ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ


Team Udayavani, Oct 6, 2022, 12:13 AM IST

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಮಂಗಳೂರು/ ಉಡುಪಿ:ಒಂಬತ್ತು ದಿನಗಳ ಕಾಲ ನಡೆದ ಶರನ್ನವರಾತ್ರಿ ಮಹೋತ್ಸವ ಬುಧವಾರ ವಿಜಯದಶಮಿ ಉತ್ಸವದೊಂದಿಗೆ ಸಮಾಪನಗೊಂಡಿತು.

ವಿಶೇಷವಾಗಿ ದೇವಿ ದೇವಾಲಯ ಗಳಲ್ಲಿ ಒಂಬತ್ತೂ ದಿನಗಳ ಕಾಲ ಚಂಡಿಕಾ ಹವನ, ಸಪ್ತಶತಿ ಪಾರಾಯಣ, ದುರ್ಗಾ ಹವನ, ದುರ್ಗಾ ನಮಸ್ಕಾರ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು, ನಿತ್ಯವೂ ಅನ್ನದಾನ ನಡೆದವು.

ಮಂಗಳೂರು ನಗರದ ವಿವಿಧ ದೇವಸ್ಥಾನಗಳಲ್ಲಿ ಸೆ. 26ರಿಂದ ಆರಂಭಗೊಂಡ ವೈಭವದ ನವರಾತ್ರಿ ಮಹೋತ್ಸವ ಬುಧವಾರ ಸಂಪನ್ನಗೊಂಡಿತು. “ಮಂಗಳೂರು ದಸರಾ’ ಎಂದೇ ಪ್ರಸಿದ್ಧಿ ಪಡೆದಿರುವ ಕುದ್ರೋಳಿ ಕ್ಷೇತ್ರದ ನವರಾತ್ರಿ ಉತ್ಸವವು ಬುಧವಾರ ಭವ್ಯ ಶೋಭಾಯಾತ್ರೆಯೊಂದಿಗೆ ಸಂಪನ್ನ ಗೊಂಡಿತು.

ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಜಯ ದಶಮಿಯಂದು ವಿದ್ಯಾರಂಭ, ತುಲಾಭಾರ ನಡೆಯಿತು. ಮಧ್ಯಾಹ್ನ ರಥಾರೋಹಣ, ರಾತ್ರಿ ರಥೋತ್ಸವ ಜರಗಿತು. ಕಟೀಲು, ಪೊಳಲಿ, ಬಪ್ಪನಾಡು ಸಹಿತ ವಿವಿಧ ದೇವಾಲಯಗಳಲ್ಲಿ ನವರಾತ್ರಿ ಸಡಗರ ನಡೆದು ಬುಧವಾರ ಸಮಾಪನಗೊಂಡಿತು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಯ ದೇವೀ ದೇವಸ್ಥಾನಗಳಲ್ಲಿ ಕೂಡ ನವರಾತ್ರಿ ಆಚರಣೆ, ಶಾರದಾ ಪೂಜೆ ಶ್ರದ್ಧಾಭಕ್ತಿಗಳಿಂದ ನೆರವೇರಿತು.

ಉಡುಪಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿ ನಿಂದ ಆರಂಭಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಅದ್ದೂರಿಯಾಗಿ ನಡೆಯಿತು. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೆ.26ರಿಂದ ಅ.5ರವರೆಗೆ ಮಹಾನವರಾತ್ರಿ ಉತ್ಸವವನ್ನು ವೈಭವದಿಂದ ಆಚರಿಸಲಾಯಿತು. ಉಡುಪಿ ಆಸುಪಾಸಿನ ದೇವಿ ದೇವ ಸ್ಥಾ ನ ಗ ಳಲ್ಲಿ ಮಹಾನವಮಿಯಂದು ಚಂಡಿಕಾಯಾಗ, ರಥೋತ್ಸವ, ವಿಜಯದಶಮಿಯಂದು ವಿದ್ಯಾರಂಭ ನವಾನ್ನಪ್ರಾಶನ ಜರಗಿತು.

ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಶ್ರೀಕೃ ಷ್ಣಮಠದಿಂದ ಮೆರವಣಿಗೆ ಬಂದು ಶಮೀ ವೃಕ್ಷದ ಪೂಜೆಯ ಪ್ರಸಾದವನ್ನು ಸ್ವೀಕರಿಸಿ ದರು. ಶ್ರೀಕೃಷ್ಣಮಠದಲ್ಲಿ ಕದಿರು ಕಟ್ಟುವ ಹಬ್ಬ ಆಚರಿಸಲಾಯಿತು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಾರ್ಕಳದ ಕುಕ್ಕೂಂದೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ, ಸೌಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಉಡುಪಿಯ ಕಡಿಯಾಳಿ, ಇಂದ್ರಾಳಿ, ಬೈಲೂರು, ಅಂಬಲಪಾಡಿ, ಪುತ್ತೂರು, ಕನ್ನರ್ಪಾಡಿ ಸಹಿತ ದೇವಿಯ ದೇವಸ್ಥಾನಗಳ ವೈಭವದಿಂದ ನವರಾತ್ರಿಯ ಆಚರಣೆ ನಡೆಯಿತು.

ರಥಬೀದಿ; ಇಂದು ಶೋಭಾಯಾತ್ರೆ
ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವ ಸಂಭ್ರಮವನ್ನು ಆಚರಿಸುತ್ತಿದ್ದು, ಅ. 6ರಂದು ಸಮಾಪನಗೊಳ್ಳಲಿದೆ. ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್‌ ವಿಸರ್ಜನಾ ಶೋಭಾಯಾತ್ರೆಯು ನಗರದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.