ಸುರಕ್ಷಿತ ಪ್ರಯಾಣಕ್ಕೆ ಸೀಟ್‌ಬೆಲ್ಟ್  ಧಾರಣೆ ಅತ್ಯಗತ್ಯ 


Team Udayavani, Sep 2, 2021, 7:50 AM IST

ಸುರಕ್ಷಿತ ಪ್ರಯಾಣಕ್ಕೆ ಸೀಟ್‌ಬೆಲ್ಟ್  ಧಾರಣೆ ಅತ್ಯಗತ್ಯ 

ಮಂಗಳೂರು: ಸಣ್ಣಪುಟ್ಟ ಅಜಾಗರೂಕತೆ ಕೂಡ ಕೆಲವೊಂದು ಬಾರಿ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಅದೇ ರೀತಿ, ವಾಹನಗಳಲ್ಲಿ ಪ್ರಯಾಣಿಸುವಾಗ ಅವುಗಳಲ್ಲಿ ಲಭ್ಯವಿರುವ ಆಧುನಿಕ ಸೌಲಭ್ಯಗಳ ಉಪಯೋಗವನ್ನು ನಿರ್ಲಕ್ಷಿಸಿದರೆ ಅದರಿಂದ ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿಯೂ ಎದುರಾಗಬಹುದು. ಇಂತಹ  ಸನ್ನಿವೇಶ ಮಂಗಳವಾರವಷ್ಟೇ ಬೆಂಗಳೂರಿನಲ್ಲಿ ಘಟಿಸಿದ್ದು ಸುರಕ್ಷಿತ ಪ್ರಯಾಣಕ್ಕೆ ಚಾಲಕರು ಎಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ.

ಬೆಂಗಳೂರಿನ ಕೋರಮಂಗಲದಲ್ಲಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, ಇದಕ್ಕೆ ಸೀಟ್‌ಬೆಲ್ಟ್ ಹಾಕದೇ ಇರುವುದು ಕಾರಣ ಎಂಬ ಚರ್ಚೆ ಶುರುವಾಗಿದೆ. ಸೀಟ್‌ಬೆಲ್ಟ್ ಧರಿಸದ ಕಾರಣ ಕಾರಿನಲ್ಲಿದ್ದ ಏರ್‌ ಬ್ಯಾಗ್‌ ಕೂಡ ತೆರೆದುಕೊಂಡಿಲ್ಲ. ಇದರಿಂದಾಗಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗ ಚಾಲಕರು ಮತ್ತು ಪ್ರಯಾಣಿಕರು ಅಗತ್ಯವಾಗಿ ಸೀಟ್‌ಬೆಲ್ಟ್ ಧರಿಸಬೇಕು. ಈ ಮೂಲಕ ಅಪಘಾತ ಉಂಟಾಗುವ ವೇಳೆ ಆಗುವ ಶೇ. 80ರಷ್ಟು ಗಾಯದಿಂದ ತಪ್ಪಿಸಿಕೊಳ್ಳಬಹುದಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾರು, ಜೀಪು ಸೇರಿದಂತೆ ಹೆಚ್ಚಿನ ವಾಹನಗಳಲ್ಲಿ ಸೀಟ್‌ ಬೆಲ್ಟ್‌ಗಳು ಇರುತ್ತವೆ. ಅದರಲ್ಲೂ ಕಾರುಗಳಲ್ಲಿ ಮುಂಬದಿ ಮತ್ತು ಹಿಂಬದಿ ಸೀಟುಗಳಲ್ಲಿ ಸೀಟ್‌ಬೆಲ್ಟ್ ಇರುತ್ತದೆ. ಸೀಟ್‌ಬೆಲ್ಟ್ ಧರಿಸಿ ಚಾಲನೆ ಮಾಡುವಾಗ ಚಾಲಕರಿಗೆ ಮುಖ್ಯವಾಗಿ ತನ್ನ ಚಾಲನೆಯಲ್ಲಿ ಕಂಫರ್ಟ್‌ ಇರುತ್ತದೆ. ಅದರಲ್ಲೂ ಇತ್ತೀಚಿನ ಕಾರುಗಳಲ್ಲಿ ಸೀಟ್‌ಬೆಲ್ಟ್ ಧರಿಸದೇ ಕುಳಿತುಕೊಂಡರೆ ಚಾಲನೆ ಮಾಡುವಾಗ ಅಲರ್ಟ್‌ ತಂತ್ರಜ್ಞಾನ ಬಂದಿದೆ.  ಅಪಘಾತ ಸಮಯದಲ್ಲಿ ಪ್ರಯಾಣಿಕ ಮುಂದಕ್ಕೆ ಅಥವಾ ಹಿಂದಕ್ಕೆ ಬಾಗುವುದರಿಂದ ಸೀಟ್‌ಬೆಲ್ಟ್ ರಕ್ಷಣೆ ನೀಡುತ್ತದೆ.

