ಹಿರಿಯ ಇಲಾಖಾಧಿಕಾರಿಗಳು ಗೈರು: ತಾ.ಪಂ. ಇಒ ಗರಂ 


Team Udayavani, Jun 7, 2017, 3:14 PM IST

0606bteph7.jpg

ಬಂಟ್ವಾಳ : ತಾಲೂಕು ಮಟ್ಟದ ಪ್ರಮುಖ ಸಭೆಗಳಿಗೆ ಹಿರಿಯ ಅಧಿಕಾರಿಗಳು ಗೈರಾಗಿ ತಮ್ಮ ಪ್ರತಿನಿಧಿಗಳನ್ನಾಗಿ ಕಿರಿಯ ಅಧಿಕಾರಿಗಳನ್ನು ಅಥವಾ ಸಿಬಂದಿಯನ್ನು ಕಳುಹಿಸುತ್ತಾರೆ. ಇದರಿಂದಾಗಿ ಸಭೆಗಳಲ್ಲಿ ಸರಿಯಾದ ಮಾಹಿತಿ ದೊರೆಯುತ್ತಿಲ್ಲ. ಹಿರಿಯ ಅಧಿಕಾರಿಗಳು ಇದೇ ರೀತಿ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್‌ ಮಿರಾಂದ ಹೇಳಿದ್ದಾರೆ.

ಬಿ.ಸಿ. ರೋಡ್‌ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ  ಜೂ.6ರಂದು  ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಬಹುತೇಕ ಇಲಾಖೆಗಳ ಹಿರಿಯ ಅಧಿಕಾರಿಗಳು ಗೈರಾಗಿ ಕಿರಿಯ ಅಧಿಕಾರಿಗಳು ಪ್ರತಿನಿಧಿಸಿದ ಸಂದರ್ಭದಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆ ಕಾಟಾಚಾರಕ್ಕೆ ಅಲ್ಲ 
“ನಾವಿಲ್ಲಿ ಸಭೆ ನಡೆಸುವುದು ಕಾಟಾಚಾರಕ್ಕೆ ಅಲ್ಲ’ ಎಂದ  ಇಒ ಅವರು, ಪ್ರಗತಿ ಪರಿಶೀಲನೆಯ ಸಂದರ್ಭ ಕೆಳ ಮಟ್ಟದ ಅಧಿಕಾರಿಗಳಿಂದ ಸೂಕ್ತ ಮತ್ತು ಸ್ಪಷ್ಟ ಉತ್ತರ ಸಿಗದಿರುವುದರಿಂದ ಅಸಮಾಧಾನಗೊಂಡರು. ನಿಖರ ಮಾಹಿತಿ, ಲಿಖೀತ ದಾಖಲೆ, ವಿಚಾರದ ಬಗ್ಗೆ ಸಂಪೂರ್ಣ ಅರಿವು ಇಲ್ಲದವರು ಸಭೆಗೆ ಬಂದರೆ ಹಾಜರಿ ಹಾಕಿದಂತೆ ಆಗುತ್ತದೆ ಹೊರತು ಪ್ರಯೋಜನ ಆಗುವುದಿಲ್ಲ ಎಂದರು.ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಎಸ್ಸಿ-ಎಸ್ಟಿ ಸಭೆಗೂ ಹೆಚ್ಚಿನ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗದೆ, ಕೆಳ ಹಂತದ ಅಧಿಕಾರಿಗಳನ್ನು ಕಳುಹಿಸಿದ್ದಾರೆ. ಈ ಸಭೆಯಲ್ಲೂ ಅದೇ ಪುನರಾವರ್ತನೆಗೊಂಡಿದೆ ಎಂದು  ಇಒ ಹೇಳಿದರು.

“ಇಲ್ಲಸಲ್ಲದ ಸಬೂಬು ಹೇಳಿ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗಳಿಗೆ ತಪ್ಪಿಸುತ್ತಿರುವುದು ಹವ್ಯಾಸವಾಗಿಬಿಟ್ಟಿದೆ. ನೇರವಾಗಿ ಸಭೆಗೆ ಬರುವ ನಿಮ್ಮಲ್ಲಿ ಇಲಾಖೆಗಳ ಪ್ರಗತಿಯ ಯಾವುದೇ ಮಾಹಿತಿ ಇರುವುದಿಲ್ಲ. ಸಭೆಯಲ್ಲಿ  ವ್ಯಕ್ತವಾದ ಪ್ರಶ್ನೆಗಳಿಗೆ  ನಿಮ್ಮಿಂದ ಏನು ಉತ್ತರ ದೊರೆಯುತ್ತದೆ’ ಎಂದು ಪ್ರಶ್ನಿಸಿದರು.

ಪ್ರಮುಖ ಸಭೆಗಳಿಗೆ ಬೇಕಾದ ಅಧಿಕಾರಿಗಳು ಗೆ„ರು ಆಗುವುದರಿಂದ ಸಮಸ್ಯೆಯಾಗುತ್ತಿದೆ. ನಮ್ಮ ಮಾತಿಗೆ ಬೆಲೆ ನೀಡಿ. ಮುಂದಿನ ಸಭೆಗೆ ಇದೇ ರೀತಿ ಪುನರಾವರ್ತನೆಯಾದರೆ ಅಂತವರ ಮೇಲೆ ಸೂಕ್ತ ಕ್ರಮ ಜರಗಿಸಲು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ ಅವರು, ಈ ವಿಷಯವನ್ನು ನಿಮ್ಮ ಮೇಲಧಿಕಾರಿಗಳಿಗೆ ತಲುಪಿಸಿ ಎಂದರು.

