ಸಂಚಾರ ನಿಯಮ ಉಲ್ಲಂಘನೆ: ಆನ್‌ಲೈನ್‌ ದಂಡ ಪಾವತಿಗೆ ಸಂಕಷ್ಟ!


Team Udayavani, Mar 20, 2019, 4:34 AM IST

20-march-1.jpg

ಮಹಾನಗರ: ನಗರದ ಯಾವುದೇ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲಿ ತತ್‌ಕ್ಷಣ ಮನೆಗೆ ನೋಟಿಸ್‌ ಬರುತ್ತಿದ್ದು, ಇದನ್ನು ಆನ್‌ಲೈನ್‌ನಲ್ಲಿ ಕಟ್ಟಬಹುದು ಎಂದು ನಿರಾಳವಾಗುವಂತಿಲ್ಲ. ಯಾಕೆಂದರೆ ನೋಟಿಸ್‌ನಲ್ಲಿ ನಮೂದಿಸಲಾದ ವೆಬ್‌ಸೈಟ್‌ ಕಾರ್ಯಾಚರಿಸುತ್ತಿಲ್ಲ ಮಾತ್ರ ವಲ್ಲ ಈ ವೆಬ್‌ ಸೈ ಟ್‌ ನಲ್ಲಿ ಆನ್‌ ಲೈನ್‌ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆಯೇ ಇಲ್ಲ.

ಹೆಲ್ಮೆಟ್‌ ಹಾಕದೆ, ಸೀಟ್‌ ಬೆಲ್ಟ್ ಧರಿಸದೆ ಅಥವಾ ತ್ರಿಬಲ್‌ ರೈಡ್‌, ದೋಷಯುಕ್ತ ನಂಬರ್‌ ಪ್ಲೇಟ್‌ ಅಳವಡಿಸಿ ವಾಹನ ಚಲಾಯಿಸುವವರು ಪೊಲೀಸರ ಕಣ್ತಪ್ಪಿಸಿ ಪಾರಾಗುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರಂಭಿಸಲಾದ ಆಟೋಮೇಷನ್‌ ಸೆಂಟರ್‌ ಮೂಲಕ ವಾಹನಗಳ ಮಾಹಿತಿ ತತ್‌ಕ್ಷಣ ಲಭಿಸುತ್ತಿದೆ. ಇದರಿಂದ ಆ ವಾಹನದ ಮಾಲಕರಿಗೆ ನೋಟಿಸ್‌ ಜಾರಿ ಮಾಡಲಾಗುತ್ತಿದೆ. ನೋಟಿಸ್‌ ದೊರೆತ ಏಳು ದಿನಗಳೊಳಗಾಗಿ ದಂಡ ಪಾವತಿಸಬೇಕಾಗಿದೆ. ದಂಡ ಪಾವತಿಸಲು ಸ್ಥಳೀಯ ಸಂಚಾರಿ ಪೊಲೀಸ್‌ ಠಾಣೆಗಳು ಅಥವಾ ಮಂಗಳೂರು ಒನ್‌ಗೆ ತೆರಳಬೇಕು. ಆದರೆ ನೋಟಿಸ್‌ನಲ್ಲಿ ನಮೂದಿಸಲಾದ ಆನ್‌ಲೈನ್‌ ವೆಬ್‌ಸೈಟ್‌ (www.mangalore.gov.in) ಮಾತ್ರ ಕಾರ್ಯಾಚರಿಸುತ್ತಿಲ್ಲ. ಹಲವಾರು ತಿಂಗಳುಗಳಿಂದ ಈ ವೆಬ್‌ ಸೈಟ್‌ ಲಾಗಿನ್‌ ಮಾಡಲು ಹೋದರೆ ದಿನದ 24 ಗಂಟೆಯೂ ಸರ್ವರ್‌ ಸಮಸ್ಯೆ ಎದುರಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ನೋಟಿಸ್‌ನಲ್ಲಿ ಮಾತ್ರ ಆನ್‌ಲೈನ್‌
ಸಂಚಾರ ನಿಯಮ ಉಲ್ಲಂ ಸಿದರೆ ನಿರ್ದಿಷ್ಟ ಸಮಯದಲ್ಲಿ ದಂಡ ಪಾವತಿಸಲು ವಿಫಲವಾದಲ್ಲಿ ವಾಹನಕಾಯ್ದೆ 1988ರ ಕಲಂ 187ರ ಪ್ರಕಾರ 3 ತಿಂಗಳವರೆಗೆ ಕಾರಾಗೃಹವಾಸ ಅಥವಾ 500 ರೂ. ಗಳವರೆಗೆ ದಂಡ ಎರಡರಿಂದಲೂ ಶಿಕ್ಷಿಸಲ್ಪಡುತ್ತದೆ ಎಂದು ನೋಟಿಸ್‌ನಲ್ಲಿ ಬರೆಯಲಾಗಿದೆ. ಒಂದು ವೇಳೆ ಹೊರ ರಾಜ್ಯಗಳಲ್ಲಿ ನೋಂದಣಿಗೊಂಡ ವಾಹನ ಮಂಗಳೂರಿಗೆ ಬಂದು ಸಂಚಾರಿ ನಿಯಮ ಉಲ್ಲಂಘಿಸಿದರೆ, ಅವರ ವಿಳಾಸಕ್ಕೆ ನೋಟಿಸ್‌ ಹೋಗುತ್ತದೆ. ಆದರೆ ಅವರು ಇಲ್ಲಿಗೆ ಬಂದು ದಂಡ ಪಾವತಿಸುವುದು ಬಹಳ ಕಷ್ಟದ ವಿಷಯ.

