ಶೇವಿರೆ: ಚರಂಡಿ ಮುಚ್ಚಿ ರಸ್ತೆಯಲ್ಲಿ ನೀರು
Team Udayavani, Jul 16, 2017, 3:00 AM IST
ನೆಹರೂನಗರ : ರಕ್ತೇಶ್ವರಿ ವಠಾರದ ಅಂಗನವಾಡಿ ರಸ್ತೆಯ ಕೊನೆಯ ಶೇವಿರೆಯಲ್ಲಿ ರಸ್ತೆ ಬದಿ ಚರಂಡಿಯನ್ನು ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಮುಚ್ಚಿರುವ ಕಾರಣ ನೀರು ಶೇಖರಣೆಗೊಂಡು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದೇ ಜಾಗದಲ್ಲಿ ನಿವೇಶನದಾರರು ತಮ್ಮ ಖಾಲಿ ನಿವೇಶನಕ್ಕೆ ಕೆಂಪು ಮಣ್ಣು ಹಾಕಿರುವುದು ಕರಗಿ ಚರಂಡಿಗೆ ಬಂದು ಚರಂಡಿ ಮುಚ್ಚಿದೆ. ಈಗ ಚರಂಡಿಯಲ್ಲಿ ಹರಿಯಬೇಕಾದ ನೀರು ಮುಖ್ಯ ರಸ್ತೆಯಲ್ಲಿ ಹರಿಯುತ್ತಿದ್ದು, ಮಳೆ ಬಂದಾಗ ಕೃತಕ ನೆರೆ ಸೃಷ್ಟಿಯಾಗಿದೆ.
ಇಲ್ಲಿನ ಸಮಸ್ಯೆಯ ಕುರಿತು ಎಪ್ರಿಲ್ ಕೊನೆಯ ವಾರದಲ್ಲಿ ಪೌರಾಯುಕ್ತರಿಗೆ ದೂರು ನೀಡಲಾಗಿದ್ದು, ಅನಂತರ ಸತತ 6 ಬಾರಿ ವೈಯಕ್ತಿಕವಾಗಿ ಭೇಟಿ ಮಾಡಿ ವಿನಂತಿಸಿ ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೆಚ್ಚು ಮಳೆ ಬಂದರೆ ಈ ಮಾರ್ಗದಲ್ಲಿ ಅಂಗನವಾಡಿಗೆ ಹೋಗುವ ಚಿಕ್ಕ ಮಕ್ಕಳಿಗೂ ತೊಂದರೆಯಾಗುತ್ತದೆ. ಕೂಡಲೇ ನಗರಸಭೆ ಆಡಳಿತ ಸ್ಪಂದಿಸಬೇಕು ಎಂದು ಸ್ಥಳೀಯ ನಿವಾಸಿ ಎನ್.ಕೆ. ಭಟ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