ಶಿರಾಡಿ ಪರಿಸರದ  ದೇಗುಲಗಳಲ್ಲಿ  ಸರಣಿ ಕಳವು


Team Udayavani, Apr 13, 2017, 1:05 PM IST

kallatana.jpg

ಉಪ್ಪಿನಂಗಡಿ: ಶಿರಾಡಿ ಗ್ರಾಮದ ಎರಡು ದೇವಸ್ಥಾನಗಳಲ್ಲಿ ಸರಣಿ ಕಳ್ಳತನವಾಗಿದ್ದು, ನಗದು ಹಾಗೂ ಲಕ್ಷಾಂತರ ರೂ. ಮೌಲ್ಯದ ಚಿನ್ನ- ಬೆಳ್ಳಿಯ  ಸೊತ್ತನ್ನು ದೋಚಲಾಗಿದೆ.

ಶಿರಾಡಿ ಗ್ರಾಮದ ಅಮ್ಮಾಜೆ ದುರ್ಗಾ ಪರಮೇಶ್ವರೀ ದೇವಸ್ಥಾನ ಮತ್ತು ಕಳಪ್ಪಾರು ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಕಳವು ನಡೆದಿದ್ದು, ಬುಧವಾರ ಬೆಳ‌ಗ್ಗೆ ಘಟನೆ ಬೆಳಕಿಗೆ ಬಂದಿದೆ. ಅಮ್ಮಾಜೆ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಂಗಳವಾರ ರಾತ್ರಿಯೂ ದುರ್ಗಾಪೂಜೆ  ನಡೆದಿದ್ದು, ದೇಗುಲದ ಭಕ್ತರು  ಮತ್ತು ವ್ಯವಸ್ಥಾಪನ ಸಮಿತಿಯವರು ತಡರಾತ್ರಿ 11 ಗಂಟೆಯವರೆಗೆ ದೇವಸ್ಥಾನದಲ್ಲಿ ಉಳಿದಿದ್ದರು. ಅನಂತರ ದೇಗುಲದಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳ್ಳರು ಎದುರಿನ ಬಾಗಿಲು ಚಿಲಕವನ್ನು ಮುರಿದು ಒಳಗೆ ಪ್ರವೇಶಿಸಿದ್ದರು.

ಅಮ್ಮಾಜೆ ದೇಗುಲದಲ್ಲಿ ಸುಮಾರು 20 ಗ್ರಾಂ ದೇವರ ಚಿನ್ನದ ಮಾಲೆ, ದೇವರ ಬೆಳ್ಳಿಯ ಪ್ರಭಾವಳಿ, ಕಾಣಿಕೆ ಡಬ್ಬಿಯಲ್ಲಿದ್ದ ಅಂದಾಜು 35 ಸಾವಿರ ರೂ.ಗಳಿಗೂ ಮೇಲ್ಪಟ್ಟು ನಗದು ದೋಚಿದ್ದಾರೆ. ದೇವರ ಬೆಳ್ಳಿಯ ಮುಖವಾಡವನ್ನು ಮಾತ್ರ ಮುಟ್ಟದೇ ಇತರ ಸೊತ್ತುಗಳನ್ನು ಕಳ್ಳರು ಒಯ್ದಿದ್ದಾರೆ. ಬೆಳಗ್ಗೆ ಎಂದಿನಂತೆ ಪೂಜೆಗೆಂದು ದೇಗುಲಕ್ಕೆ ಬಂದ ಅರ್ಚಕರಿಗೆ ಬಾಗಿಲಿನ ಚಿಲಕ ಮುರಿದಿರುವುದು ಅರಿವಾಗಿ ಒಳಗೆ ನೋಡಿದಾಗ ಕಳ್ಳತನವಾಗಿರುವುದು ತಿಳಿದು ಬಂದಿದೆ. 

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿರಾಡಿ ಮಂಜುನಾಥ ಗೌಡ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಅಮ್ಮಾಜೆಯಿಂದ 4 ಕಿ.ಮೀ. ದೂರದಲ್ಲಿರುವ ಕಳಪ್ಪಾರು ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ವಾರ್ಷಿಕ ಜಾತ್ರೆಗೆ ಕೊಡಿ ಏರುವ ಕಾರ್ಯಕ್ರಮ ನಡೆದಿದ್ದು, ಸೋಮವಾರ  ರಾತ್ರಿ ಈ ದೇಗುಲದಲ್ಲಿ  ಗ್ರಾಮಸ್ಥರು ಮರುದಿನದ ಜಾತ್ರೆಯ ಸಿದ್ಧತೆಗೆ ಬೇಕಾಗಿ ತಡರಾತ್ರಿಯವರೆಗೆ ಕೆಲಸ  ಮಾಡಿದ್ದರು.  ಮಂಗಳವಾರ ಬೆಳಗ್ಗೆ ಕೊಡಿ ಏರಿದ ಅನಂತರ ತೆರಳಿದ್ದರು. ರಾತ್ರಿ ವೇಳೆ ಅಮ್ಮಾಜೆಯಲ್ಲಿ ಕಳ್ಳತನ ನಡೆಸಿದ ಕಳ್ಳರೇ ಇಲ್ಲಿಯೂ ಕಳ್ಳತನ ನಡೆಸಿದ ಸಾಧ್ಯತೆಯಿದೆ. 

ಈ ದೇಗುಲದಿಂದಲೂ ದೇವರ ಕಾಣಿಕೆ ಡಬ್ಬಿ ಒಡೆದು ಅಂದಾಜು 5 ಸಾವಿರ ರೂ.ಗೂ ಮೇಲ್ಪಟ್ಟು ನಗದು ದೋಚಿದ್ದಾರೆ ಎಂದು ದೇಗುಲದ ಅಧ್ಯಕ್ಷ ಡೊಂಬಯ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ಶಿರಾಡಿ, ಧನಂಜಯ ಗೌಡ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ದೇಗುಲದ  ಕಾಣಿಕೆ ಡಬ್ಬಿಗಳನ್ನು ಒಂದಷ್ಟು ದೂರ ಕಳ್ಳರು ಹೊತ್ತೂಯ್ದು ಕಾಡು ಗಿಡಗಳ ಮಧ್ಯೆ ಡಬ್ಬಿಯನ್ನು ಒಡೆದು ನಗದನ್ನು ಎತ್ತಿ ಡಬ್ಬಿಯನ್ನು ಬಿಟ್ಟು ಹೋಗಿದ್ದಾರೆ.

ಡಿವೈಎಸ್ಪಿ ಭಾಸ್ಕರ ರೈ, ವೃತ್ತ ನಿರೀಕ್ಷಕ ಅನಿಲ್‌ ಎಸ್‌ ಕುಲಕರ್ಣಿ  ಮತ್ತು ಶ್ವಾನದಳ, ಬೆರಳಚ್ಚು ತಜ್ಞರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.