ಅರೆ ಮರ್ಲೆರ್‌ ಆಡಿಯೋ ಸಿಡಿ ಬಿಡುಗಡೆ


Team Udayavani, Jul 13, 2017, 3:40 AM IST

1207mlr103.jpg

ಮಂಗಳೂರು: ಬೊಳ್ಳಿ ಮೂವೀಸ್‌ ಲಾಂಛನದಲ್ಲಿ ಮೂಡಿಬರುತ್ತಿರುವ ತುಳು ಚಿತ್ರರಂಗದ ಬಹು ನಿರೀಕ್ಷಿತ ಸಿನೆಮಾ ದೇವದಾಸ್‌ ಕಾಪಿಕಾಡ್‌ ಅವರ “ಅರೆ ಮರ್ಲೆರ್‌’ ಆ. 11ರಂದು ತೆರೆ ಕಾಣಲಿದ್ದು, ಆಡಿಯೋ ಸಿಡಿ ಬಿಡುಗಡೆ ಬುಧವಾರ ಮಂಗಳೂರಿನಲ್ಲಿ ನಡೆಯಿತು.

ಆಳ್ವಾಸ್‌ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತ ನಾಡಿ, ತುಳುನಾಡಿನ ಶ್ರೀಮಂತ ಭಾಷೆ ತುಳುವಿನ ಮೇಲೆ ಇರುವ ಪ್ರೀತಿ ಯಿಂದ ಹಲವು ಸಿನೆಮಾಗಳು ಬಂದಿದ್ದು, ತುಳುನಾಡಿನಾದ್ಯಂತ ಉತ್ತಮ ಪ್ರತಿ
ಕ್ರಿಯೆ ಪಡೆದುಕೊಂಡಿವೆ. ದೇವದಾಸ್‌ ಕಾಪಿಕಾಡ್‌ ಅವರ ಮೂಲಕ ತುಳುವಿ ನಲ್ಲಿ ನೂತನ ಚಿತ್ರ “ಅರೆ ಮರ್ಲೆರ್‌’ ಸಿದ್ಧಗೊಳ್ಳುತ್ತಿದ್ದು, ಕರಾವಳಿಯಾದ್ಯಂತ ಬಹಳಷ್ಟು ನಿರೀಕ್ಷೆ ಮೂಡಿಸಿದೆ ಎಂದರು.

ಕರಾವಳಿ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಎಸ್‌. ಗಣೇಶ್‌ ರಾವ್‌ ಮಾತನಾಡಿ, ಕರಾವಳಿಯಲ್ಲಿ ಎಲ್ಲ ಸಮುದಾಯದವರು ಜತೆಯಾಗಿ ಬಾಳುವ ವಾತಾವರಣವಿದೆ. ನಮ್ಮೊಳಗೆ ಒಮ್ಮತದ ಭಾÅತೃತ್ವ ಮೂಡಿದರೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಕಲಾವಿದ ರೆಲ್ಲ ಈ ನಿಟ್ಟಿನಲ್ಲಿ ವಿಶೇಷ ಆಸ್ಥೆಯಿಂದ ಸಮಾಜದಲ್ಲಿ ಸಾಮರಸ್ಯ ಕಾಪಾಡುವ ಬಗ್ಗೆ ಸಂದೇಶ ಸಾರಬೇಕು ಎಂದರು.

ಆ. 11ರಂದು ತೆರೆಗೆ
“ಅರೆ ಮರ್ಲೆರ್‌’ ಚಿತ್ರದ ಕಥೆ, ಚಿತ್ರ ಕಥೆ, ಸಂಭಾಷಣೆ, ಸಂಗೀತ ಹಾಗೂ ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಅವರು ಮಾತನಾಡಿ, ಆ. 11ರಂದು ಅರೆ ಮರ್ಲೆರ್‌ ಕರಾವಳಿಯಾದ್ಯಂತ ತೆರೆ ಕಾಣಲಿದೆ. ಶರ್ಮಿಳಾ ಡಿ. ಕಾಪಿಕಾಡ್‌, ಮುಖೇಶ್‌ ಹೆಗ್ಡೆ, ದಿನೇಶ್‌ ಶೆಟ್ಟಿ ಚಿತ್ರದ ನಿರ್ಮಾಪಕರಾಗಿದ್ದು, ಅರ್ಜುನ್‌ ಕಾಪಿಕಾಡ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಕದ್ರಿ ಮಣಿಕಾಂತ್‌ ಸಂಗೀತ, ಉದಯ್‌ ಬಲ್ಲಾಳ್‌ ಛಾಯಾಚಿತ್ರಗ್ರಹಣ, ಸುಜಿತ್‌ ನಾಯಕ್‌ ಸಂಕಲನ ಚಿತ್ರಕ್ಕಿದೆ. 

ಚಿತ್ರದಲ್ಲಿ 4 ಹಾಡುಗಳಿದ್ದು, ಎಲ್ಲ ಹಾಡುಗಳ ಮಾಸ್ಟರಿಂಗ್‌ ಹಾಗೂ ಪ್ರೋಗ್ರಾ ಮಿಂಗ್‌ ಚೆನ್ನೈಯ ಕದ್ರಿಕೀಸ್‌ನಲ್ಲಿ ಮಾಡಲಾಗಿದೆ ಎಂದು ಹೇಳಿದರು.ಎಂ. ಶಶಿಧರ ಹೆಗ್ಡೆ, ವಿಜಯ್‌ ಕುಮಾರ್‌ ಕೊಡಿಯಾಲಬೈಲ್‌, ನವೀನ್‌ ಡಿ ಪಡೀಲ್‌, ದೇವದಾಸ್‌ ಪಾಂಡೇಶ್ವರ, ಕಿಶೋರ್‌ ಡಿ. ಶೆಟ್ಟಿ, ಪ್ರಕಾಶ್‌ ಪಾಂಡೇಶ್ವರ, ಧನ್‌ರಾಜ್‌, ವಾಲ್ಟರ್‌ ನಂದಳಿಕೆ, ಮಾಧವ ಬಗಂಬಿಲ ಮುಖ್ಯ ಅತಿಥಿಗಳಾಗಿ ದ್ದರು. ಚಿತ್ರ ನಿರ್ಮಾಪಕರಾದ ಶರ್ಮಿಳಾ ಡಿ. ಕಾಪಿಕಾಡ್‌, ಮುಖೇಶ್‌ ಹೆಗ್ಡೆ, ದಿನೇಶ್‌ ಶೆಟ್ಟಿ, ನಟರಾದ ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸಾಯಿಕೃಷ್ಣ, ಅರ್ಜುನ್‌ ಕಾಪಿಕಾಡ್‌ ಮುಂತಾದವರು ಉಪಸ್ಥಿತರಿದ್ದರು. ವಿಟ್ಲ ಮಂಗೇಶ್‌ ಭಟ್‌ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.