ಶುಶ್ರೂಷಕರ ಸೇವೆ ಅಮೂಲ್ಯ: ವೆಂಕಟಾಚಲಪತಿ


Team Udayavani, Jun 16, 2019, 5:18 AM IST

1506MLR102-WENLOK

ಮಹಾನಗರ: ರೋಗಿಗಳ ನೋವಿಗೆ ಸ್ಪಂದಿಸಿ ಸಹನೆಯಿಂದ ಶ್ರುಶೂಷೆಗೈದು ಗುಣಮುಖರಾಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಶುಶ್ರೂಷಕರ ಸೇವೆ ಅಮೂಲ್ಯವಾದುದು ಎಂದು ದ.ಕ. ಅಪರ ಜಿಲ್ಲಾಧಿಕಾರಿ ಆರ್‌. ವೆಂಕಟಾಚಲಪತಿ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ಶುಶ್ರೂಷಕರ ಸಂಘದ ದ.ಕ. ಜಿಲ್ಲಾ ಶಾಖೆಯ ಆಶ್ರಯ ದಲ್ಲಿ ವೆನ್ಲಾಕ್ ಆಸ್ಪತ್ರೆಯ ಆರ್‌ಎಪಿಸಿಸಿಯ ಡಾ| ಬಿ. ವಿವೇಕಾನಂದ ಪ್ರಭು ಸಭಾಂಗಣದಲ್ಲಿ ಶನಿವಾರ ಜರಗಿದ ಅಂತಾರಾಷ್ಟ್ರೀಯ ಶುಶ್ರೂಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಶುಶ್ರೂಷಕರಿಗೆ ಉತ್ತಮ ವೃತ್ತಿಜೀವನವನ್ನು ಕಲ್ಪಿಸುವ ನಿಟ್ಟಿನಲ್ಲಿ ಪೂರಕ ಕ್ರಮಗಳು ಅಗತ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿಯವರು ಮಾತನಾಡಿ, ಯಾವುದೇ ಪ್ರಲೋಭನೆ, ಪದೋನ್ನತಿ ಬಗ್ಗೆ ಚಿಂತಿಸದೆ ತಮ್ಮ ಕರ್ತವ್ಯವನ್ನು ನಿಷ್ಠೆ ಹಾಗೂ ಬದ್ದತೆಯಿಂದ ಮಾಡಿ ಬಡರೋಗಿಗಳಿಗೆ ಸೇವೆ ನೀಡುವ ಶುಶ್ರೂಷಕರ ಸೇವೆ ಉತ್ಕೃಷ್ಠವಾದುದು ಎಂದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಶಾಖೆ ಅಧ್ಯಕ್ಷ ಪ್ರಕಾಶ್‌ ನಾಯಕ್‌, ಲೇಡಿಗೋಷನ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ| ಸವಿತಾ, ವೆನಾÉಕ್‌ ಆಸ್ಪತ್ರೆಯ ಆರ್‌ಎಂಒ ಡಾ| ಜೂಲಿಯಾನ ಸಲ್ಡನ್ಹಾ ಅತಿಥಿಯಾಗಿದ್ದರು. ಸರಕಾರಿ ಶುಶ್ರೂಷಕರ ಸಂಘದ ದ.ಕ. ಜಿಲ್ಲಾ ಶಾಖೆ ಅಧ್ಯಕ್ಷೆ ದೇವಕಿ ಅಧ್ಯಕ್ಷತೆ ವಹಿಸಿದ್ದರು.

ರಾಜೀವ್‌ ಗಾಂಧಿ ವಿವಿ ಮಾಜಿ ಸೆನೆಟ್‌ ಸದಸ್ಯೆ ಐರಿನ್‌ ವೇಗಸ್‌ ವಿಶೇಷ ಉಪನ್ಯಾಸ ನೀಡಿದರು.

ಪ್ರಸ್ತಾವನೆಗೈದ ಸಂಘದ ಕಾರ್ಯದರ್ಶಿ ಮಹಾಲಕ್ಷ್ಮೀ ಅವರು 1978ರಲ್ಲಿ ಪ್ರಾರಂಭವಾದ ಸಂಘ ಇದೀಗ 41 ವರ್ಷದ ಹೊಸ್ತಿಲಲ್ಲಿದ್ದು 350ಕ್ಕೂ ಅಧಿಕ ಸದಸ್ಯರನ್ನು ಹೊಂದಿದೆ. ಶುಶ್ರೂಷಕರು ಎದುರಿಸುವ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಘ ಶ್ರಮಿಸುತ್ತಾ ಬಂದಿದೆ ಎಂದರು.

30ಕ್ಕೂ ಅಧಿಕ ವರ್ಷ ಶುಶ್ರೂಷ ವೃತ್ತಿಯನ್ನು ನಿರ್ವಹಿಸಿ ನಿವೃತ್ತರಾಗಿರುವ ಶಾರದಾ, ಚಂಚಲಾಕ್ಷಿ, ಗ್ರೇಸಿ ಫೆರ್ನಾಂಡೀಸ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಶುಶ್ರೂಷಕಕರಾದ ಭವಾನಿ, ಸುಮಂಗಲ, ಸುನಂದ, ಹರಿಣಿ, ಫಿಲೋಮಿನಾ ಬೆರೆಟ್ಟೊ, ಸುಭಾಷಿಣಿ, ಶಶಿಕಲಾ ಅವರು° ಸಮ್ಮಾನಿಸಲಾಯಿತು. ಶುಶ್ರೂಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಶಶಿಕಲಾ ಸ್ವಾಗತಿಸಿದರು. ಸಜಿನಿ ಸುಬ್ರಹ್ಮಣ್ಯ ನಿರೂಪಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.