ಮತ್ತೆ ಅಬ್ಬರಿಸಲಿದೆಯೇ ಕಡಲು; ಶುರುವಾಗಿದೆ ಢವ ಢವ!
Team Udayavani, May 26, 2018, 4:14 AM IST
ಇನ್ನು ಎರಡು ವಾರಗಳೊಳಗೆ ಮುಂಗಾರು ಮಳೆ ಪ್ರವೇಶಿಸಲಿರುವ ಹಿನ್ನೆಲೆಯಲ್ಲಿ ಪಾಲಿಕೆಯು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಪ್ರಾರಂಭಿಸಿದೆ. ಎಲ್ಲೆಲ್ಲಿ ಯಾವ ರೀತಿಯ ಕ್ರಮ ಕೈಗೊಂಡಿದೆ. ಇನ್ನೂ ಕೈಗೊಳ್ಳಬೇಕಾದ ಕ್ರಮಗಳೇನು ಇತ್ಯಾದಿ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ಸದುದ್ದೇಶ ಈ ‘ಮುಂಗಾರು ಮುಂಜಾಗ್ರತೆೆ’ ಸುದಿನ ಅಭಿಯಾನದ್ದು. ಮಳೆಗಾಲದ ಸಮಸ್ಯೆಗಳ ಬಗ್ಗೆ ಸುದಿನ ವ್ಯಾಟ್ಸಪ್ ಗೆ ಮಾಹಿತಿ ನೀಡಿ: 9900567000
ಮಹಾನಗರ : ಕಡಲ್ಕೊರೆತ ವಿಪರೀತವಾದಾಗಲೆಲ್ಲ ಅಲ್ಲಿನ ಜನ ಬೀದಿಗೆ ಬರುತ್ತಾರೆ. ಆಗ, ಜನಪ್ರತಿನಿಧಿಗಳು ಅಲ್ಲಿಗೆ ಓಡೋಡಿ ಬರುತ್ತಾರೆ. ತಾತ್ಕಾಲಿಕವಾಗಿ ನಾಲ್ಕೈದು ಲೋಡು ಕಲ್ಲು ಕಡಲಿನ ಬದಿಗೆ ಹಾಕುವ ಕೆಲಸ ನಡೆಯುತ್ತದೆ. ಕಲ್ಲು ಹಾಕಿದ ಕೆಲವೇ ದಿನದಲ್ಲಿ ಕಡಲಿನ ಅಲೆಗಳ ಹೊಡೆತಕ್ಕೆ ಸಿಲುಕಿ ಕಲ್ಲೇ ಕಡಲಿಗೆ ಆಹುತಿಯಾಗುತ್ತದೆ. ಮತ್ತೆ ರಾಜಕೀಯ/ಅಧಿಕಾರಿಗಳ ಗಢಣ ಓಡೋಡಿ ಬರುತ್ತಾರೆ. ಮನೆ ಕಳೆದವರಿಗೆ ಅದರ ತೀವೃತೆಯನ್ನು ಮನಗಂಡು ಲೆಕ್ಕಹಾಕಿ ಒಂದಿಷ್ಟು ಪರಿಹಾರ ನೀಡುತ್ತಾರೆ. ಅಲ್ಲಿಗೆ ಒಂದು ವರ್ಷದ ಕಡಲ್ಕೊರೆತ ಸಮಸ್ಯೆ ನಿವಾರಣೆಯಾದಂತೆ! ಮತ್ತೆ ಮುಂದಿನ ಮಳೆಗಾಲ-ಮುಂದಿನ ಕಡಲ್ಕೊರೆತ!
