ಶಕ್ತಿನಗರ: ಮನೆಯ ಬಾಗಿಲು ಮುರಿದು 3.47 ಲಕ್ಷ ರೂ. ಮೌಲ್ಯದ ಸೊತ್ತು ಕಳವು
Team Udayavani, Jan 30, 2023, 9:47 PM IST
ಮಂಗಳೂರು: ಶಕ್ತಿನಗರದ ಕಾರ್ಮಿಕ ಕಾಲನಿ ರಸ್ತೆಯ ಕೆಎಚ್ಬಿ ಕಾಲನಿಯ ಉದಯ್ ಕೇಶವ್ ಎಂಬುವರ ಮನೆಗೆ ಕಳ್ಳರು ನುಗ್ಗಿ 3,47,500 ರೂ. ಮೌಲ್ಯದ ಸೊತ್ತು ಮತ್ತು ನಗದನ್ನು ಕಳವು ಮಾಡಲಾಗಿದೆ.
ಮನೆಯವರು ಮನೆಗೆ ಬೀಗ ಹಾಕಿ ಪೂಜಾ ಕಾರ್ಯಕ್ರಮವೊಂದಕ್ಕೆ ಕುಂಬ್ಳೆಗೆ ತೆರಳಿದ್ದು, ಜ.28ರ ಸಂಜೆ 4.30ರಿಂದ 29ರ ಮಧ್ಯಾಹ್ನ 12.30ರ ನಡುವೆ ಕಳ್ಳತನ ನಡೆದಿದೆ. ಕಳ್ಳರು ಮನೆಯ ಮೇಲಿನ ಮಹಡಿಯ ಬಾಲ್ಕನಿಯ ಬಾಗಿಲನ್ನು ಸುತ್ತಿಗೆಯಿಂದ ಹೊಡೆದು ಒಳಪ್ರವೇಶಿಸಿದ್ದಾರೆ.
ನೆಲ ಅಂತಸ್ತಿನ ಕೋಣೆಯ ಸ್ಟೀಲ್ ಕಪಾಟ್ ಲಾಕರನ್ನು ಮುರಿದು 2,50,000 ರೂ., ನಗದು ಹಾಗೂ ಇನ್ನೊಂದು ಕೋಣೆಯಲ್ಲಿದ್ದ ಲಾಕರ್ ಮುರಿದು 60,000 ರೂ. ಮೌಲ್ಯದ ಎರಡು ಕರಿಮಣಿ ಸರ, 36,000 ರೂ. ಮೌಲ್ಯದ ಮೂರು ಜತೆ ಬೆಂಡೋಲೆ, ಹಾಗೂ 1500 ರೂ. ಮೌಲ್ಯದ ಲೇಡಿಸ್ ವಾಚನ್ನು ಕಳವು ಮಾಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!