ಮೌಲ್ಯಮಾಪನ ಎಡವಟ್ಟು ಏರಿಕೆ: ದ್ವಿತೀಯ ಪಿಯು; ಮರುಮೌಲ್ಯಮಾಪನ ನಿರೀಕ್ಷೆಯೇ ಅಧಿಕ !


Team Udayavani, Sep 26, 2022, 6:30 AM IST

ಮೌಲ್ಯಮಾಪನ ಎಡವಟ್ಟು ಏರಿಕೆ: ದ್ವಿತೀಯ ಪಿಯು; ಮರುಮೌಲ್ಯಮಾಪನ ನಿರೀಕ್ಷೆಯೇ ಅಧಿಕ !

ಮಂಗಳೂರು: ದ್ವಿತೀಯ ಪಿಯು ಫಲಿತಾಂಶದಲ್ಲಿ ತೃಪ್ತಿ ಹೊಂದಿಲ್ಲದ ವಿದ್ಯಾರ್ಥಿ ಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕು ವುದು ಸಾಮಾನ್ಯ. ಆದರೆ ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುತ್ತಿರುವುದು ಗಂಭೀರ ಚರ್ಚೆಗೆ ಕಾರಣವಾಗಿದೆ.

ಈ ಬಾರಿ ಪ್ರಕಟಿತ ಅಂಕ ಗಳಿಗಿಂತ ಮರುಮೌಲ್ಯಮಾಪನದ ಬಳಿಕ ಅಂಕಗಳು ವ್ಯತ್ಯಾಸವಾದ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಮರು ಮೌಲ್ಯ ಮಾಪನ ವಾದ ಬಳಿಕ ಬರೋಬ್ಬರಿ 2,047 ವಿದ್ಯಾರ್ಥಿ ಗಳಿಗೆ ಹೆಚ್ಚುವರಿ ಅಂಕ ದೊರೆತಿದ್ದರೆ, 2020 ರಲ್ಲಿ 2,318 ಮಂದಿಗೆ ದೊರಕಿತ್ತು. ಮೌಲ್ಯಮಾಪಕರ ಎಡವಟ್ಟಿನಿಂದ ಸಾವಿರಾರು ವಿದ್ಯಾರ್ಥಿಗಳ ಕೋರ್ಸ್‌ ಆಯ್ಕೆಗೆ ಹಿನ್ನಡೆಯಾಗಿತ್ತು.

ಈ ವರ್ಷ ಮರುಮೌಲ್ಯಮಾಪನಕ್ಕೆ ಹಾಕಿದ ವರ ಪೈಕಿ ವಿಜ್ಞಾನ ವಿಷಯದಲ್ಲಿ 4 ಅಂಕಗಳಿಗಿಂತ ಅಧಿಕ ಅಂಕವನ್ನು 558 (2020ರಲ್ಲಿ 472 ಮಂದಿ) ಮಂದಿ ಪಡೆದಿದ್ದರೆ, 4ಕ್ಕಿಂತ ಕಡಿಮೆ ಅಂಕ 291 (2020ರಲ್ಲಿ 182)ವಿದ್ಯಾರ್ಥಿಗಳ ಪಾಲಾಗಿದೆ. ಕಲಾ ಮತ್ತು ವಾಣಿಜ್ಯದಲ್ಲಿ 6ಕ್ಕಿಂತ ಅಧಿಕ ಅಂಕ 1,079 (2020ರಲ್ಲಿ 1540) ಮಂದಿಗೆ ದೊರೆತಿದೆ. 6ಕ್ಕಿಂತ ಕಡಿಮೆ 119 (2020ರಲ್ಲಿ 124) ಮಂದಿಯ ಪಾಲಾಗಿದೆ.