ಏರ್‌ ಬ್ಯಾಗ್‌ ತೆರೆಯಲು  ಸೀಟ್‌ಬೆಲ್ಟ್ ಮುಖ್ಯ ಅಪಘಾತದಿಂದ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಇತ್ತೀಚಿನ ಕಾರುಗಳಲ್ಲಿ ಏರ್‌ಬ್ಯಾಗ್‌ ವ್ಯವಸ್ಥೆ ಇರುತ್ತದೆ. ಮುಂಬದಿಯ ಎರಡೂ ಸೀಟುಗಳಲ್ಲಿ ಈ ವ್ಯವಸ್ಥೆ ಅಳವಡಿಸಲಾಗಿರುತ್ತದೆ. ಅಪಘಾತ ಸಮಯ ಸೀಟ್‌ಬೆಲ್ಟ್ ಧರಿಸಿದರೆ ಮಾತ್ರ ಏರ್‌ ಬ್ಯಾಗ್‌ನಿಂದ ಹೆಚ್ಚಿನ ಸುರಕ್ಷತೆ ಸಿಗುತ್ತದೆ. ಏರ್‌ ಬ್ಯಾಗ್‌ ತೆರೆದುಕೊಳ್ಳಲು ಕಾರಿಗೆ  ಸೆನ್ಸಾರ್‌ ಅಳವಡಿಸಿರುತ್ತಾರೆ. ಸೀಟ್‌ಬೆಲ್ಟ್ ಅಳವಡಿಸಿದ್ದರೆ ಅಪಘಾತವಾಗುವ ಸಮಯ ಚಾಲಕರು ಸ್ಟೇರಿಂಗ್‌ಗೆ ಬಾಗದಂತೆ ಇದು ಬಿಗಿದಿಟ್ಟುಕೊಳ್ಳು ತ್ತದೆ. ಆ ವೇಳೆ ಏರ್‌ ಬ್ಯಾಗ್‌ ತೆರೆದು ಅನಾಹುತ ಸಂಭವಿಸುವ ಸಾಧ್ಯತೆ ಕಡಿಮೆ ಮಾಡುತ್ತದೆ. ಒಂದು ವೇಳೆ ಸೀಟ್‌ಬೆಲ್ಟ್ ಧರಿಸದೇ ಇದ್ದರೆ ಏರ್‌ ಬ್ಯಾಗ್‌ ತೆರೆಯುವುದಿಲ್ಲ. ಅಲ್ಲದೆ, ಅಪಘಾತದ ತೀವ್ರತೆಗೆ ಅಥವಾ ಬ್ರೇಕ್‌ ಹಾಕುವಾಗ ತನ್ನ ಮುಖ, ಎದೆ ಭಾಗ ಕಾರಿನ ಸ್ಟೇರಿಂಗ್‌ ಅಥವಾ ಎದುರಿನ  ಗ್ಲಾಸ್‌ಗೆ ಹೊಡೆದು ಪೆಟ್ಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಸುರಕ್ಷಿತ ಪ್ರಯಾಣಕ್ಕೆ ಚಾಲಕರು ಸೀಟ್‌ಬೆಲ್ಟ್ ಧರಿಸುವುದು ಅತೀ ಮುಖ್ಯ.

