ಎಕ್ಕೂರು: ಕಾರಿಗೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಹರಿದ ಬಸ್!
Team Udayavani, Apr 14, 2021, 12:03 PM IST
ಉಳ್ಳಾಲ: ಪರಿಚಿತ ಕಾರು ಢಿಕ್ಕಿ ಹೊಡೆದು ರಸ್ತೆಗುರುಳಿದ ಸ್ಕೂಟರ್ ಸವಾರನ ಮೇಲೆ ಸಿಟಿ ಬಸ್ ಚಲಿಸಿದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ಎಕ್ಕೂರು ಬಳಿ ಬುಧವಾರ ಸಂಭವಿಸಿದೆ.
ಧೀಮಂತ್ ರಭೀಂದ್ರ ಮೃತರು. ಅತ್ತಾವರದ ಲೆನ್ಸ್ ಕಾರ್ಟ್.ಕಾಂ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಇವರು ತೊಕ್ಕೊಟ್ಟುವಿನಲ್ಲಿ ಬಾಡಿಗೆ ಮನೆಯನ್ನು ಹೊಂದಿದ್ದರು. ಅಲ್ಲಿಂದ ಇಂದು ಬೆಳಿಗ್ಗೆ ಉದ್ಯೋಗಕ್ಕೆ ತೆರಳುವ ಸಂದರ್ಭ ಇವರಿದ್ದ ಸ್ಕೂಟರಿಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದೆ
ಇದನ್ನೂ ಓದಿ:ಜಾತ್ರೆಯಲ್ಲಿ ಕಳೆದುಹೋದ ಚಿನ್ನಾಭರಣ ಹಿಂದಿರುಗಿಸಿದ ಪೊಳಲಿ ದೇವಸ್ಥಾನದ ಸಿಬ್ಬಂದಿ
ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ರಭೀಂದ್ರ ಅವರ ಮೇಲೆ ಅದೇ ರಸ್ತೆಯಾಗಿ ಚಲಿಸುತ್ತಿದ್ದ ಸಿಟಿ ಬಸ್ ಚಲಿಸಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಕೊಂಡೊಯ್ದರಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಪಿಕಪ್ ಚಾಲಕನ ಅಜಾಗರೂಕತೆ: ಸ್ಕೂಟರ್ ಗೆ ಢಿಕ್ಕಿಯಾಗಿ ಓರ್ವ ಸಾವು!
ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