ಪಣಂಬೂರು ಬೀಚ್‌ ಆಕರ್ಷಣೆಗೆ ಸ್ಕೂಬಾ ಡೈವ್‌ !

ಕರಾವಳಿಯಲ್ಲಿ ವಿಪುಲ ಅವಕಾಶ

Team Udayavani, Mar 4, 2020, 5:31 AM IST

scuqiba-drive

ಮಹಾನಗರ: ಕರಾವಳಿ ಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಇಲ್ಲಿನ ಬೀಚ್‌ಗಳು ದೇಶ- ವಿದೇಶಗಳ ಪ್ರವಾಸಿಗರನ್ನು ಸೆಳೆಯುತ್ತಿವೆ. ಇದೇ ಕಾರಣಕ್ಕೆ ಪಣಂಬೂರು ಬೀಚ್‌ನಲ್ಲಿ ಸ್ಕೂಬಾ ಡೈವ್‌ ಮುಖೇನ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮಿಗಳು ಮುಂದಾಗಿದ್ದಾರೆ.
ಜಿಲ್ಲೆಯ ಪ್ರಮುಖ ಬೀಚ್‌ಗಳ ಪೈಕಿ ಪಣಂಬೂರು ಬೀಚ್‌ ಕೂಡ ಒಂದು. ದಿನನಿತ್ಯ ಸಾವಿರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಈಗಾಗಲೇ, ಉಡುಪಿ, ಕಾರವಾರದಲ್ಲಿ ಪ್ರವಾಸೋದ್ಯ ಮಕ್ಕೆ ಹೊಸ ಭಾಷ್ಯ ಬರೆದ ಸ್ಕೂಬಾ ಡೈವ್‌ ಮಂಗಳೂರಿನಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ.

ಒಪ್ಪಿಗೆಗಾಗಿ ಜಿಲ್ಲಾಡಳಿತಕ್ಕೆ ಮನವಿ
ಮಂಗಳೂರಿನ ಸಮುದ್ರದಲ್ಲಿ ಈಗಾಗಲೇ ಕೆಲವೊಂದು ಹಡಗುಗಳು ಮುಳುಗಡೆಯಾಗಿವೆ. ಸ್ಕೂಬಾ ಡೈವಿಂಗ್‌ ಮುಖೇನ ಇವುಗಳ ಅವಶೇಷಗಳ ವೀಕ್ಷಣೆ ಮತ್ತು ಜಲಚರಗಳ ವೀಕ್ಷಣೆಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಜಿಲ್ಲಾಡಳಿತದಿಂದ ಈ ಸಂಬಂಧ ಒಪ್ಪಿಗೆ ನೀಡುವಂತೆ ಪಣಂಬೂರು ಬೀಚ್‌ ಪ್ರವಾಸೋದ್ಯಮ ನಿಗಮವು ಕೋರಿಕೊಂಡಿದೆ.

ಹಿಂದಿನ ಪ್ರಸ್ತಾವ ಕೈಬಿಡಲಾಗಿದೆ
ಪಣಂಬೂರು ಕಡಲ ತೀರದಿಂದ 15 ಕಿ.ಮೀ. ದೂರದ ಕಡಲಿನಲ್ಲಿ ಮುಳುಗಿದ ಎಂ.ವಿ. ಓಷನ್‌ ಬ್ಲೆಸಿಂಗ್‌ ಎಂಬ ಹಡಗನ್ನು ಸ್ಕೂಬಾ ಡೈವಿಂಗ್‌ ನಡೆಸಿ ನೋಡಲು ಈ ಹಿಂದೆ ಯೋಜನೆಯೊಂದು ಸಿದ್ಧಗೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣ ದಿಂದಾಗಿ ಈ ಪ್ರಸ್ತಾವವನ್ನು ಕೈಬಿಡಲಾಗಿದೆ. ಸ್ಕೂಬ್‌ ಡೈವ್‌ ನಡೆಸಿ ಈ ಹಡಗು ವೀಕ್ಷಣೆ ನಡೆಸಿ ದರೆ ಅಷ್ಟೊಂದು ಸ್ಪಷ್ಟವಾಗಿ ಹಡಗು ಗೋಚರವಾಗದು. ಅಲ್ಲದೆ ಆ ಪ್ರದೇಶದಲ್ಲಿ ಡಿಸೆಂಬರ್‌ ಬಳಿಕ ನೀರು ಅಷ್ಟೊಂದು ತಿಳಿಯಾಗಿರುವುದಿಲ್ಲ ಎಂಬ ಕಾರಣಕ್ಕೆ ಈ ಯೋಜನೆ ಕೈಬಿಡಲಾಗಿದೆ.ಹೊಸ ಯೋಜನೆಯಂತೆ ಇದೀಗ ಸ್ಕೂಬಾ ಡೈವ್‌ ನಡೆಸಲು ಪಣಂಬೂರು ಬೀಚ್‌ನ ಬೇರೊಂದು ಪ್ರದೇಶದ ಹುಡುಕಾಟ ನಡೆಯುತ್ತಿದೆ. ಎಲ್ಲವೂ ಅಂತಿಮ  ವಾದ ಬಳಿಕ ಜಿಲ್ಲಾಡಳಿತ ಸಹಿತ ಸಂಬಂಧ ಪಟ್ಟ ಇಲಾಖೆಯ ಒಪ್ಪಿಗೆ ದೊರೆತರೆ ಮಂಗಳೂರು ಸಮುದ್ರ ಕೂಡ ಸ್ಕೂಬಾ ಡೈವ್‌ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದೆ.

