ಸುಳ್ಯ-ಮಡಿಕೇರಿ ಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ!
Team Udayavani, Jun 28, 2022, 8:32 AM IST
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗ ಮತ್ತು ಮಡಿಕೇರಿಯ ಕೆಲ ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸದ ಅನುಭವವಾಗಿದೆ. ಮೂರು ದಿನಗಳ ಹಿಂದಷ್ಟೇ ಈ ಭಾಗಗಳಲ್ಲಿ ಲಘು ಭೂಕಂಪನವಾಗಿದ್ದು, ಇದೀಗ ಮತ್ತೆ ಭೂಮಿ ಅದುರಿದೆ.
ಸುಳ್ಯ ತಾಲೂಕಿನ ಹಲವು ಕಡೆ ಸದ್ದುನೊಂದಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಸುಳ್ಯ, ಪಂಜ, ಗುತ್ತಿಗಾರು, ಐವರ್ನಾಡು, ಉಬರಡ್ಕ ಮಿತ್ತೂರು, ಕಲ್ಲಾಜೆ, ಎಲಿಮಲೆ, ಮರ್ಕಂಜ, ಅರಂತೋಡು, ಸಂಪಾಜೆ ಮೊದಲಾದ ಕಡೆಗಳಲ್ಲಿ ಕಂಪಿಸಿದ ಅನುಭವವಾಗಿದೆ.
ಇದನ್ನೂ ಓದಿ:ಕರಾವಳಿಯಲ್ಲಿ ಇನ್ನೂ ಅನುಷ್ಠಾನಕ್ಕೆ ಬಾರದ ಸೈರನ್ ಟವರ್ಗಳು
ಬೆಳಗ್ಗೆ 7.45 ರ ಸುಮಾರಿಗೆ ಭಾರೀ ಸದ್ದಿನೊಂದಿಗೆ ಅದೇ ವೇಳೆಗೆ ಭೂಮಿ ಕಂಪಿಸಿದೆ. ಮೂರು ದಿನಗಳ ಹಿಂದೆ ಭೂಮಿ ಕಂಪಿಸಿದ್ದಕ್ಕಿಂತ ಹೆಚ್ಚಿನ ಕಂಪನವಿತ್ತು, ಸರಿಯಾಗಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ಮಾಹಿತಿ ನೀಡಿದ್ದಾರೆ.
ಕೊಡಗು ಜಿಲ್ಲೆಯ ನಾಪೋಕ್ಲು ಕುಕ್ಕುಂದ, ಕಾಡು, ಬಲ್ಲಮಾವಟ್ಟಿ, ದಬ್ಬಡ್ಕ, ಪೆರಾಜೆ, ಕರಿಕೆ, ಭೂತನಕಾಡು, ಭಾಗಮಂಡಲ ಸೇರಿದಂತೆ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್