿ ಪಡೆದಿದ್ದರೆ ರಷ್ಯಾವು ಲ್ಯಾಂಡರ್‌ ನೀಡುವುದಾಗಿ ತಿಳಿಸಿತ್ತು. ಸಮಯಕ್ಕೆ ಸರಿಯಾಗಿ ಅದು ಲ್ಯಾಂಡರ್‌ ನೀಡಿರಲಿಲ್ಲ. ಆದರೂ ಹಿಂಜರಿಯದ ಭಾರತದ ವಿಜ್ಞಾನಿಗಳು ಸ್ವತಃ ಲ್ಯಾಂಡರ್‌ ಸಿದ್ಧಪಡಿಸಿದ್ದರು. ಕೊನೆ ಹಂತ
ದಲ್ಲಿ ಲ್ಯಾಂಡರ್‌ ಸಂಪರ್ಕ ಕಡಿತಗೊಂಡಿದ್ದು, ಈ ವೈಫ‌ಲ್ಯದ ಹಿಂದೆ ಭಾರತದ ಅಭ್ಯುದಯ ಬಯಸದ ಅಂ.ರಾ. ಮಟ್ಟದ ಷಡ್ಯಂತ್ರದ ಅನುಮಾನ ಕಾಡುತ್ತಿದೆ. ಎಂದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.