ದಸರಾ, ಸರಣಿ ರಜೆ ಕುಕ್ಕೆ ಕ್ಷೇತ್ರದಲ್ಲಿ ಭಾರೀ ಜನಸ್ತೋಮ


Team Udayavani, Oct 22, 2018, 11:57 AM IST

22-october-7.gif

ಸುಬ್ರಹ್ಮಣ್ಯ: ಕೆಲ ತಿಂಗಳ ಹಿಂದೆ ಅಪಾರ ಮಳೆ ಹಾಗೂ ವಿವಿಧೆಡೆ ಸಂಭವಿಸಿದ ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು. ಪ್ರಸ್ತುತ ಸಹಜ ಸ್ಥಿತಿಗೆ ಮರಳಿದ್ದು, ದಸರಾ ಸರಣಿ ರಜೆ ಹಾಗೂ ಶಿಕ್ಷಣ ಸಂಸ್ಥೆಗಳಿಗೂ ರಜೆ ಹಿನ್ನೆಲೆಯಲ್ಲಿ ಕುಕ್ಕೆಯಲ್ಲಿ ಶನಿವಾರ ಹಾಗೂ ರವಿವಾರ ಭಾರೀ ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು.

ಭರ್ತಿಯಾದ ವಸತಿಗೃಹ
ಶುಕ್ರವಾರದಿಂದ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕುಕ್ಕೆ ಕ್ಷೇತ್ರದ ಕಡೆಗೆ ಆಗಮಿಸುತ್ತಿರುವ ಕಾರಣ ದೇಗುಲದ ಹಾಗೂ ಖಾಸಗಿ ವಸತಿಗೃಹಗಳು ಭರ್ತಿಯಾಗಿದ್ದವು. ಹಲವರಿಗೆ ತಂಗಲು ಕೊಠಡಿ ಸಮಸ್ಯೆ ಉಂಟಾಯಿತು. ಕೊಠಡಿ ಸಿಗದಿದ್ದಾಗ ಕೆಲವರು ಛತ್ರ, ಅಂಗಡಿ-ಹೊಟೇಲ್‌ಗ‌ಳಿಗೆ ತೆರಳಿ ವರಾಂಡದಲ್ಲಿ ಆಶ್ರಯ ಪಡೆದರು.

ಸೇವೆಗಳಿಗೂ ಸರತಿ ಸಾಲು
ಸರ್ಪಸಂಸ್ಕಾರ ಸೇವೆ, ಮಹಾ ಪೂಜೆ, ಶೇಷ ಸೇವೆ, ಪಂಚಾಮೃತ ಅಭಿಷೇಕ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಸಹಿತ ಹಲವು ಸೇವೆಗಳನ್ನು ನೆರವೇರಿಸಿದರು. ಎರಡು ದಿನಗಳು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ, ಹರಕೆ ಸೇವೆ ನೆರವೇರಿಸಿಕೊಂಡರು. ದೇಗುಲದ ಒಳಾಂಗಣ, ಹೊರಾಂಗಣ ಮತ್ತು ಆಸುಪಾಸಿನ ತುಂಬೆಲ್ಲ ಭಕ್ತ ಸಾಗರವೇ ನೆರೆದಿತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಪೊಲೀಸರು, ಗೃಹರಕ್ಷಕ ಮತ್ತು ಭದ್ರತಾ ಸಿಬಂದಿ ಕಷ್ಟ ಪಡುತ್ತಿದ್ದರು. ಕೆಲವೆಡೆ ನೂಕುನುಗ್ಗಲು ಉಂಟಾಗಿತ್ತು.

ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌
ಕ್ಷೇತ್ರದಲ್ಲಿ ಭಕ್ತರ ಜತೆ ವಾಹನ ದಟ್ಟನೆಯೂ ಅಧಿಕವಿತ್ತು. ಹಲವು ಕಡೆಗಳಲ್ಲಿ ಪಾರ್ಕಿಂಗ್‌ ಜಾಗ ಕಾಯ್ದಿರಿಸಿದ್ದರೂ ವಾಹನಗಳನ್ನು ಸಿಕ್ಕ ಕಡೆಗಳಲ್ಲಿ ನಿಲ್ಲಿಸಿದ್ದರು. ಅಂಗಡಿ ಮುಂಗಟ್ಟುಗಳ ಮುಂದೆ ಭಕ್ತರು ವಾಹನ ನಿಲ್ಲಿಸಿದ್ದರಿಂದ ಸಮಸ್ಯೆಯಾಯಿತು. ಕುಮಾರಧಾರೆಯಿಂದ ರಥ ಬೀದಿ ತನಕವೂ ವಾಹನಗಳು ಸಾಲುಗಟ್ಟಿ ನಿಂತ ಕಾರಣ ಮುಖ್ಯ ರಸ್ತೆಯಲ್ಲೆ ಟ್ರಾಫಿಕ್‌ ಸಮಸ್ಯೆ ತಲೆದೋರಿತು.

ಎಲ್ಲೆಲ್ಲೂ ರಶ್‌
ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಯೂ ಭಕ್ತ ಸಂದಣಿ ಅಧಿಕವಿತ್ತು. ರಸ್ತೆಗಳು ಭರ್ತಿಯಾಗಿದ್ದವು. ಮುಖ್ಯ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಗೋಪುರ ತನಕವೂ ಸರತಿ ಸಾಲು ಇತ್ತು. ಭೋಜನ ಪ್ರಸಾದ ಸ್ವೀಕರಿಸುವಲ್ಲೂ ಸರತಿ ಸಾಲು ಕಂಡು ಬಂತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.