ದಶಕಗಳ ಬಳಿಕ ಸೇತುವೆಯೇನೋ ಆಯಿತು; ಬಸ್‌ ಆದರೂ ಬೇಗ ಬರಲಿ


Team Udayavani, Jul 15, 2017, 2:55 AM IST

Shantimogaru Bridge 600.jpg

ಸವಣೂರು: ಶಾಂತಿಮೊಗರುವಿನಲ್ಲಿ ಸೇತುವೆ ನಿರ್ಮಾಣದೊಂದಿಗೆ ಸ್ಥಳೀಯರ ಹಲವು ದಶಕಗಳ ಕನಸು ನನಸಾಗಿದ್ದು, ಈ ಮಾರ್ಗವಾಗಿ ಬಸ್‌ ಸಂಚಾರದ ಕನಸೊಂದು ಬಾಕಿ ಇದೆ. ಈ ಮಾರ್ಗವಾಗಿ ಬಸ್‌ ಸೌಲಭ್ಯ ಒದಗಿಸುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ವಿವಿಧೆಡೆ ತೆರಳಲು ಸಾಕಷ್ಟು ಸಮಯ ಮತ್ತು ಹಣ ಉಳಿತಾಯವಾಗಲಿದೆ. ಆಲಂಕಾರು ಭಾಗದ ಜನತೆಗೆ ಪುತ್ತೂರು ತಲುಪಬೇಕಾದರೆ ಉಪ್ಪಿನಂಗಡಿ ಮೂಲಕ ಹೋಗಬೇಕಾದ ಅನಿವಾರ್ಯ ಇತ್ತು.ಇಲ್ಲಿಂದ ಪುತ್ತೂರಿಗೆ 28 ಕಿ.ಮೀ. ಮತ್ತು ಆಲಂಕಾರಿನಿಂದ ಶಾಂತಿಮೊಗರು – ಸವಣೂರು ಮಾರ್ಗವಾಗಿ ತೆರಳಲು 24 ಕಿ.ಮೀ. ದೂರವಿದೆ. ಈ ಸೇತುವೆಯಿಂದ ಸುಮಾರು 4 ಕಿ.ಮೀ. ದೂರ ಕಡಿಮೆಯಾಗಲಿದೆ. ಹೀಗಾಗಿ ಆಲಂಕಾರು- ಶಾಂತಿಮೊಗರು – ಸವಣೂರು ಮಾರ್ಗವಾಗಿ ಪುತ್ತೂರಿಗೆ ಬಸ್‌ ಸಂಚಾರ ಆರಂಭವಾಗ ಬೇಕು ಎಂಬುದು ಗ್ರಾಮಸ್ಥರ ಆಗ್ರಹ.

ಬೆಳ್ಳಾರೆ- ಸವಣೂರು- ಆಲಂಕಾರು-ಕಡಬಕ್ಕೆ ಬಸ್‌
ಬೆಳ್ಳಾರೆಯಿಂದ ಸವಣೂರು-ಶಾಂತಿ ಮೊಗರು ಮಾರ್ಗವಾಗಿ ಆಲಂಕಾರಿಗೆ ಬಸ್‌ ವ್ಯವಸ್ಥೆ ಕಲ್ಪಿಸಿದರೆ ಪಾಲ್ತಾಡಿ, ಪುಣcಪ್ಪಾಡಿ, ಸವಣೂರು, ಬೆಳಂದೂರು ಭಾಗದ ಜನತೆಗೆ ಹೋಬಳಿ ಕೇಂದ್ರವಾದ ಕಡಬಕ್ಕೆ ಆಲಂಕಾರು ಮಾರ್ಗವಾಗಿ ತೆರಳುವುದು ಸುಲಭವಾಗಲಿದೆ. ಇಲ್ಲದಿದ್ದರೆ ಈಗಿರುವಂತೆಯೇ ಸವಣೂರು, ಕಾಣಿಯೂರಿನಿಂದ ಪಂಜಕ್ಕೆ ತೆರಳಿ ಅಲ್ಲಿ ಬೇರೆ ಬಸ್‌ ಹಿಡಿದು ಕಡಬಕ್ಕೆ ಹೋಗಬೇಕು. ಪಾಲ್ತಾಡಿ ಗ್ರಾಮದವರು ಮಾಡಾವು- ಬೆಳ್ಳಾರೆ ಮಾರ್ಗದ ಮೂಲಕ ಪಂಜಕ್ಕೆ ತೆರಳಿ ಬೇರೆ ವಾಹನದಲ್ಲಿ ಕಡಬಕ್ಕೆ ಹೋಗುತ್ತಿದ್ದಾರೆ. ಹೊಸ ಬಸ್‌ ಸೇವೆ ಆರಂಭವಾದರೆ ಈ ಸಂಕಷ್ಟ ಬಗೆಹರಿಯಲಿದೆ.