ನಿಜಕ್ಕೂ ಕರಾವಳಿ ಭಾಗದಲ್ಲಿ ಮಳೆಗಾಲದ ಸಂದರ್ಭ ಎದುರಾಗುವ ನೈಜ ದರ್ಶನವಿದು. ಕಡಲು ಎಂದಿನಂತೆ ಅಬ್ಬರಿಸುತ್ತದೆ. ಸರಕಾರ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತದೆ. ಜನ ಒಮ್ಮೆಗೆ ಬೀದಿಗೆ ಬರುತ್ತಾರೆ. ಆ ಬಳಿಕ ನೆನಪಾಗುವುದು ಮುಂದಿನ ಮಳೆಗಾಲಕ್ಕೆ. ಹೀಗಾಗಿ, ಕಡಲ್ಕೊರೆತ ಎಂಬುದಕ್ಕೆ ಶಾಶ್ವತವಾದ ಪರಿಹಾರ ಸಿಗಲೇ ಇಲ್ಲ. ಆತಂಕ ಮಾತ್ರ ಪ್ರತೀ ವರ್ಷ ಮಳೆಗಾಲದಲ್ಲಿ ಎದುರಾಗುತ್ತಲೇ ಇದೆ.
ಉಳ್ಳಾಲ – ಸಸಿಹಿತ್ಲು
ದ.ಕ.ಜಿಲ್ಲೆಯ ತಲಪಾಡಿಯಿಂದ ಉಡುಪಿ ಜಿಲ್ಲೆಯ ಶಿರೂರು ತನಕ ಹೆಚ್ಚಾ ಕಡಿಮೆ 168 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಕಡಲ್ಕೊರೆತ ಸಮಸ್ಯೆ ಇದ್ದೇ ಇದೆ. ಇದರಲ್ಲೂ ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಸ್ವಲ್ಪ ಹೆಚ್ಚು ಎಂದೇ ಉಲ್ಲೇಖಿಸಬಹುದು. ಉಳ್ಳಾಲ-ಸಸಿಹಿತ್ಲು-ಮುಕ್ಕ ಸೇರಿದಂತೆ ಮಂಗಳೂರು ವ್ಯಾಪ್ತಿ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅಧಿಕ ಪ್ರಮಾಣದಲ್ಲಿ ಕಡಲ್ಕೊರೆತ ಸಮಸ್ಯೆ ಕಾಣಿಸುತ್ತಿದೆ. ಈ ಪೈಕಿ ಉಳ್ಳಾಲ- ಸೋಮೇಶ್ವರ ಭಾಗದಲ್ಲಿ ಅತ್ಯಧಿಕ. ಉಳ್ಳಾಲ, ಸುಭಾಷ್ನಗರ, ಕೈಕೋ ಹಿಲೇರಿಯಾ ವ್ಯಾಪ್ತಿಯಲ್ಲಿ ಹಲವು ಮನೆಗಳು ಸಮುದ್ರಪಾಲಾಗಿರುವ ಉದಾಹರಣೆ ಇದೆ. ಹಲವು ಜನರು ಬೀದಿಗೆ ಬಂದಿದ್ದರು. ಈಗ ಮಳೆಗಾಲ ಮತ್ತೆ ಬಂದ ಕಾರಣ ಮತ್ತೂಮ್ಮೆ ಆತಂಕ ಎದುರಾಗಿದೆ. ಹಲವು ರೀತಿಯಲ್ಲಿ ಪ್ರಯೋಗಗಳು, ಸಮೀಕ್ಷೆಗಳು, ವರದಿಗಳು, ತಂತ್ರಜ್ಞಾನ ಗಳು, ಕಾಂಕ್ರೀಟ್ ತಡೆಗೋಡೆ, ಕಡಲಿಗೆ ಕಲ್ಲು, ಮರಳು ಚೀಲ ಇಡುವುದು ಸೇರಿದಂತೆ ಹತ್ತು ಹಲವು ಬಗೆಯ ಮೂಲಕ ಕಡಲ್ಕೊರೆತ ತಡೆಗಟ್ಟಲು ಪ್ರಯತ್ನ ಮಾತ್ರ ಸಾಗುತ್ತಲೇ ಇದೆ. ಆದರೆ, ಕಡಲ್ಕೊರೆತ ಮಾತ್ರ ಇನ್ನೂ ಕಡಿಮೆಯಾದ ಬಗ್ಗೆ ಉಲ್ಲೇಖವಿಲ್ಲ.
