ನಂತೂರು: ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಸಾವು
Team Udayavani, Oct 13, 2022, 10:02 PM IST
ಮಂಗಳೂರು: ನಗರದ ನಂತೂರು ಜಂಕ್ಷನ್ನಲ್ಲಿ ಬುಧವಾರ ಸಂಜೆ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರ ವಿಶ್ವನಾಥ ಆಳ್ವ (68) ಅವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿವಭಾಗ್ ಕಡೆಯಿಂದ ಬಿಕರ್ನಕಟ್ಟೆಗೆ ಸಾಗುತ್ತಿದ್ದ ಬಸ್ ಅನ್ನು ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಬಿಟ್ಟಾಗ ಚಾಲಕ ನಿರ್ಲಕ್ಷ್ಯತನದಿಂದ ಒಮ್ಮೆಲೇ ಮುಂದಕ್ಕೆ ಎಡಬದಿಗೆ ಚಲಾಯಿಸಿದ್ದು, ಈ ವೇಳೆ ಬಸ್ಸಿನ ಮುಂಭಾಗದಲ್ಲಿದ್ದ ವಿಶ್ವನಾಥ ಆಳ್ವ ಅವರ ಸ್ಕೂಟರ್ಗೆ ಢಿಕ್ಕಿಯಾಗಿದೆ. ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ವಿಶ್ವನಾಥ ಆಳ್ವ ಅವರು ಬಸ್ನ ಮುಂಭಾಗದಲ್ಲಿ ಸಿಲುಕಿಕೊಂಡು ಸ್ವಲ್ಪ ದೂರ ಮುಂದಕ್ಕೆ ಬಸ್ನೊಂದಿಗೆ ತಳ್ಳಿಕೊಂಡು ಹೋಗಿದ್ದಾರೆ.
ಘಟನೆಯಿಂದ ಕೈ, ಕಾಲು, ದೇಹಕ್ಕೆ ಗಂಭೀರ ಗಾಯಗೊಂಡಿದ್ದ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಲಕನ ವಿರುದ್ಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