ನಗರ ವ್ಯಾಪ್ತಿಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ನೋಟಿಸ್‌ ಬಂದರೆ ಅದನ್ನು ಟ್ರಾಫಿಕ್‌ ಪೂರ್ವ ಪೊಲೀಸ್‌ ಠಾಣೆ ಕದ್ರಿ, ಟ್ರಾಫಿಕ್‌ ಪಶ್ಚಿಮ ಪೊಲೀಸ್‌ ಠಾಣೆ ಪಾಂಡೇಶ್ವರ, ಟ್ರಾಫಿಕ್‌ ಉತ್ತರ ಪೊಲೀಸ್‌ ಠಾಣೆ ಸುರತ್ಕಲ್‌, ಟ್ರಾಫಿಕ್‌ ದಕ್ಷಿಣ ಪೊಲೀಸ್‌ ಠಾಣಾ ನಾಗುರಿ ಮತ್ತು ಮಂಗಳೂರು ಒನ್‌ ಕೇಂದ್ರಗಳಲ್ಲಿ ಕಟ್ಟಬಹುದಾಗಿದೆ.

ಸೆಂಟರ್‌ ಎಲ್ಲಿದೆ ?
ಆಟೋಮೇಷನ್‌ ಸೆಂಟರ್‌ ನಗರದ ಕದ್ರಿಯಲ್ಲಿರುವ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದ ಪ್ರಮುಖ ಭಾಗಗಳಾದ ಕಣ್ಣೂರು, ಉಳ್ಳಾಲ, ಬೋಂದೆಲ್‌, ಕಾವೂರು, ವಾಮಂಜೂರು ಮುಂತಾದೆಡೆಗಳಲ್ಲಿ 92ಎಚ್‌ಡಿ ಕೆಮರಾಗಳನ್ನು ಅಳವಡಿಸಲಾಗಿದೆ. 

 ಪರಿಶೀಲಿಸಲಾಗುವುದು
ಸಂಚಾರಿ ನಿಯಮ ಉಲ್ಲಂಸಿದವರಿಗೆ ಈಗ ಸಂಚಾರಿ ಪೊಲೀಸ್‌ ಠಾಣೆ ಮತ್ತು ಮಂಗಳೂರು ಒನ್‌ಗಳಲ್ಲಿ ದಂಡ ಪಾವತಿಸಲು ಅವಕಾಶವಿದೆ. ಆನ್‌ಲೈನ್‌ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಲಾಗುವುದು.
 -ಉಮಾ ಪ್ರಶಾಂತ್‌,
ಡಿಸಿಪಿ ಅಪರಾಧ ಮತ್ತು ಸಂಚಾರ ವಿಭಾಗ

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.