ಮೌಲ್ಯಮಾಪನದಲ್ಲಿ ವ್ಯತ್ಯಾಸ ಮಾಡಿದ ಮೌಲ್ಯಮಾಪಕರನ್ನು ಆ ಕಾರ್ಯದಿಂದ ತೆಗೆಯುವ ಬಗ್ಗೆ ಶಿಕ್ಷಣ ಇಲಾಖೆ ಒಂದೊಮ್ಮೆ ಚಿಂತನೆ ನಡೆಸಿತ್ತು. ಆದರೆ ಅದು ಪ್ರಸಕ್ತ ಸಂದರ್ಭ ಕಾರ್ಯಸಾಧುವಲ್ಲ ಎಂಬ ಕಾರಣದಿಂದ ಅನುಷ್ಠಾನವಾಗಿಲ್ಲ.

ಮರುಮೌಲ್ಯಮಾಪನ ವೇಳೆ ವಿದ್ಯಾರ್ಥಿಗೆ 6 ಅಂಕಗಳಿಗಿಂತ ಅಧಿಕ ಅಂಕ ದೊರೆತರೆ ಮಾತ್ರ ಅದನ್ನು ಸೇರ್ಪಡೆ ಮಾಡಲಾಗುತ್ತಿದೆ. ಆದರೆ ಅರ್ಧ ಅಂಕ ದೊರೆತರೂ ಆ ಅಂಕವನ್ನು ಸೇರ್ಪಡೆ ಮಾಡಬೇಕು ಎಂಬ ಕೂಗು ಇನ್ನೂ ಜಾರಿಗೆ ಬಂದಿಲ್ಲ.

ಮೌಲ್ಯಮಾಪನದಲ್ಲಿ ತೊಂದರೆ ಆದರೆ ದೊಡ್ಡ ನಷ್ಟ. ಅಂತಹ ಮೌಲ್ಯಮಾಪಕರಿಗೆ ವಿಧಿಸುವ ದಂಡದ ಮೊತ್ತವನ್ನು ಏರಿಸಲು ನಿರ್ಧರಿಸಲಾಗಿದೆ. ಈ ಬಾರಿ ಮರುಮೌಲ್ಯಮಾಪನಕ್ಕೆ ಹಾಕಿದ ಎಲ್ಲ ಪತ್ರಿಕೆಗಳನ್ನು ಗುರುತು ಮಾಡಿಕೊಂಡು ಮೌಲ್ಯಮಾಪನ ಮಾಡಿದವರ ಪಟ್ಟಿಯನ್ನು ತಯಾರಿಸಲು ನಿರ್ಧರಿಸಲಾಗಿದೆ.
– ಬಿ.ಸಿ. ನಾಗೇಶ್‌, ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕುವವರ ಸಂಖ್ಯೆ ಪ್ರಸ್ತುತ ಅಧಿಕವಿದೆ. ಮೌಲ್ಯಮಾಪನದ ವೇಳೆ ಒತ್ತಡದಿಂದ ಕೆಲವೊಮ್ಮೆ ಅಂಕ ವ್ಯತ್ಯಾಸವಾಗಬಹುದು. ಆದರೆ ಮರುಮೌಲ್ಯಮಾಪನದ ವೇಳೆ ಇದನ್ನು ಹೆಚ್ಚು ಗಮನ ನೀಡಿ ಪರಿಶೀಲಿಸಲಾಗುತ್ತದೆ.
– ಕೆ.ಎನ್‌. ಗಂಗಾಧರ ಆಳ್ವ, ಅಧ್ಯಕ್ಷರು, ಪದವಿ ಪೂರ್ವ ಕಾಲೇಜು ಸಂಘ, ದ.ಕ.

ಮೌಲ್ಯಮಾಪನಕ್ಕೆ ಸಲ್ಲಿಕೆಯಾದ ಮನವಿ
2020 ವಾರ್ಷಿಕ ಪರೀಕ್ಷೆ 12118
2020 ಪೂರಕ ಪರೀಕ್ಷೆ 2519
2021: ಕೊರೊನಾ ಕಾರಣ ಪರೀಕ್ಷೆ ನಡೆದಿಲ್ಲ
2021: ಪೂರಕ ಪರೀಕ್ಷೆ 960
2022 ವಾರ್ಷಿಕ ಪರೀಕ್ಷೆ: 13848

-ದಿನೇಶ್‌ ಇರಾ

 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.