ಒಲ್ಲದ ಮನಸ್ಸಿನಿಂದಲೇ ವಿದ್ಯಾರ್ಥಿಗಳು ಕಾಲೇಜಿಗೆ ಹಾಜರ್‌ 


Team Udayavani, May 3, 2018, 10:32 AM IST

3-May-3.jpg

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ದ್ವಿತೀಯ ಪಿಯುಸಿ ತರಗತಿಗಳು ಪುನರಾರಂಭವಾಗುತ್ತವೆ ಎಂಬ ಬಗ್ಗೆ ಬೇಸಗೆ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಇಲಾಖೆಯು ದಿಢೀರ್‌ ಶಾಕ್‌ ನೀಡಿತ್ತು. ಅದರಂತೆ, ಬುಧವಾರದಿಂದ ತರಗತಿಗಳು ಪ್ರಾರಂಭಗೊಂಡಿವೆ. ಈ ರೀತಿಯ ಬದಲಾವಣೆಯಿಂದ ಮೊದಲ ದಿನ ಹೇಗಿತ್ತು, ವಿದ್ಯಾರ್ಥಿಗಳು/ಶಿಕ್ಷಕರು ಈ ಬಗ್ಗೆ ಏನಂತಾರೆ? ಈ ಕುರಿತು ನಗರದ ನಾಲ್ಕು ಕಾಲೇಜುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ- ಧನ್ಯಾ ಬಾಳೆಕಜೆ

ಮಹಾನಗರ: ಒಂದೆಡೆ ಚುನಾವಣ ಕರ್ತವ್ಯ, ಇನ್ನೊಂದೆಡೆ ಎಸೆಸೆಲ್ಸಿ ಫಲಿತಾಂಶ ಪ್ರಕಟವಾದಂತೆಯೇ ಪ್ರವೇಶಾತಿ ಪ್ರಕ್ರಿಯೆ ನಿರ್ವಹಣೆಯ ಜವಾಬ್ದಾರಿ. ಈ ನಡುವೆ ದ್ವಿತೀಯ ಪಿಯುಸಿ ತರಗತಿ ನಡೆಸಬೇಕಾದ ಅನಿವಾರ್ಯತೆ…

ಉಪನ್ಯಾಸಕರಿಗೆ ವಿಪರೀತ ಕೆಲಸದ ಒತ್ತಡದ ಚಿಂತೆಯಾದರೆ, ರಜೆ ಕಡಿತದಿಂದ ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಅಸಮಾಧಾನ. ಒಲ್ಲದ ಮನಸ್ಸಿನಿಂದಲೇ ಕಾಲೇಜಿಗೆ ಬಂದ ವಿದ್ಯಾರ್ಥಿ-ಉಪನ್ಯಾಸಕರು. ಮೇ ತಿಂಗಳ ರಜೆಯನ್ನು ಕಡಿತಗೊಳಿಸಿ ಮೇ 2ರಂದೇ ತರಗತಿ ಪುನರಾರಂಭಿಸಬೇಕೆಂಬ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಬುಧವಾರ ಕಾಲೇಜಿಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪ್ರತಿಕ್ರಿಯಿಸಿದ ರೀತಿಯಿದು.

ಪಾಠ ಮಾಡುವ ಮನಸ್ಸಿಲ್ಲ
ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಹಜವಾಗಿಯೇ ಮೇ ತಿಂಗಳಿನಲ್ಲಿ ರಜೆಯ ಖುಷಿಯಲ್ಲಿರುತ್ತಾರೆ. ಈ ಸಂದರ್ಭ ಫ್ಯಾಮಿಲಿ, ಪ್ರವಾಸ ಕಾರ್ಯಕ್ರಮಗಳು ಸಾಮಾನ್ಯ. ಆದರೆ ಈಗ ಇಡೀ ಶಿಕ್ಷಕ ವರ್ಗಕ್ಕೆ ಅಸಮಾಧಾನ ಉಂಟಾಗಿದೆ. ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರೂ ಕಲಾ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತೀರಾ ಕಡಿಮೆ ಇದೆ ಎನ್ನುತ್ತಾರೆ ನಗರದ ಪಪೂ ಕಾಲೇಜೊಂದರ ಉಪನ್ಯಾಸಕ.

