ರಾಜ್ಯದಲ್ಲಿ 100 ಮಿನಿ ಎಂಆರ್‌ಎಫ್ ಘಟಕ ಸ್ಥಾಪನೆಗೆ ಸಿದ್ಧತೆ   

ಗ್ರಾ.ಪಂ. ಮಟ್ಟದಲ್ಲಿ ಒಣತ್ಯಾಜ್ಯ ವೈಜ್ಞಾನಿಕ ನಿರ್ವಹಣೆಗೆ ಒತ್ತು

Team Udayavani, Mar 27, 2022, 6:25 AM IST

ರಾಜ್ಯದಲ್ಲಿ 100 ಮಿನಿ ಎಂಆರ್‌ಎಫ್ ಘಟಕ ಸ್ಥಾಪನೆಗೆ ಸಿದ್ಧತೆ   

ಮಂಗಳೂರು: ಒಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಮರುಬಳಕೆಗೆ ಸಿದ್ಧಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ 100ಕ್ಕೂ ಅಧಿಕ “ಮಿನಿ ಎಂಆರ್‌ಎಫ್’ (ಮೆಟೀರಿಯಲ್ಸ್‌ ರಿಕವರಿ ಫೆಸಿಲಿಟಿ) ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದ್ದು 4 ಜಿಲ್ಲೆಗಳಲ್ಲಿ ಈಗಾಗಲೇ ಅನುಷ್ಠಾನಗೊಂಡಿರುವ ಎಂಆರ್‌ಎಫ್ ಘಟಕಗಳ ಮಾದರಿಯಲ್ಲಿಯೇ ಕಾರ್ಯಾಚರಿಸಲಿವೆ.

ಉಡುಪಿ, ದ.ಕ., ಬಳ್ಳಾರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ಪೈಲಟ್‌ ಯೋಜನೆಯಾಗಿ ತಲಾ ಒಂದು “ಎಂಆರ್‌ಎಫ್ ಘಟಕ’ಗಳನ್ನು ನಿರ್ಮಿಸಲು ನಿರ್ಧರಿಸಲಾಗಿತ್ತು. ಉಡುಪಿ ಜಿಲ್ಲೆಯ ನಿಟ್ಟೆಯಲ್ಲಿ ಎಂಆರ್‌ಎಫ್ ಘಟಕ 4 ತಿಂಗಳುಗಳಿಂದ ಪ್ರಾಯೋಗಿಕವಾಗಿ ಕಾರ್ಯಾಚರಿಸುತ್ತಿದೆ. ದ.ಕ.ದ ತೆಂಕ ಎಡಪದವಿನಲ್ಲಿ ನಿರ್ಮಾಣವಾಗುತ್ತಿದ್ದು 5 ತಿಂಗಳಲ್ಲಿ ಕಾರ್ಯಾರಂಭಿಸುವ ನಿರೀಕ್ಷೆ ಇದೆ. ಬಳ್ಳಾರಿ ಮತ್ತು ರಾಮನಗರದಲ್ಲಿಯೂ ಘಟಕದ ಕಟ್ಟಡ ಸಿದ್ಧಗೊಂಡಿದೆ.

ದ.ಕ: ತಾಲೂಕಿಗೊಂದು ಘಟಕ
ದ.ಕ. ಜಿಲ್ಲೆಯಲ್ಲಿ ತಾಲೂಕಿಗೊಂದು ಮಿನಿ ಎಂಆರ್‌ಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿದೆ. ಉಡುಪಿ ಜಿಲ್ಲೆಯ
4 ಕಡೆ ಮಿನಿ ಎಂಆರ್‌ಎಫ್ ಘಟಕ ನಿರ್ಮಾಣ ವಾಗಲಿದೆ. 80 ಬಡಗಬೆಟ್ಟು ಘಟಕ ಮುಂದಿನ 3-4 ತಿಂಗಳಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ತ್ರಾಸಿಯಲ್ಲಿಯೂ ಶೀಘ್ರದಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ಅನಂತರ ಹೆಬ್ರಿ, ಕೆದೂರು ಭಾಗದಲ್ಲಿಯೂ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಳಮಟ್ಟದಲ್ಲಿ ಸಿದ್ಧತೆ
ಎಂಆರ್‌ಎಫ್ ಘಟಕದ ತಾಂತ್ರಿಕ ಸಲಹೆಗಾರ ಸಂಸ್ಥೆಯಾಗಿರುವ “ಸಾಹಸ್‌’ ಎನ್‌ಜಿಒ 4 ಜಿಲ್ಲೆಗಳ ಎಂಆರ್‌ಎಫ್ ಘಟಕಗಳ ಯಶಸ್ಸಿಗೆ ಪೂರಕವಾಗಿ ಈಗಾಗಲೇ ಗ್ರಾಮ ಮಟ್ಟದಲ್ಲಿ ಜಾಗೃತಿ, ತರಬೇತಿ, ಪ್ರಾತ್ಯಕ್ಷಿಕೆ, ಡಾಕ್ಯುಮೆಂಟೇಷನ್‌ ಮೊದಲಾದವುಗಳನ್ನು ನಡೆಸುತ್ತಿದೆ. “ಸಾಹಸ್‌’ಗೆ ಬೆಂಗಳೂರಿನ ಎಚ್‌ಸಿಎಲ್‌ ಫೌಂಡೇಶನ್‌ 5 ಕೋ.ರೂ. ಅನುದಾನ ನೀಡಿದೆ.

