Series Holiday ಹಿನ್ನೆಲೆ: ದೇಗುಲಗಳಲ್ಲಿ ಭಾರೀ ಜನಸ್ತೋಮ
Team Udayavani, Dec 24, 2023, 11:47 PM IST
ಮಂಗಳೂರು/ಉಡುಪಿ: ಸರಣಿ ರಜೆ ಹಿನ್ನೆಲೆಯಲ್ಲಿ ರವಿವಾರ ಕರಾವಳಿಯ ವಿವಿಧ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ, ಸೌತಡ್ಕ ಶ್ರೀ ಮಹಾಗಣಪತಿ, ಉಡುಪಿ ಶ್ರೀಕೃಷ್ಣ ಮಠ, ಕಟೀಲು ಶ್ರೀ ದುರ್ಗಾಪರಮೇಶ್ವರಿ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲ ಸೇರಿದಂತೆ ಮಲ್ಪೆ, ಪಣಂಬೂರು ಬೀಚ್ಗಳಲ್ಲಿ ಭಾರೀ ಜನಸ್ತೋಮ ಕಂಡು ಬಂದಿದೆ.
ವಿವಿಧ ಕಡೆಗಳಿಗೆ ಆಗಮಿಸಿದ ಪ್ರವಾಸಿಗರು, ಭಕ್ತರು ದೇಗುಲಗಳಿಗೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.
ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ
ಸುಬ್ರಹ್ಮಣ್ಯ: ಕುಕ್ಕೆಗೆ ರವಿವಾರ ಭಾರೀ ಸಂಖ್ಯೆಯ ಭಕ್ತರ ದಂಡು ಹರಿದು ಬಂದಿತ್ತು. ಸಾವಿರಾರು ಮಂದಿ ಶ್ರೀ ದೇವರ ದರುಶನ ಪಡದು ಪ್ರಸಾದ ಸ್ವೀಕರಿಸಿದರು.
ಶುಕ್ರವಾರ ರಾತ್ರಿಯಿಂದಲೇ ಭಕ್ತರ ಆಗಮನ ಆರಂಭವಾಗಿತ್ತು. ಶ್ರೀ ದೇವರ ದರುಶನಕ್ಕಾಗಿ ಸ್ಕಂಧ ವಸತಿ ಗೃಹದ ಬಳಿಯಿಂದ ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂತು. ಸರತಿ ಸಾಲಿನಲ್ಲಿ ಮುನ್ನಡೆಯಲು ದೇಗುಲದ ವತಿಯಿಂದ ನೆರಳಿನ ಚಪ್ಪರದ ವ್ಯವಸ್ಥೆ ಮಾಡಿದುದರಿಂದ ಭಕ್ತರಿಗೆ ಹೆಚ್ಚಿನ ಅನುಕೂಲವಾಯಿತು.
ಭಾರೀ ಸಂಖ್ಯೆಯ ಭಕ್ತರು ಆಗಮಿಸುವ ನಿರೀಕ್ಷೆ ಇದ್ದುದರಿಂದ ದೇಗುಲದ ಆಡಳಿತ ಮಂಡಳಿ ವಿಶೇಷ ವ್ಯವಸ್ಥೆ ಮಾಡಿತ್ತು. ಷಣ್ಮುಖ ಪ್ರಸಾದ ಭೋಜನ ಶಾಲೆ ಮಾತ್ರವಲ್ಲದೆ ಆದಿಸುಬ್ರಹ್ಮಣ್ಯ ಭೋಜನ ಶಾಲೆಯಲ್ಲಿ ಬಫೆ ಮಾದರಿಯಲ್ಲಿ ಭೋಜನ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಅಧಿಕ ವಾಹನಗಳ ಆಗಮನ ದಿಂದಾಗಿ ಆಗಾಗ್ಗೆ ರಸ್ತೆಯಲ್ಲಿ ವಾಹನ ದಟ್ಟಣೆ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
MUST WATCH
ಹೊಸ ಸೇರ್ಪಡೆ
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್ ಶಾ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್!
TRAI ವ್ಯಾಪ್ತಿಗೆ ಫೇಸ್ಬುಕ್, ವಾಟ್ಸ್ಆ್ಯಪ್, ಎಕ್ಸ್?