  • ಒಂದುವೇಳೆ ಅಪಘಾತವಾದರೂ ಸೀಟ್‌ಬೆಲ್ಟ್ ಧರಿಸುವುದರಿಂದ ಪ್ರಯಾಣಿಕರು ಸುರಕ್ಷಿತವಾಗಿ ಆಸನ ದಲ್ಲಿಯೇ ಉಳಿಯುತ್ತಾರೆ
  • ಸೀಟ್‌ಬೆಲ್ಟ್ ಧರಿಸಿದರೆ ಅಪಘಾತ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆ ಕಡಿಮೆ ಇರುತ್ತದೆ
  • ಸೀಟ್‌ಬೆಲ್ಟ್ ಧರಿಸದೇ ಇದ್ದರೆ ಕಾರುಗಳಲ್ಲಿ ಏರ್‌ಬ್ಯಾಗ್‌ ರಕ್ಷಣೆ ಸಿಗುವುದಿಲ್ಲ

ಕಾರುಗಳಲ್ಲಿ ಸೀಟ್‌ ಬೆಲ್ಟ್ ಧರಿಸಿಯೇ ವಾಹನ ಚಾಲನೆ ಮಾಡಬೇಕು. ಆಗ ಮಾತ್ರ ಸಂಭಾವ್ಯ ಅಪಘಾತವನ್ನು ತಡೆಯಲು ಸಾಧ್ಯ. ಅಪಘಾತ ವೇಳೆ ಹಠಾತ್‌ ಬ್ರೇಕ್‌ ಹಾಕಿದಾಗ ಸೀಟ್‌ ಬೆಲ್ಟ್ ನಮ್ಮನ್ನು ರಕ್ಷಿಸುತ್ತದೆ. ಪ್ರಯಾಣದ ವೇಳೆ ಜೀವ ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಕೂಡ ಸೀಟ್‌ ಬೆಲ್ಟ್ ಧರಿಸಬೇಕು.–  ಮಹೇಂದ್ರ ಜೈನ್‌,   ಸೀನಿಯರ್‌ ರಿಲೇಷನ್‌ಶಿಪ್‌ ಮ್ಯಾನೇಜರ್‌,  ಭಾರತ್‌ ಆಟೋ ಕಾರ್ ಲಿ. ಮಂಗಳೂರು

ಶೇ.80ರಷ್ಟು ಸುರಕ್ಷಿತ ಸೀಟ್‌ಬೆಲ್ಟ್ ಧರಿಸಿ ಚಾಲನೆ ಮಾಡುವುದರಿಂದ ಪ್ರಯಾಣಿಕರು ಶೇ.80ರಷ್ಟು ಸುರಕ್ಷಿತ ರಾಗುತ್ತಾರೆ. ಇತ್ತೀಚಿನ ಕೆಲವೊಂದು ಅಪಘಾತಕ್ಕೆ ಸೀಟ್‌ ಬೆಲ್ಟ್ ಧರಿಸದೇ ಇರುವುದು ಕೂಡ ಕಾರಣವಾಗುತ್ತಿದೆ. – ಪುರುಷೋತ್ತಮ ಕಮಿಲ,  ದ.ಕ. ಜಿಲ್ಲಾ ಗ್ರಾರೇಜ್‌ ಮಾಲಕರ   ಸಂಘದ ಪ್ರ. ಕಾರ್ಯದರ್ಶಿ

ಸೀಟ್‌ಬೆಲ್ಟ್ ಅಳವಡಿಕೆ ಅವಶ್ಯ ವಾಹನಗಳಲ್ಲಿ ಸೀಟ್‌ಬೆಲ್ಟ್ ಧರಿಸಿ ಚಾಲನೆ ಮಾಡಬೇಕು. ಹೊಸ ಕಾನೂನಿನ ಪ್ರಕಾರ ಸೀಟ್‌ಬೆಲ್ಟ್ ಧರಿಸದೆ ಚಾಲನೆ ಮಾಡುವವರಿಗೆ 1000 ರೂ. ದಂಡ ವಿಧಿಸಬಹುದಾಗಿದೆ. ಆದರೆ, ಕೋವಿಡ್‌ ಕಾರಣ ಸದ್ಯ 500 ರೂ. ದಂಡ ವಿಧಿಸಲಾಗುತ್ತಿದೆ.– ವರ್ಣೇಕರ್‌, ಮಂಗಳೂರು ಆರ್‌ಟಿಒ

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.