ಕರಾವಳಿಯಲ್ಲಿ ಅವಧಿಗೆ ಮುನ್ನವೇ ಸೆಕೆಗಾಲ! ವರ್ಷದಿಂದ ವರ್ಷಕ್ಕೆ ಚಳಿಗಾಲದ ಆಯಸ್ಸು ಕಡಿಮೆ


Team Udayavani, Feb 10, 2024, 7:00 AM IST

ಕರಾವಳಿಯಲ್ಲಿ ಅವಧಿಗೆ ಮುನ್ನವೇ ಸೆಕೆಗಾಲ ! ವರ್ಷದಿಂದ ವರ್ಷಕ್ಕೆ ಚಳಿಗಾಲದ ಆಯಸ್ಸು ಕಡಿಮೆ

ಮಂಗಳೂರು: ಹವಾಮಾನ ವೈಪರೀತ್ಯದ ಪರಿಣಾಮ ಕರಾವಳಿ ಭಾಗಕ್ಕೆ ತಟ್ಟಿದ್ದು ಈ ಬಾರಿ ಚಳಿಗಾಲ ಅವಧಿಗೂ ಮುನ್ನವೇ ಕಣ್ಮರೆಯಾಗಿ ಬೇಸಗೆ ದೀರ್ಘ‌ ಕಾಲ ಕಾಡುವ ಚಿಂತೆ ಆವರಿಸಿದೆ.

ಹಿಂಗಾರು ಅವಧಿಯಲ್ಲಾದ ಏರು ಪೇರು ಇದಕ್ಕೆ ಕಾರಣ. ಡಿಸೆಂಬರ್‌ ಮಧ್ಯಭಾಗದವರೆಗೆ ಮಳೆ ಇರುತ್ತಿದ್ದರೆ, ಭೂಮಿಯ ಮೇಲ್ಪದರದಲ್ಲಿ ನೀರಿನ ಅಂಶ ಕ್ಷೀಣಿಸುತ್ತಿರಲಿಲ್ಲ. ಆಗ ಉಷ್ಣಾಂಶದಲ್ಲಿ ಇಳಿಕೆಯಾಗಿ ದೀರ್ಘ‌ ಚಳಿಗಾಲ ಇರುತ್ತಿತ್ತು. ಆದರೆ, ಈ ಬಾರಿ ಮಳೆ ಕಡಿಮೆಯಾದ ಕಾರಣ ಚಳಿಯೂ ಕಡಿಮೆಯಾಗಿ ಅವಧಿಗೂ ಮುನ್ನವೇ ಸೆಕೆ ಆರಂಭವಾಗಿದೆ.

ಕರಾವಳಿ ಭಾಗದಲ್ಲಿ ಈ ಸಂದರ್ಭದಲ್ಲಿ ಸಾಮಾನ್ಯವಾಗಿ 30 ಡಿ.ಸೆ. ಗರಿಷ್ಠ ಉಷ್ಣಾಂಶ ಇರುತ್ತದೆ. ಆದರೆ, ಕಳೆದೆರಡು ವಾರಗಳಿಂದ ಮಂಗಳೂರು ಸಹಿತ ಕರಾವಳಿ ಭಾಗದ ಹಲವೆಡೆ 32 ರಿಂದ 33 ಡಿ.ಸೆ. ನಷ್ಟು ಉಷ್ಣಾಂಶ ದಾಖಲಾಗಿದೆ. ಗ್ರಾಮೀಣ ಭಾಗದಲ್ಲಿ ಚಳಿ ಕೇವಲ ಬೆಳಗಿನ ಜಾವಕ್ಕೆ ಸೀಮಿತವಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಮುಂದಿನ ಕೆಲ ವಾರಗಳ ಕಾಲ ಇದೇ ರೀತಿಯ ಉಷ್ಣಾಂಶ ಮುಂದುವರೆಯುವ ಸಾಧ್ಯತೆ ಇದೆ.
ಕೆಲ ವರ್ಷಗಳಿಂದ ಕರಾವಳಿಯಲ್ಲಿ ಚಳಿಯ ಅವಧಿ ಕಡಿಮೆಯಾಗುತ್ತಿದೆ. ಈ ಹಿಂದೆ ಜಿಲ್ಲೆಯಲ್ಲಿ 1981ರಲ್ಲಿ ಅತೀ ಕಡಿಮೆ ಅಂದರೆ, 15.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಟ ಉಷ್ಣಾಂಶ ದಾಖಲಾಗಿತ್ತು. 2018ರಲ್ಲಿ 19 ಡಿ.ಸೆ. ಕನಿಷ್ಠ ಉಷ್ಣಾಂಶ ಉಂಟಾಗಿತ್ತು.

ಆರೋಗ್ಯ ಇಲಾಖೆಯಿಂಲೂ ಜಾಗೃತಿ
“ಕೇಂದ್ರದ ಹವಾಮಾನ ನಿಯಂತ್ರಣ ಮತ್ತು ಮಾನವ ಆರೋಗ್ಯ ರಾಷ್ಟ್ರೀಯ ಕಾರ್ಯಕ್ರಮದಡಿ ವಿಪತ್ತು ನಿರ್ವಹಣೆ ಮತ್ತು ಹವಾಮಾನ ವೈಪರೀತ್ಯದ ಬಗ್ಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಎಲ್ಲಾ ಪ್ರಾ. ಆ. ಕೇಂದ್ರಗಳಿಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಅದರಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸೂಚಿಸಲಾಗಿದೆ’ ಎಂದು ಡಿಎಚ್‌ಒ ಡಾ| ತಿಮ್ಮಯ್ಯ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಳೆದ ವರ್ಷದಂತೆ ಬಿಸಿ ಗಾಳಿ ಭೀತಿ !
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಕರಾವಳಿ ಭಾಗದಲ್ಲಿ ಕಳೆದ ವರ್ಷ ಮಾರ್ಚ್‌ ನ ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆಯು ಬಿಸಿ ಗಾಳಿಯ ಎಚ್ಚರಿಕೆ ನೀಡಿತ್ತು. 36 ಡಿ.ಸೆ.ಗೂ ಅಧಿಕ ತಾಪಮಾನ ಏರಿಕೆ ಕಂಡಿತ್ತು. ಮಾರ್ಚ್‌ ವೇಳೆಗೆ ಸಾಮಾನ್ಯವಾಗಿ ಅರಬಿ ಸಮುದ್ರ ಕಡೆಯಿಂದ ತೇವಾಂಶದಿಂದ ಕೂಡಿದ ಗಾಳಿ ಬೀಸಬೇಕು. ಆದರೆ ಬಂಗಾಳಕೊಲ್ಲಿ ಕಡೆಯಿಂದ ಶುಷ್ಕ ಗಾಳಿ ಬೀಸಿದ ಪರಿಣಾಮ ಬಿಸಿ ಗಾಳಿಯಿಂದ ಉಷ್ಣಾಂಶ ಏರಿಕೆಗೆ ಕಾರಣವಾಗಿತ್ತು. ಕಳೆದ ವರ್ಷದ ರೀತಿಯೇ ಈ ಬಾರಿಯೂ ಹವಾಮಾನ ಕೂಡಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.