ಕರಾವಳಿಯ ತಾಜಾ ಮೀನು ರಫ್ತಿಗೆ ಹಿನ್ನಡೆ !

ವಿಮಾನಯಾನ ಸಂಸ್ಥೆಗಳ ನಿರಾಸಕ್ತಿ

Team Udayavani, Nov 9, 2020, 6:10 AM IST

Fish

ಮಂಗಳೂರು: ನಮ್ಮ ಕರಾವಳಿ ಜಿಲ್ಲೆಗಳ ಸಮುದ್ರ ಮೀನಿಗೆ ಕೊಲ್ಲಿ ರಾಷ್ಟ್ರಗಳಲ್ಲಿ ಭಾರೀ ಬೇಡಿಕೆ. ಆದರೆ ವಿಮಾನಯಾನ ಸಂಸ್ಥೆಗಳ ನಿರಾಸಕ್ತಿಯಿಂದ ಇಲ್ಲಿನ ತಾಜಾ ಮೀನು ರಫ್ತಿಗೆ ದೊಡ್ಡ ಹಿನ್ನಡೆಯಾಗಿದೆ.

ತಾಜಾ ಮೀನನ್ನು ಹಿಡಿದ ದಿನ ಅಥವಾ ಸಂಸ್ಕರಿಸಿ ಒಂದೆರಡು ದಿನಗಳೊಳಗೆ ವಿಮಾನದ ಮೂಲಕ ಗಲ್ಫ್ ರಾಷ್ಟ್ರಗಳಿಗೆ ಕಳುಹಿಸಬಹುದು. ಆದರೆ ಮಂಗಳೂರು ವಿಮಾನ ನಿಲ್ದಾಣದಿಂದ ತಾಜಾ ಮೀನು ಸಾಗಾಟಕ್ಕೆ ಅವಕಾಶವಿಲ್ಲ; ಲಾಕ್‌ಡೌನ್‌ ಪೂರ್ವದಲ್ಲಿ ಬೆಂಗಳೂರು, ಗೋವಾ ಅಥವಾ ಕೇರಳದ ಕೋಯಿ ಕ್ಕೋಡ್‌, ತಿರುವನಂತಪುರವರೆಗೆ ರಸ್ತೆ ಮಾರ್ಗವಾಗಿ ಸಾಗಿಸಿ ಅಲ್ಲಿಂದ ವಿಮಾನದಲ್ಲಿ ಕಳುಹಿಸಲಾಗುತ್ತಿತ್ತು. ಇದು ಹಣ ಮತ್ತು ಸಮಯ- ಎರಡೂ ದೃಷ್ಟಿಯಿಂದ ದುಬಾರಿ. ಹೀಗಾಗಿ ತಾಜಾ ಮೀನುರಫ್ತು ಸಮಸ್ಯೆ ಆಗಿದೆ.

ಏರ್‌ ಇಂಡಿಯಾ ನಿರಾಸಕ್ತಿ!
3 ವರ್ಷಗಳ ಹಿಂದೆ ಮಂಗಳೂರಿನಿಂದ ಏರ್‌ ಇಂಡಿಯಾ ವಿಮಾನದ ಮೂಲಕ ತಾಜಾ ಮೀನು ರಫ್ತಾಗುತ್ತಿತ್ತು. ಆದರೆ ಅಸಮರ್ಪಕ ಪ್ಯಾಕೇಜಿಂಗ್‌ನಿಂದ ಸಾಗಾಟಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆ ಎಂಬ ಕಾರಣ ನೀಡಿ ಸ್ಥಗಿತಗೊಳಿಸಿತ್ತು. ಹೀಗಾಗಿ ಬೇರೆ ವಿಮಾನ ನಿಲ್ದಾಣಗಳ ಮೂಲಕ ರವಾನಿಸಬೇಕಾಯಿತು. ಲಾಕ್‌ಡೌನ್‌ ಬಳಿಕ ಅದೂ ಸ್ಥಗಿತಗೊಂಡಿದೆ.

