ಇಬ್ಬರ ಪ್ಲ್ಯಾನ್- 6 ಜನರ ಟೀಂ; ಫಾಝಿಲ್ ಹಂತಕರು ಪೊಲೀಸ್ ಬಲೆಗೆ; ಆತನೇ ಟಾರ್ಗೆಟ್ ಆಗಿದ್ಯಾಕೆ?
Team Udayavani, Aug 2, 2022, 12:21 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ನಗರದ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೊಲೀಸರು ಆರು ಮಂದಿ (ಕಾರು ಮಾಲಕ ಸೇರಿ ಏಳು) ಆರೋಪಿಗಳನ್ನು ಬಂಧಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಮಿಷನರ್ ಶಶಿಕುಮಾರ್, ಜುಲೈ 28ರಂದು ಕಾರಿನಲ್ಲಿ ಬಂದು ಫಾಝಿಲ್ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಡಿಸಿಪಿ ಅನ್ಶು ಕುಮಾರ್ ನೇತೃತ್ವದಲ್ಲಿ ಏಳೆಂಟು ತಂಡದಲ್ಲಿ ತನಿಖೆ ಮಾಡಲಾಗಿತ್ತು. ಹತ್ಯೆಗೆ ಬಳಿಸಿದ ಇಯಾನ್ ಕಾರಿನ ಮಾಲಕನಿಂದ ಆರೋಪಿಗಳ ಮಾಹಿತಿ ಸಿಕ್ಕಿತು. ಹೆಚ್ಚು ಹಣದಾಸೆಗೆ ಅಜಿತ್ ಕ್ರಾಸ್ತಾ ಕಾರು ನೀಡಿದ್ದ. ಮೂರು ದಿನಕ್ಕೆ ಹದಿನೈದು ಸಾವಿರ ಕೊಡುವುದಾಗಿ ಆರೋಪಿಗಳು ಹೇಳಿದ್ದರು ಎಂದು ಮಾಹಿತಿ ನೀಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಾದ ಬಜಪೆಯ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಕಾಟಿಪಳ್ಳ ನಿವಾಸಿ ಶ್ರೀನಿವಾಸ್, ಕುಳಾಯಿ ನಿವಾಸಿ ಗಿರಿಧರ್, ಕಾಟಿಪಳ್ಳ ನಿವಾಸಿ ಅಭಿಷೇಕ್ ಮತ್ತು ದೀಕ್ಷಿತ್ ನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುಹಾಸ್ ಪ್ಲ್ಯಾನ್: ಕೃತ್ಯಕ್ಕೆ ಸುಹಾಸ್ ಶೆಟ್ಟಿ ಮೊದಲು ಅಭಿಷೇಕ್ ನೊಂದಿಗೆ ಯೋಜನೆ ರೂಪಿಸಿದ್ದ. ಅನಂತರ ಉಳಿದವರನ್ನು ಸೇರಿಸಿಕೊಂಡಿದ್ದಾರೆ. ಯಾರಿಗೆ ಹೊಡೆಯುವುದು ಎಂದು ಚರ್ಚಿಸಿದಾಗ ಫಾಝಿಲ್ ಗೆ ಹೊಡೆಯಲು ನಿರ್ಧರಿಸಿದ್ದಾರೆ. ಕೃತ್ಯಕ್ಕೆ ಮೂರು ತಲವಾರು ಉಪಯೋಗಿಸಿದ್ದಾರೆ. ಕೃತ್ಯ ನಡೆಸಿದ ದಿನ ಫಾಝಿಲ್ ಗಾಗಿ ಜಂಕ್ಷನ್ ನಲ್ಲಿ ಓಡಾಡಿದ್ದರು. ನಂತರ ಅಂಗಡಿ ಬಳಿ ಫಾಝಿಲ್ ಸಿಕ್ಕಾಗ ಆತನ ಮೇಲೆ ಸುಹಾಸ್, ಮೋಹನ್ ಮತ್ತು ಅಭಿಷೇಕ್ ನೇರವಾಗಿ ಕೊಲೆ ನಡೆಸಿದ್ದಾರೆ.
ಗುರುವಾರ ರಾತ್ರಿ ಕೃತ್ಯ ನಡೆಸಿದ ಆರೋಪಿಗಳು ಪಲಿಮಾರು ರಸ್ತೆಯ ಮೂಲಕ ಪಡುಬಿದ್ರಿ ಸಮೀಪದ ಇನ್ನಾಕ್ಕೆ ಹೋಗಿ ಅಲ್ಲಿ ಕಾರನ್ನಿಟ್ಟು, ಅಲ್ಲಿಂದ ಬೇರೆ ಕಾರಿನಲ್ಲಿ ತೆರಳಿದ್ದರು. ತನಿಖೆಯ ಬಳಿಕ ಇಂದು ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದರು.
ಬೇರೆ ಗುರಿಯಲ್ಲ: ಸುರತ್ಕಲ್ ನಲ್ಲಿ ಬೇರೆಯವರನ್ನು ಹತ್ಯೆ ಮಾಡಲು ಹೋಗಿ ಫಾಜಿಲ್ ಕೊಲೆ ಮಾಡಿದ್ದರು ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಈ ಹಂತಕರು ಫಾಝಿಲ್ ಗೆ ಗುರಿ ಇಟ್ಟಿದ್ದರು. ಕೃತ್ಯಕ್ಕೆ ಮೊದಲು ಚರ್ಚೆಯ ವೇಳೆ ಆರರಿಂದ ಏಳು ಜನಕ್ಕೆ ಹೊಡೆಯುವ ಬಗ್ಗೆ ನಿರ್ಧರಿಸಿ ಅಂತಿಮವಾಗಿ ಫಾಝಿಲ್ ಗೆ ಗುರಿ ಇಟ್ಟಿದ್ದರು ಎಂದರು.
ಈ ಆರೋಪಿಗಳು ಫಾಝಿಲ್ ನನ್ನೇ ಯಾಕೆ ಟಾರ್ಗೆಟ್ ಮಾಡಿದ್ದರು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ. ಪ್ರಮುಖ ಆರೋಪಿ ಸುಹಾಸ್ ಮೇಲೆ ಒಂದು ಕೊಲೆ ಸಹಿತ ನಾಲ್ಕು ಪ್ರಕರಣಗಳಿವೆ.
ಬೆಳ್ಳಾರೆ ಪ್ರವೀಣ್ ಘಟನೆ ನಡೆದ ದಿನ ರಾತ್ರಿ ಮತ್ತು ಮರುದಿನ ಯಾರಿಗಾದರೂ ಹೊಡೆಯಬೇಕೆಂದು ನಿರ್ಧರಿಸಿದ್ದರು. ಆದರೆ ಪ್ರವೀಣ್ ಕೊಲೆಗೆ ಪ್ರತೀಕಾರಕ್ಕಾಗಿಯೇ ನಡೆದಿದೆ ಎಂಬುದನ್ನು ಈಗ ಸ್ಪಷ್ಟವಾಗಿ ಹೇಳಲಾಗದು ಎಂದು ಕಮಿಷನರ್ ಹೇಳಿದರು.
ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಜುಲೈ 28ರ ರಾತ್ರಿ ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ತೀವ್ರಗೊಳಿಸಿದ್ದ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಲಾದ ಕಾರಿನ ಮಾಲಕ ಅಜಿತ್ ಕ್ರಾಸ್ತಾನನ್ನು ಶನಿವಾರ ಬಂಧಿಸಲಾಗಿತ್ತು. ಈತನನ್ನು ಪೊಲೀಸರು ಐದು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