ಶುಲ್ಕ ಪಾವತಿಗೂ ತೊಂದರೆ
ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆಯಿದ್ದರೂ ಆರಂಭದಲ್ಲೇ ತಿಳಿಸಬೇಕಿತ್ತು. ಆದರೆ ಅಂತಿಮ ಹಂತದಲ್ಲಿ ತಿಳಿಸಿದರೆ ಎಲ್ಲರಿಗೂ ತೊಂದರೆ ಯಾಗುತ್ತದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಸೌಲಭ್ಯ ತತ್‌ಕ್ಷಣಕ್ಕೆ ಸಿಗುವುದಿಲ್ಲ. ಬಹುತೇಕ ಬಡ ವಿದ್ಯಾರ್ಥಿಗಳು ಎರಡು ತಿಂಗಳ ರಜೆಯಲ್ಲಿ ದುಡಿಯಲು ತೆರಳಿ ಕಾಲೇಜು ಶುಲ್ಕಕ್ಕೆ ಹಣ ಸಂಗ್ರಹಿಸುತ್ತಾರೆ. ಅವಧಿಗೆ ಮುನ್ನವೇ ಕಾಲೇಜು ಆರಂಭದಿಂದ ಅವರ ಶುಲ್ಕ ಪಾವತಿಗೂ ತೊಂದರೆಯಾಗಿದೆ ಎನ್ನುತ್ತಾರೆ ಉಪನ್ಯಾಸಕರು.

ಸಂದೇಶ ಕಳಿಸಿದರು
ಮೇ 2ರಂದು ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಇಲಾಖೆ ನೀಡಿದ ಸೂಚನೆಯನ್ನು ಎಲ್ಲ ಕಾಲೇಜು ಪ್ರಮುಖರು ಸೂಕ್ತ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸಿದ್ದಾರೆ. ಇಲಾಖೆ ಸುತ್ತೋಲೆ ಲಭ್ಯವಾದ ಅತ್ಯಲ್ಪ ಸಮಯದಲ್ಲೇ ಎಲ್ಲ ವಿದ್ಯಾರ್ಥಿಗಳಿಗೆ ಸಂದೇಶ ರವಾನಿಸಿ ಕಾಲೇಜು ಪುನರಾರಂಭದ ಬಗ್ಗೆ ಮಾಹಿತಿ ನೀಡಲಾಗಿದೆ.

ಹಾಜರಾತಿ ಪಟ್ಟಿ ಕಳುಹಿಸಿ!
ರಜೆ ಕಡಿತಗೊಳಿಸಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾಲೇಜಿಗೆ ಹಾಜರಾಗುತ್ತಾರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಬುಧವಾರ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಹಾಜರಾಗದ ಉಪನ್ಯಾಸಕರ ಹೆಸರುಗಳನ್ನು ಕಳುಹಿಸಲು ಎಲ್ಲ ಸರಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ.

ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಮತ್ತು ಅನುದಾನಿತ ಕಾಲೇಜುಗಳ ಬಹುತೇಕ ಶಿಕ್ಷಕರಿಗೆ ಕಡ್ಡಾಯವಾಗಿ ಚುನಾವಣಾ ಕರ್ತವ್ಯಕ್ಕೆ ತೆರಳುವಂತೆ ಸೂಚಿಸಲಾಗಿದೆ. ಅಲ್ಲದೆ ಮುಂದಿನ ಒಂದು ವಾರದೊಳಗೆ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳು ನಿಚ್ಚಳವಾಗಿದ್ದು, ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಎಲ್ಲ ಕೆಲಸಗಳ ಹೊಣೆ ಶಿಕ್ಷಕರ ಮೇಲಿದೆ. ಚುನಾವಣಾ ಕರ್ತವ್ಯ, ಪ್ರವೇಶಾತಿ ಪ್ರಕ್ರಿಯೆ ನಿರ್ವಹಣೆಯ ಜತೆಗೆ ವಿದ್ಯಾರ್ಥಿಗಳಿಗೆ ತರಗತಿ ತೆಗೆದುಕೊಳ್ಳಬೇಕಾದ ಹೆಚ್ಚುವರಿ ಕೆಲಸವೂ ಈಗ ಉಪನ್ಯಾಸಕರ ಮೇಲಿದೆ. ಚುನಾವಣಾ ಕರ್ತವ್ಯಕ್ಕೆ ರವಿವಾರವೂ ತೆರಳಬೇಕಾಗಿರುವುದರಿಂದ ಸಮಯ ಹೊಂದಿಸಿಕೊಳ್ಳುವುದೇ ಉಪನ್ಯಾಸಕರಿಗೆ ಸಮಸ್ಯೆಯಾಗಿದೆ.

