ಶರತ್ ಮನೆಗೆ ಶಾಸಕ ಸುನಿಲ್ ಕುಮಾರ್ ಭೇಟಿ
Team Udayavani, Jul 10, 2017, 2:00 AM IST
ಬಂಟ್ವಾಳ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯ ಶರತ್ ಮಡಿವಾಳ ಅವರ ಮನೆಗೆ ಕಾರ್ಕಳ ಶಾಸಕ, ವಿಧಾನಸಭೆಯ ವಿಪಕ್ಷದ ಮುಖ್ಯ ಸಚೇತಕ ಸುನಿಲ್ ಕುಮಾರ್ ಭೇಟಿ ನೀಡಿ ಮƒತರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ 1ಲಕ್ಷ ರೂ. ನೆರವು ನೀಡಿದರು.
ಶರತ್ರ ಸಾವು ನಮಗೆ ತೀವ್ರ ಆಘಾತ ತಂದಿದ್ದು ಸಮಾಜ ಒಳ್ಳೆಯ ಸಮಾಜಮುಖೀ ಚಿಂತನೆಯ ವ್ಯಕ್ತಿಯನ್ನು ಕಳೆದುಕೊಂಡಿದೆ. ಶರತ್ ಹತ್ಯೆಯನ್ನು ಉನ್ನತ ಮಟ್ಟದ ತನಿಖೆಗೆ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಸರಕಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿದರು.
ಮೃತನ ತಂದೆ ತನಿಯಪ್ಪ ಮಡಿವಾಳ ತಾನೇನೂ ವಿಚಲಿತನಾಗಿಲ್ಲ, ಒಂದು ಉತ್ತಮ ಕಾರ್ಯಕ್ಕೆ ತನ್ನ ಮಗನ ಬಲಿದಾನ ಆಗಿದೆ. ಅವನು ಮತ್ತೆ ಹುಟ್ಟಿಬಂದು ಸಂಘದ ಕಾರ್ಯಕ್ಕೆ ನೆರವಾಗಬೇಕು ಎಂದು ಹೇಳಿ ಗದ್ಗದಿತರಾದರು.
ಈ ಸಂದರ್ಭದಲ್ಲಿ ಬಿಜೆಪಿ ನೇತಾರರಾದ ರಾಜೇಶ್ ನಾ„ಕ್ ಉಳಿಪಾಡಿಗುತ್ತು, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಸ್ಥಳೀಯರಾದ ಪ್ರವೀಣ್ ಗಟ್ಟಿ, ದಯಾನಂದ ಬಿ.ಎಂ.,ಅಶೋಕ ಗಟ್ಟಿ, ನವೀನ್ ಅಂಚನ್, ಸತೀಶ್ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್