ಸ್ಕೂಬಾ ಡೈವ್‌ ಅಂದರೆ ಸಮುದ್ರದ ನೀರಿನೊಳಗಡೆ ಧುಮುಕುವಂತಹ ಕಲೆಯಾಗಿದೆ. ಈ ವೇಳೆ ಲೈಫ್‌ ಜಾಕೆಟ್‌, ಆಮ್ಲಜನಕ ಇರಿಸಿ ಸಮುದ್ರ ಪ್ರವೇಶಿಸಲಾಗುತ್ತದೆ. ಉಸಿರಾಟದ ಕೊಳವೆಯೊಂದಿಗೆ ನೀರಿನಾಳಕ್ಕೆ ಇಳಿಯಲಾಗುತ್ತದೆ. ಪ್ರವಾಸಿಗರು ಸಮುದ್ರದಾಳದಲ್ಲಿರುವ ಹವಳದ ದಿಬ್ಬಗಳು, ಆಕರ್ಷಕ ಮೀನುಗಳು ಹಾಗೂ ವೈವಿಧ್ಯಮಯ ಜೀವರಾಶಿಗಳನ್ನು ವೀಕ್ಷಿಸಬಹುದು.

ಕಾಪುವಿನಲ್ಲಿ ಆರಂಭ
ಕಾರವಾರದ ನೇತ್ರಾಣಿ ದ್ವೀಪ ಹೊರತುಪಡಿಸಿ ಕಾಪು ಬೀಚ್‌ನಲ್ಲಿ ಸ್ಕೂಬಾ ಡೈವ್‌ಗೆ ಅವಕಾಶ ಕಲ್ಪಿಸಲಾ ಗಿದೆ. ಕಾಪು ಬೀಚ್‌ನಿಂದ ಸಮುದ್ರದಲ್ಲಿ 8 ಕಿ.ಮೀ. ದೂರದಲ್ಲಿ “ಮೂಲ್ಕಿ ಪಾರ್‌’ ಎಂಬಲ್ಲಿ ಅವಕಾಶ ದೊರೆತಿದೆ. 10 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮುಂಗಡ ಬುಕ್ಕಿಂಗ್‌ ಕೂಡ ಲಭ್ಯವಿದ್ದು, ಓರ್ವರಿಗೆ 4,500 ರೂ. ನಿಗದಿಪಡಿಸಲಾಗಿದೆ.

ಪರಿಶೀಲಿಸಲಾಗುತ್ತಿದೆ
ಪಣಂಬೂರ್‌ ಬೀಚ್‌ನಲ್ಲಿ ಮುಳುಗಿದ ಹಡಗು ಅವಶೇಷ ನೋಡುವ ನಿಟ್ಟಿನಲ್ಲಿ ಸ್ಕೂಬಾ ಡೈವ್‌ ಆರಂಭಿಸಲು ಚಿಂತಿಸಲಾಗಿತ್ತು. ಆದರೆ ಹಡಗು ಸ್ಪಷ್ಟವಾಗಿ ಕಾಣದು ಎಂದು ಈ ಯೋಜನೆ ಕೈ ಬಿಡಲಾಗಿದ್ದು, ಇದೀಗ ಕಡಲಿನ ಮತ್ತೂಂದು ಸ್ಥಳ ಪರಿಶೀಲಿಸಲಾಗುತ್ತಿದೆ. ಬಳಿಕ, ಸಂಬಂಧಪಟ್ಟ ಇಲಾಖೆಗಳ ಒಪ್ಪಿಗೆ ಪಡೆದು ಸ್ಕೂಬಾ ಡೈವ್‌ ಆರಂಭಿಸಲಾಗುವುದು.
 - ಯತೀಶ್‌ ಬೈಕಂಪಾಡಿ, ಪಣಂಬೂರು ಬೀಚ್‌ ಅಭಿವೃದ್ಧಿ ನಿಗಮದ ಸಿಇಒ

- ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.