ಯಾಕಾಗಿ ಮಿನಿ ಎಂಆರ್‌ಎಫ್?
ಎಂಆರ್‌ಎಫ್ ಘಟಕಗಳಲ್ಲಿ ಕೆಮಿಕಲ್‌ ಮತ್ತು ಮೆಡಿಕಲ್‌ಗೆ ಸಂಬಂಧಿ ಸಿದ ಅಪಾಯಕಾರಿ ವಸ್ತು ಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಒಣ ತ್ಯಾಜ್ಯ ಗಳನ್ನು ವೈಜ್ಞಾನಿಕವಾಗಿ ಸಂಸ್ಕ ರಿಸಿ ಮೌಲ್ಯವರ್ಧನೆಗೊಳಿಸಿ ಮರು ಬಳಕೆಗೆ ಸಿದ್ಧಪಡಿಸಿಕೊಡಲಾಗುತ್ತದೆ. ಇದು ಗ್ರಾ.ಪಂ.ಗಳ ಒಣತ್ಯಾಜ್ಯ ನಿರ್ವಹಣೆಯ ಭಾರವನ್ನು ಇಳಿಸಲು ಸಹಕಾರಿ. ಆದರೆ ಒಂದು ಎಂಆರ್‌ಎಫ್ ಘಟಕ 10 ಮೆಟ್ರಿಕ್‌ ಮೆಟ್ರಿಕ್‌ ಟನ್‌ ಸಾಮರ್ಥ್ಯ ಮಾತ್ರ ಹೊಂದಿದ್ದು ಗರಿಷ್ಠ ವೆಂದರೆ ಸುಮಾರು 40 ಗ್ರಾ.ಪಂ.ಗಳ ವ್ಯಾಪ್ತಿಯ ಒಣಕಸವನ್ನು ಸಂಸ್ಕರಿ ಸಲು ಸಾಧ್ಯವಾಗುತ್ತದೆ. ಉಳಿದ ಗ್ರಾ.ಪಂಗಳ ಒಣಕಸ ಸಂಸ್ಕರಣೆ ಇದರಿಂದ ಸಾಧ್ಯ ವಾಗದು. ಈ ಹಿನ್ನೆಲೆಯಲ್ಲಿ 5-10 ಗ್ರಾ.ಪಂ.ಗಳಿಗೆ ಒಂದರಂತೆ “ಮಿನಿ ಎಂಆರ್‌ಎಫ್’ ಘಟಕಗಳನ್ನು ಸ್ಥಾಪಿಸಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು.

ಉಡುಪಿಯ 2 ಘಟಕ ಶೀಘ್ರ
ಉಡುಪಿ ಜಿಲ್ಲೆಯಲ್ಲಿ ಎಂಆರ್‌ಎಫ್ ಘಟಕ ಈಗಾಗಲೇ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸುತ್ತಿದ್ದು ಯಶಸ್ವಿಯಾಗಿದೆ. ಇನ್ನು ನಾಲ್ಕು ಮಿನಿ ಎಂಆರ್‌ಎಫ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು ಅವುಗಳಲ್ಲೆರಡು ಶೀಘ್ರ ಆರಂಭಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸರಕಾರದಿಂದ “ಪ್ಲಾಸ್ಟಿಕ್‌ ಮ್ಯಾನೇಜ್‌ಮೆಂಟ್‌ ಯುನಿಟ್‌’ಗೆ ತಾಲೂಕಿಗೆ 15 ಲ.ರೂ. ಅನುದಾನ ದೊರೆಯಲಿದೆ. ಅದನ್ನು ಘಟಕಕ್ಕೆ ಬಳಸಿ ಉಳಿದ ಮೊತ್ತವನ್ನು ಗ್ರಾ.ಪಂ., ತಾ.ಪಂ.ಗಳಿಂದ ಪಡೆದು ಘಟಕ ಸ್ಥಾಪಿಸಲಾಗುವುದು.
– ನವೀನ್‌ ಭಟ್‌, ಸಿಇಒ, ಜಿ.ಪಂ. ಉಡುಪಿ

ಸ್ಥಳ ಗುರುತಿಸುವ ಪ್ರಕ್ರಿಯೆ
ದ.ಕ. ಜಿಲ್ಲೆಯಲ್ಲಿ ಎಂಆರ್‌ಎಫ್ ಘಟಕ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಜತೆಗೆ ತಾಲೂಕಿಗೊಂದು ಮಿನಿ ಎಂಆರ್‌ಎಫ್ ಘಟಕಗಳನ್ನು ನಿರ್ಮಿಸಲು ಸ್ಥಳ ಗುರುತಿಸುತ್ತಿದ್ದೇವೆ. ಎಲ್ಲ ಗ್ರಾ.ಪಂ.ಗಳ ಒಣತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಸ್ಕರಿಸಲು ಇದು ಸಹಕಾರಿ.
– ಡಾ| ಕುಮಾರ್‌, ಸಿಇಒ, ದ.ಕ. ಜಿ.ಪಂ.

 

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.