ಈ ಹಿಂದೆ ಮೇ 20ರಂದು ತರಗತಿಗಳನ್ನು ಆರಂಭಿಸುವ ಬಗ್ಗೆ ಸುತ್ತೋಲೆ ಕಳುಹಿಸಲಾಗಿತ್ತು. ಆದರೆ ಈಗ ಮೇ 2ರಂದೇ ಆರಂಭಿಸಲು ಇಲಾಖೆ ಸೂಚಿಸಿದೆ. ಚುನಾವಣೆ ಮುಗಿದ ಬಳಿಕವೇ ತರಗತಿ ಆರಂಭ ಮಾಡುತ್ತಿದ್ದರೆ ಒತ್ತಡ ಕಡಿಮೆಯಾಗುತ್ತಿತ್ತು ಎನ್ನುತ್ತಾರೆ ಜಿಲ್ಲಾ ಪಪೂ ಕಾಲೇಜು ಪ್ರಾಂಶುಪಾಲರ ಸಂಘದ ಪದಾಧಿಕಾರಿ ರತ್ನಾಕರ ಬನ್ನಾಡಿ.

ವಿದ್ಯಾರ್ಥಿಗಳ ಆಕ್ರೋಶ
ರಜೆ ಕಡಿತಗೊಳಿಸಿ ತರಗತಿ ಪುನಾರಂಭಿಸಲು ಸೂಚಿಸಿದ ಪಪೂ ಶಿಕ್ಷಣ ಇಲಾಖೆಯ ಧೋರಣೆಯನ್ನು ವಿರೋಧಿಸಿ ನಗರದ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಇಲಾಖೆ ಸೂಚನೆಯನ್ನು ಪಾಲಿಸಬೇಕು ಎಂಬ ಹಿನ್ನೆಲೆಯಲ್ಲಿ ಉಪನ್ಯಾಸಕರೇ ವಿದ್ಯಾರ್ಥಿಗಳನ್ನು ಮನವೊಲಿಸಿದರು.

ನಿರ್ದೇಶನಕ್ಕೆ ಬದ್ಧ
ಪ.ಪೂ. ಶಿಕ್ಷಣ ಇಲಾಖೆಯು ಏಕಾಏಕಿ ತೆಗೆದುಕೊಂಡ ನಿರ್ಧಾರಕ್ಕೆ ಇಡೀ ಪಪೂ ಉಪನ್ಯಾಸಕ ಮತ್ತು ಪ್ರಾಂಶುಪಾಲ ವರ್ಗಕ್ಕೆ ಬೇಸರವಾಗಿದೆ. ಇದು ಸಮಂಜಸ ಕ್ರಮವಲ್ಲ. ಆದರೆ ಇಲಾಖೆ ನಿರ್ದೇಶನವನ್ನು ಉಲ್ಲಂಘಿಸುವಂತಿಲ್ಲ. ಎಲ್ಲ ಕಾಲೇಜು ಪ್ರಾಂಶುಪಾಲರೂ ಇಲಾಖೆ ನೀಡಿದ ಸೂಚನೆಗೆ ಬದ್ಧರಾಗಿದ್ದಾರೆ. 
– ಗಂಗಾಧರ ಆಳ್ವ,
ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ,
ಪ.ಪೂ. ಪ್ರಾಂಶುಪಾಲರ ಸಂಘ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.