ಡ್ರಗ್ಸ್‌, ಸೈಬರ್‌ಕ್ರೈಂ ಪ್ರಕರಣಗಳಿಗೆ ಪ್ರತ್ಯೇಕ ಪೊಲೀಸ್‌ ಠಾಣೆ


Team Udayavani, Jul 29, 2017, 5:35 PM IST

Karnataka-State-Police-650.jpg

ಮಂಗಳೂರು: ಸ್ಮಾರ್ಟ್‌ ಸಿಟಿಯಾಗಿ ಅಭಿವೃದ್ಧಿ ಪಡಿಸಲು ಆಯ್ಕೆಯಾಗಿರುವ ಮಂಗಳೂರು ನಗರ ತ್ವರಿತ ಗತಿಯಲ್ಲಿ ಬೆಳವಣಿಗೆ ಹೊಂದುತ್ತಿದ್ದರೆ, ಇನ್ನೊಂದೆಡೆ ಇಲ್ಲಿನ ಯುವಜನರು ಗಾಂಜಾ, ಹೆರಾಯಿನ್‌ ಮುಂತಾದ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಈ ಬಗ್ಗೆ ಅನೇಕ ದೂರುಗಳು ಬರುತ್ತಿರುವುದರಿಂದ ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಅಧಿಕಾರಿಗಳು ಸಾಮಾಜಿಕ ಜಾಲ ತಾಣದ ಅಪರಾಧಗಳು ಮತ್ತು ಮಾದಕ ದ್ರವ್ಯದ ಅಕ್ರಮಮಟ್ಟ ಹಾಕಲು ಪ್ರತ್ಯೇಕ ಎರಡು ಠಾಣೆಗಳನ್ನು ಸ್ಥಾಪಿಸಿದ್ದಾರೆ. ಸಾಮಾಜಿಕ ಜಾಲತಾಣ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಉಲ್ಲಂಘನೆ, ಗಾಂಜಾ, ಡ್ರಗ್ಸ್‌ ಅಕ್ರಮವನ್ನು ಮಟ್ಟಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಳೆದ ಜೂ.2ರಂದು ಅಧಿಸೂಚನೆಯೊಂದನ್ನು ಹೊರಡಿಸಿ ಇದಕ್ಕಾಗಿ ಪ್ರತ್ಯೇಕ ಠಾಣೆಗಳನ್ನು ತೆರೆಯುವಂತೆ ನಿರ್ದೇಶನ ನೀಡಿತ್ತು.

ಒಂದು ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ ತಡೆ ಪೊಲೀಸ್‌ ಠಾಣೆ ಹಾಗೂ ಇನ್ನೊಂದು ಮಂಗಳೂರು ಪೊಲೀಸ್‌ ಸೈಬರ್‌ ಠಾಣೆ ಆರಂಭಿಸಲು ನಿರ್ಧರಿಸಲಾಗಿದ್ದು, ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮಂಗಳೂರು ಸೈಬರ್‌ ಪೊಲೀಸ್‌ ಠಾಣೆಗೆ ಸವಿತ್ರ ತೇಜ ಇನ್‌ಸ್ಪೆಕ್ಟರ್‌ ಆಗಿ ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕದ್ರವ್ಯ ತಡೆ ಪೊಲೀಸ್‌ ಠಾಣೆಗೆ ಮಹಮ್ಮದ್‌ ಶರೀಫ್‌ ಇನ್‌ಸ್ಪೆಕ್ಟರ್‌ ಆಗಿ ನಿಯೋಜನೆಗೊಂಡಿದ್ದಾರೆ.