ಬೆಳ್ಳಾರೆ – ಸವಣೂರು ಹೆಚ್ಚುವರಿ ಬಸ್‌ ಬೇಡಿಕೆ
ಬೆಳ್ಳಾರೆಯಿಂದ ಪೆರುವಾಜೆ ಮೂಲಕ ಸವಣೂರಿಗೆ ಹೆಚ್ಚುವರಿ ಬಸ್‌ಗಳು ಬೇಕು ಎಂಬ ಬೇಡಿಕೆಯೂ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಈಗಾಗಲೇ ಇರುವ ಸೇವೆಯಲ್ಲಿ ಬೆಳಗ್ಗೆ 8 ಗಂಟೆಗೆ ಹೊರಡುವ ಬಸ್‌ನಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಸವಣೂರು, ಪುತ್ತೂರು ಮೊದಲಾದೆಡೆ ಹೋಗುವ ವಿದ್ಯಾರ್ಥಿಗಳು, ಉದ್ಯೋಗಿಗಳು ಇದನ್ನು ಬಳಸುತ್ತಿದ್ದಾರೆ. ಅದು ಸವಣೂರನ್ನು 8.45ರ ವೇಳೆಗೆ ತಲುಪುತ್ತಿದೆ. ಇದರ ಬದಲಾಗಿ ಎಂಟು ಗಂಟೆಗೆ ತಲುಪುವ ಹೆಚ್ಚುವರಿ ಬಸ್‌ ಬೇಕು ಎಂಬುದು ಜನರ ಬೇಡಿಕೆ. ಇದರೊಂದಿಗೆ ಪುತ್ತೂರಿನಿಂದ ಸಂಜೆ 6 ಗಂಟೆಗೆ ಸವಣೂರಿನಿಂದ ಬೆಳ್ಳಾರೆ ಮಾರ್ಗವಾಗಿ ಹೆಚ್ಚುವರಿ ಬಸ್‌ನ ವ್ಯವಸ್ಥೆ ಕಲ್ಪಿಸಿದರೆ ಸಾಕಷ್ಟು ಅನುಕೂಲವಾಗಲಿದೆ. ಬೆಳಗ್ಗೆ 9ರಿಂದ ಸಂಜೆ 5.30ರ ತನಕ ಕೆಲಸ ನಿರ್ವಹಿಸುವವರಿಗೆ 6 ಗಂಟೆಯ ಬಸ್‌ ಅನುಕೂಲವಾಗಲಿದ್ದು, ಬಾಡಿಗೆ ತೆತ್ತು ಖಾಸಗಿ ವಾಹನದಲ್ಲಿ ತೆರಳುವುದು ತಪ್ಪುತ್ತದೆ ಎಂಬುದು ಗ್ರಾಮಸ್ಥರ ವಿವರಣೆ.

ಹೊಸ ಭರವಸೆ
ಜನತೆಯ ಹೆಚ್ಚುವರಿ ಬಸ್‌ ಬೇಡಿಕೆಯ ಕುರಿತಾಗಿ ಸುಳ್ಯದಲ್ಲಿ ನೂತನವಾಗಿ ಡಿಪೋ ಆರಂಭವಾಗುತ್ತಿರುವುದು ಜನತೆಯಲ್ಲಿ ಹೊಸ ಭರವಸೆ ಮೂಡಿಸಿದೆ.

ಪ್ರತ್ಯೇಕ ಮಾರ್ಗಸೂಚಿ ರಚನೆ 
ಸವಣೂರು, ಆಲಂಕಾರು ಭಾಗದ ಜನತೆಯ ಬೇಡಿಕೆಯನ್ನು ಪೂರೈಸುವ ಜತೆಗೆ ಸುಳ್ಯ-ಬೆಳ್ಳಾರೆ- ಸವಣೂರು-ಆಲಂಕಾರು-ನೆಲ್ಯಾಡಿ ಸಂಪರ್ಕಿಸುವ ನಿಟ್ಟಿನಲ್ಲಿ ಪ್ರತ್ಯೇಕ ಮಾರ್ಗಸೂಚಿ ರಚನೆ ಮಾಡಿ ದಿನಂಪ್ರತಿ ಎರಡು ಕೆಎಸ್‌ಆರ್‌ಟಿಸಿ ಬಸ್‌ ಸಂಚರಿಸುವಂತೆ ಮಾಡಲು ಪ್ರಯತ್ನ ನಡೆದಿದೆ. ಸುಳ್ಯ ಡಿಪೋ ಆರಂಭವಾಗುವುದರಿಂದ ಇನ್ನಷ್ಟು ಕಡೆಗಳ ಬಸ್‌ ಬೇಡಿಕೆ ಸಲ್ಲಿಸಲಾಗುವುದು.
– ಎಸ್‌. ಅಂಗಾರ, ಸುಳ್ಯ ಶಾಸಕ

– ಪ್ರವೀಣ್‌ ಕುಮಾರ್‌

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.