ತೀರ ಪ್ರದೇಶದವರ ಸ್ಥಳಾಂತರ; ಮರೆಯಾದ ಯೋಜನೆ
ಉಳ್ಳಾಲ ಸುತ್ತಮುತ್ತಲ ಪ್ರದೇಶದಲ್ಲಿ ಕಡಲ್ಕೊರೆತ ಪ್ರತೀವರ್ಷದ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಂತ್ರಸ್ತರಿಗೆ ಪರ್ಯಾಯ ಸ್ಥಳದಲ್ಲಿ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸುವಂತೆ ಈಗಿನ ಶಾಸಕ ಯು.ಟಿ.ಖಾದರ್ ಅವರು ಸೂಚಿಸಿದ್ದರು. ಇದರಂತೆ ಆಗಿನ ಜಿಲ್ಲಾಧಿಕಾರಿ ಡಾ| ಕೆ.ಜಿ.ಜಗದೀಶ್ ಅವರು, ಸ್ಥಳಾಂತರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು. ತೀರ ಪ್ರದೇಶದಲ್ಲಿ ಅತ್ಯಂತ ಆತಂಕಿತರಾಗಿ ಜೀವನ ನಿರ್ವಹಿಸುತ್ತಿರುವ ಮನೆ ಮಂದಿಗೆ ಶಾಶ್ವತವಾಗಿ ಬೇರೆ ಕಡೆಗಳಲ್ಲಿ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸೂಕ್ತ ಸ್ಥಳ ಹುಡುಕಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ, ಜಿಲ್ಲಾಧಿಕಾರಿ ಬದಲಾಗುತ್ತಿದ್ದಂತೆ ಪುನರ್ವಸತಿ ವಿಚಾರ ಅವರ ಜತೆಗೆ ಮರೆಯಾಗಿದೆ.
ಅಗ್ನಿಶಾಮಕದಳದ ಔಟ್ಪೋಸ್ಟ್ ಅಗತ್ಯ
ಕಡಲ್ಕೊರತೆ ಸಮಸ್ಯೆ ಎದುರಾದಾಗ, ಮನೆ – ಮಠ ಕಳೆದುಕೊಂಡಾಗ ಅಥವಾ ಇನ್ನಿತರ ಅವಘಡ ಎದುರಾದಾಗ ಅದನ್ನು ಎದುರಿಸಲು ಸರಕಾರ ಸದಾ ಸಿದ್ಧವಾಗಿರಬೇಕು. ಇದಕ್ಕಾಗಿ ಅಧಿಕಾರಿಗಳ ತಂಡ ಸನ್ನದ್ಧವಾಗಿರಬೇಕು. ವಿಶೇಷವಾಗಿ ಅಗ್ನಿಶಾಮಕ ದಳದ ಸಿಬಂದಿ ಇಲ್ಲಿ ಹೆಚ್ಚು ಕಾರ್ಯನಿರ್ವಹಿಸಬೇಕಾಗುತ್ತದೆ. ಹೀಗಾಗಿ ಈ ಭಾಗದಲ್ಲಿ ಪ್ರತ್ಯೇಕವಾಗಿ ಔಟ್ಪೋಸ್ಟಿಂಗ್ ವ್ಯವಸ್ಥೆಯನ್ನು ಮಳೆಗಾಲದ ಸಂದರ್ಭ ಆಯೋಜಿಸಿದರೆ ಉತ್ತಮ.
‘ಸಂಭವನೀಯ ಸ್ಥಳಗಳ ವಿವರ ಸಂಗ್ರಹ’
ಕಡಲ್ಕೊರೆತ ನಿವಾರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಈಗಾಗಲೇ ಮಾಡಲಾಗುತ್ತಿದೆ. ಮಳೆಗಾಲದ ಸಂದರ್ಭ ಹೆಚ್ಚು ಸಂಭವನೀಯ ಕಡಲ್ಕೊರೆತ ನಡೆಯುವ ಸ್ಥಳವನ್ನು ಪಟ್ಟಿ ಮಾಡಿ ನೀಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅದರಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು.
-ಸಸಿಕಾಂತ್ ಸೆಂಥಿಲ್, ಜಿಲ್ಲಾಧಿಕಾರಿ
— ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