ಇಂಡಿಗೋ ಸಹಮತ
ಮಂಗಳೂರಿನಿಂದ ದುಬಾೖಗೆ ಇಂಡಿಗೋ ವಿಮಾನ ಸೇವೆ ಆರಂಭಿಸುವ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದ್ದು, ಅದರ ಮೂಲಕ ತಾಜಾ ಮೀನನ್ನು ಕೊಂಡೊಯ್ಯಲು ಅವಕಾಶ ನೀಡುವ ಮಾತುಕತೆ ನಡೆಯುತ್ತಿದೆ.

ಕಾರ್ಗೊ ಆದ್ಯತೆ
ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಖಾಸಗಿ ಸಂಸ್ಥೆಗೆ ಹಸ್ತಾಂತರವಾಗಿರುವ ಹಿನ್ನೆಲೆಯಲ್ಲಿ ಕಾರ್ಗೊ ವಿಮಾನಗಳಿಗೆ ಹೆಚ್ಚಿನ ಒತ್ತು ಸಿಗುವ ನಿರೀಕ್ಷೆಯಿದೆ. ಇದಾದರೆ ಕರಾವಳಿಯಿಂದ ವಿವಿಧ ಉತ್ಪನ್ನಗಳ ರಫ್ತಿಗೆ ಅವಕಾಶ ಸಿಗಬಹುದು.

69 ಸಾವಿರ ಮೆ. ಟನ್‌ ಮೀನು ರಫ್ತು
ದ.ಕ., ಉಡುಪಿ ಜಿಲ್ಲೆಯಿಂದ ವಾರ್ಷಿಕ 69 ಸಾವಿರ ಮೆ.ಟ. ಮೀನು ರಫ್ತಾಗುತ್ತದೆ. ಶೀತಲೀಕೃತ ವ್ಯವಸ್ಥೆಯ ಮೀನನ್ನು ಎನ್‌ಎಂಪಿಟಿ ಬಂದರಿನಿಂದ ಹಡಗಿನಲ್ಲಿ ಕಳುಹಿಸಲಾಗುತ್ತದೆ. ಶೀತಲೀಕೃತ ಮೀನನ್ನು 9 ತಿಂಗಳವರೆಗೂ ಕಾಪಿಡ ಬಹುದು. ತಾಜಾ ಮೀನನ್ನು 3-4 ದಿನ ಮಾತ್ರ ಕಾದಿರಿಸಬಹುದು. ಆದ್ದರಿಂದ ವಿಮಾನ ಮೂಲಕವಷ್ಟೇ ರಫ್ತು ಮಾಡಬಹುದಾಗಿದೆ. ಸದ್ಯ ವಿದೇಶಕ್ಕೆ ವಿಮಾನ ಇಲ್ಲ; ಇದಕ್ಕೆ ಮುನ್ನ ಮಂಗಳೂರು ಬಿಟ್ಟು ಇತರ ನಗರಗಳಿಂದ ವಿಮಾನದ ಮೂಲಕ ರಫ್ತು ಮಾಡಲಾಗುತ್ತಿತ್ತು.

ತಾಜಾ ಮೀನು ರಫ್ತಿಗೆ ಮಂಗಳೂರು ವಿಮಾನ ನಿಲ್ದಾಣ ಮೂಲಕ ಏಕೆ ಅವಕಾಶ ಸಿಗುತ್ತಿಲ್ಲ ಎಂಬ ಬಗ್ಗೆ ಸಂಬಂಧಪಟ್ಟವರ ಜತೆಗೆ ಮಾತುಕತೆ ನಡೆಸಲಾಗುವುದು. ವಿದೇಶಕ್ಕೆ ವಿಮಾನ ಆರಂಭವಾದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ವಿಮಾನದಲ್ಲಿ ರಫ್ತಿಗೆ ಅವಕಾಶ ನೀಡುವಂತೆ ಏರ್‌ ಇಂಡಿಯಾ ಸಿಇಒಗೆ ಮನವಿ ಮಾಡಲಾಗಿದೆ. ಇದು ಸಾಧ್ಯವಾದರೆ ಇಲ್ಲಿನ ಮೀನುಗಾರಿಕೆ ಚಟುವಟಿಕೆ ಯಲ್ಲಿ ಮತ್ತಷ್ಟು ಚೇತರಿಕೆ ಸಾಧ್ಯ.
– ಐಸಾಕ್‌ ವಾಜ್‌, ಅಧ್ಯಕ್ಷರು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ

ದಿನೇಶ್‌ ಇರಾ

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.