ಆರ್ಥಿಕ ಅಪರಾಧ, ಮಾದಕದ್ರವ್ಯ ತಡೆ ಪೊಲೀಸ್‌ ಠಾಣೆ
ಈ ಠಾಣೆಯಲ್ಲಿ ಗಾಂಜಾ, ಮಾದಕ ದ್ರವ್ಯ, 25 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ವಂಚನೆ, ಅಕ್ರಮ ಲಾಟರಿ, ಅಬಕಾರಿ, ಸಂಘಟಿತ ಅಪರಾಧ, ಖೋಟಾನೋಟು ಪ್ರಕರಣ, ಮಾನವ ಕಳ್ಳಸಾಗಾಣಿಕೆ, ಸಹಕಾರಿ ಸಂಘಗಳಿಂದ ವಂಚನೆ, ಆ್ಯಸಿಡ್‌ ದಾಳಿ ಪ್ರಕರಣಗಳು ದಾಖಲಾಗಲಿವೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿರುವ ಈ ರೀತಿಯ ವಿಶೇಷ ಪ್ರಕರಣಗಳನ್ನು ಈ ಠಾಣೆ ಜವಾಬ್ದಾರಿ ವಹಿಸಿಕೊಂಡು ನಿರ್ವಹಿಸಲಿದೆ.

ಸಿಟಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆ: ಸಿಟಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಫೇಸ್‌ ಬುಕ್‌, ವಾಟ್ಸಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಸಂಬಂಧಿತ ಪ್ರಕರಣ, ಇಂಟರ್‌ನೆಟ್‌ ಮೂಲಕ ಹಣ ವಂಚನೆ ಸೇರಿದಂತೆ ಎಲೆಕ್ಟ್ರಾನಿಕ್ಸ್‌ ಸಂಬಂಧಿತ ಪ್ರಕರಣಗಳು ದಾಖಲಾಗಿ ತನಿಖೆ ನಡೆಯಲಿದೆ. ಈ ಎರಡೂ ಠಾಣೆಗಳೂ 2000ರ ಕಾಯ್ದೆಯಡಿ (2002ರಲ್ಲಿ ತಿದ್ದುಪಡಿ) ನಗರದಲ್ಲಿ ನಡೆಯುವ ವಿಶೇಷ ಪ್ರಕರಣಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ತನಿಖೆ ನಡೆಸಲಿವೆ.

ಆರ್ಥಿಕ ಅಪರಾಧ ಮತ್ತು ಮಾದಕದ್ರವ್ಯ 
ತಡೆ ಪೊಲೀಸ್‌ ಠಾಣೆ (ನ್ಯಾರ್ಕೊಟಿಕ್‌ ಆ್ಯಂಡ್‌ ಇಕೋನಾಮಿಕ್ಸ್‌ ಒಫೆನ್ಸ್‌): ಇನ್‌ಸ್ಪೆಕ್ಟರ್‌- ಮಹಮ್ಮದ್‌ ಶರೀಫ್‌, ಸಿಬಂದಿ: 1 ಇನ್ಸ್‌ಪೆಕ್ಟರ್‌, 2 ಪಿಎಎಸ್‌ಐ, 6 ಎಚ್‌ಸಿ, 15 ಪಿಸಿ. ಸ್ಥಳ: ದಕ್ಷಿಣ (ಪಾಂಡೇಶ್ವರ) ಪೊಲೀಸ್‌ ಠಾಣೆಯ 2ನೇ ಮಹಡಿ. ದೂರುಗಳಿದ್ದರೆ 0824-2220594, 9620298444 ನೀಡಬಹುದು.

ಸಿಟಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆ 
ಇನ್‌ಸ್ಪೆಕ್ಟರ್‌: ಸವಿತ್ರ ತೇಜ, ಸಿಬಂದಿ: 1 ಇನ್‌ಸ್ಪೆಕ್ಟರ್‌, 2ಪಿಎಎಸ್‌ಐ, 6 ಎಚ್‌ಸಿ, 15 ಪಿಸಿ. ಸ್ಥಳ: ಹಳೆ ಸಂಚಾರಿ ಪಶ್ಚಿಮ ಠಾಣೆ, ಬಂದರ್‌. ದೂರುಗಳಿದ್ದರೆ 0824-2220844, 9449020335 ನೀಡಬಹುದು.

– ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.