ಶಾಂತಿನಗರ-ಮೇಲೂರು ರಸ್ತೆ ಕುಸಿತ: ಸಂಪರ್ಕ ಕಡಿತ


Team Udayavani, Aug 19, 2018, 11:37 AM IST

19-agust-7.jpg

ನೆಲ್ಯಾಡಿ : ಕಾಂಚನದಿಂದ ಶಾಂತಿನಗರ ಮೂಲಕ ಮೇಲೂರುಗೆ ಸಂಪರ್ಕ ಕಲ್ಪಿಸುವ ಜಿ.ಪಂ. ರಸ್ತೆಯು ಪಾಜಳಿಕೆ ಎನ್ನುವಲ್ಲಿ ಕುಸಿತವಾಗಿದೆ. ಈ ರಸ್ತೆಯಲ್ಲಿ ಬಸ್ಸು ಹಾಗೂ ಇತರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಾಜಳಿಕೆಯಲ್ಲಿ ಡಾಮರು ರಸ್ತೆ ಕುಸಿತಗೊಂಡಿದೆ. ಈ ಭಾಗದಿಂದ ದಿನಂಪ್ರತಿ ಉಪ್ಪಿನಂಗಡಿ ಹಾಗೂ ಇತರೆಡೆ ಸಂಚರಿಸುವ ಸಾರ್ವಜನಿ ಕರು ಹಾಗೂ ಶಾಲಾ ಮಕ್ಕಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಉಪ್ಪಿನಂಗಡಿಯಿಂದ ಕಾಂಚನ- ಶಾಂತಿನಗರಕ್ಕೆ ದಿನಂಪ್ರತಿ 8 ಬಾರಿ ಕೆಎಸ್‌ ಆರ್‌ಟಿಸಿ ಬಸ್ಸು ಓಡಾಟ ನಡೆಸುತ್ತದೆ. ರಸ್ತೆ ಕುಸಿತಗೊಂಡಿರುವುದರಿಂದ ಬಸ್ಸು ಕಾಂಚನ ಪೇಟೆಯಿಂದ ಸ್ವಲ್ಪ ಮುಂದೆ ಶಾಂತಿನಗರ ಜಿ.ಪಂ. ರಸ್ತೆಗೆ ತಿರುಗುವಲ್ಲಿಯವರೆಗೆ ಬರುತ್ತಿದ್ದು, ಅಲ್ಲಿಂದ ಮುಂದೆ ಓಡಾಟ ಸಾಧ್ಯವಾಗುತ್ತಿಲ್ಲ. ಅಲ್ಲಿಂದ ಶಾಂತಿನಗರಕ್ಕೆ ನಾಲ್ಕೈದು  ಕಿ.ಮೀ. ದೂರವಿದ್ದು, ಬಸ್ಸಿನಲ್ಲಿ ಬಂದ ಪ್ರಯಾಣಿಕರು ನಡೆದುಕೊಂಡೇ ತೆರಳಬೇಕಾಗಿದೆ. ರಸ್ತೆ ಕುಸಿತಗೊಂಡಿರುವ ಬಗ್ಗೆ ಮಾಹಿತಿ ಇಲ್ಲದೇ ಬರುವ ಕೆಲ ಲಘು ವಾಹನಗಳು ಇಲ್ಲಿ ಹೂತು ಹೋಗುತ್ತಿದೆ. 

ತಿಂಗಳ ಹಿಂದೆ ಈ ರಸ್ತೆ ಹೊಂಡ-ಗುಂಡಿಗಳಿಂದ ಕೂಡಿತ್ತು. ಆ ಸಂದರ್ಭ ವಾಹನಗಳ ಓಡಾಟಕ್ಕೆ ತೊಂದರೆ ಯಾಗಿತ್ತು. ಸಾರ್ವಜನಿಕರ ದೂರಿಗೆ ಸ್ಪಂದಿ ಸಿದ ಜಿ.ಪಂ. ಸದಸ್ಯ ಸರ್ವೋತ್ತಮ ಗೌಡ ಅವರು ತುರ್ತು ದುರಸ್ತಿಗೆ ಕ್ರಮ ಕೈಗೊಂಡಿದ್ದರು. ಇದೀಗ ರಸ್ತೆ ಕುಸಿತದಿಂದ ಸಾರ್ವಜನಿಕರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾತ್ಕಾಲಿಕ ದುರಸ್ತಿ
ರಸ್ತೆ ಕುಸಿತಗೊಂಡಿರುವ ಪಾಜಳಿಕೆಯಲ್ಲಿ ಜಿ.ಪಂ. ಸದಸ್ಯರ ಸೂಚನೆ ಮೇರೆಗೆ ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕಲ್ಲು ತಂದು ಹಾಕಿ ಬಸ್ಸು ಹಾಗೂ ವಾಹನಗಳ ಓಡಾಟಕ್ಕೆ ಅನುಕೂಲವಾಗುವಂತೆ ಗ್ರಾ.ಪಂ.ನಿಂದ ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗಿದೆ.
– ನಯನಾಕುಮಾರಿ,
ಗೋಳಿತ್ತೂಟ್ಟು ಪಿಡಿಒ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.