ಸಭೆಯಲ್ಲಿ  ಕೆಳ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಇಲಾಖೆಯಲ್ಲಿ ನಡೆಸಿದ ಕಾರ್ಯಕ್ರಮವೊಂದನ್ನು ವಿವರಿಸುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ಇಒ ಕಾರ್ಯಕ್ರಮದ ಮಾಹಿತಿ ಇಲ್ಲಿ ಆವಶ್ಯಕತೆ ಇಲ್ಲ. ಇಲಾಖೆಯಲ್ಲಿ ಆದ ಪ್ರಗತಿಯ ಬಗ್ಗೆ ಸಭೆಗೆ ಮಾಹಿತಿ ಕೊಡಿ ಎಂದಾಗ ಪ್ರಗತಿಯ ಬಗ್ಗೆ ಅಧಿಕಾರಿಯಲ್ಲಿ ಯಾವುದೇ ಮಾಹಿತಿ ಇರಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಇಒ ಇದೇ ಕಾರಣಕ್ಕೆ ಸಭೆಗೆ ನೀವು ಬರಬೇಡಿ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳೇ ಬರಬೇಕು ಎಂದು ಸ್ಪಷ್ಟನೆ ನೀಡಿದರು.

ಸೌಲಭ್ಯ ದೊರೆಯುವಂತೆ ಮಾಡಿ 
ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನೆ  ವೇಳೆ ಪ್ರತಿಕ್ರಿಯಿಸಿದ ಇಒ  ಅವರು, ಅರಣ್ಯ ಇಲಾಖೆಯಿಂದ ಲಭ್ಯವಾಗುವ 
ಸೌಲಭ್ಯಗಳನ್ನು ಎಲ್ಲ ವರ್ಗಗಳ‌ ಜನರಿಗೂ ತಲುಪುವಂತೆ ಮಾಡಿ. ವಲಯ ಅರಣ್ಯ ಇಲಾಖೆಯಲ್ಲಿ ಸಾರ್ವಜನಿಕರಿಗಾಗಿ ನೆಡುವುದಕ್ಕೆ ನೀಡಲು ಗಿಡ ಎಷ್ಟಿದೆ,  ಅದರ ದಾಖಲೆಗಳೇನು, ಯಾವ ಗಿಡ ಎಷ್ಟು ಲಭ್ಯತೆಯಲ್ಲಿ ದೊರೆಯುತ್ತದೆ. ಎಲ್ಲೆಲ್ಲಿ ಗಿಡ ನೆಡುವುದಕ್ಕೆ ಗುರುತು ಮಾಡಿಕೊಳ್ಳಲಾಗಿದೆ ಎಂದು ಪ್ರಶ್ನಿಸಿದರು.

ಅರಣ್ಯ ಇಲಾಖೆಯನ್ನು ಪ್ರತಿನಿಧಿಸಿದ ಅಧಿಕಾರಿ ಉತ್ತರಿಸಲು ತಡವರಿಸಿದರು. ಇದರಿಂದ ಅಸಮಾಧಾನಗೊಂಡ ಇಒ “ಅಂಕಿ ಅಂಶ ವಿವರಗಳಿಲ್ಲ, ಕೇಳಿದ ಪ್ರಶ್ನೆಗೆ ಅರ್ಹ ಉತ್ತರಗಳಿಲ್ಲ, ಒಟ್ಟಾರೆ ಸಭೆಗೆ ಬರುವುದು. ಸಭೆ ಮುಗಿದ ಅನಂತರ ಇನ್ನೊಂದು ಸಭೆಗೆ ಬರುವಾಗ ನೋಡಿಕೊಂಡರಾಯಿತು ಎಂಬ ಧೋರಣೆಯು ಸರಿಯಾದ ಕ್ರಮವಲ್ಲ ‘ ಎಂದು ಹೇಳಿದರು.

ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಉಪಸ್ಥಿತರಿದ್ದರು.

34 ಶಂಕಿತ ಡೆಂಗ್ಯೂ ಪ್ರಕರಣ
ಕೇಪು ಮತ್ತು ಪುಣಚ ಗ್ರಾಮಗಳಲ್ಲಿ ತಲಾ ಒಂದೊಂದು ಇಲಿ ಜ್ವರ, ಪುಣಚದಲ್ಲಿ 12  ಡೆಂಗ್ಯೂ ದೃಢೀಕರಣ,  34 ಶಂಕಿತ ಪ್ರಕರಣಗಳು ಪತ್ತೆಯಾಗಿವೆ.  ಪುದು ಗ್ರಾಮದಲ್ಲಿ 2, ಬೆಂಜನಪದವಿನಲ್ಲಿ 1 ಮಲೇರಿಯಾ ಪ್ರಕರಣ ಪತ್ತೆಯಾಗಿದೆ. ರೋಗ‌ ನಿಯಂತ್ರಣದ ಬಗ್ಗೆ ಆರೋಗ್ಯ ಕಾರ್ಯಕರ್ತೆಯರಿಂದ  ಜಾಗƒತಿ ಮೂಡಿಸಲಾಗುತ್ತಿದೆ. ಭಯಪಡುವ ಆವಶ್ಯಕತೆ ಇಲ್ಲ ಎಂದು ಆರೋಗ್ಯಾಧಿಕಾರಿ ಡಾ|  ದೀಪಾ ಪ್ರಭು ಹೇಳಿದರು.

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.