ಪುಟಾಣಿಗಳಿಗೆ ಅಕ್ಷರಾಭ್ಯಾಸ, ಮಕ್ಕಳಿಗೆ ವ್ರತ ದೀಕ್ಷೆ


Team Udayavani, Feb 13, 2019, 1:00 AM IST

aksharabyasa.jpg

ಬೆಳ್ತಂಗಡಿ: ಧರ್ಮಸ್ಥಳದ ಭಗವಾನ್‌ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕದ ಅಯೋಧ್ಯಾ- ಪೌದನಪುರನಗರ ಸಭಾಂಗಣದಲ್ಲಿ ಮಂಗಳವಾರ 36 ಪುಟಾಣಿಗಳು ಅಕ್ಷರಾಭ್ಯಾಸ ಹಾಗೂ 166 ಮಕ್ಕಳು ವ್ರತಾಚರಣೆ ದೀಕ್ಷೆ ಪಡೆದರು.

ಪುಟಾಣಿಗಳಿಗೆ ಆಚಾರ್ಯ ಶ್ರೀ ವರ್ಧಮಾನ ಸಾಗರಜೀ ಮುನಿ ಮಹಾರಾಜ್‌ ಹಾಗೂ ಆಚಾರ್ಯ ಶ್ರೀ ಪುಷ್ಪದಂತ ಸಾಗರ ಮುನಿ ಮಹರಾಜ್‌ ಅವರು ಸುವರ್ಣ ಶಲಾಕೆಯಿಂದ ಓಂಕಾರವನ್ನು ಬರೆಸುವ ಮೂಲಕ ಅಕ್ಷರಾಭ್ಯಾಸ ನಡೆಸಿಕೊಟ್ಟರು. ಮಕ್ಕಳ ಜತೆಗೆ ಪೋಷಕರು ಕೂಡ ಸ್ವಾಮಿಗಳ ಆಶೀರ್ವಾದ ಪಡೆದರು.

ಜೈನ ಸಮುದಾಯದ 110 ಗಂಡು ಮಕ್ಕಳು ಹಾಗೂ 56 ಹೆಣ್ಣುಮಕ್ಕಳು ಸೇರಿ ಒಟ್ಟು 166 ಮಕ್ಕಳು ಕಾರ್ಕಳ ದಾನಶಾಲೆಯ ಹುಂಬುಜ ಶ್ರೀ ಹಾಗೂ ಸಿಂಹನಗದ್ದೆ ಶ್ರೀಗಳ ಸಮ್ಮುಖದಲ್ಲಿ ವ್ರತಾಚರಣೆ ಸ್ವೀಕರಿಸಿದರು.

ಸಿಂಹನಗದ್ದೆ ಬಸ್ತಿ ಮಠದ ಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಮಹಾ ಸ್ವಾಮೀಜಿ ಪ್ರವಚನ ನೀಡಿ, ಜಿನನ ಅನುಯಾಯಿಗಳು ಜೈನರು. ಬಾಲಕರು 8 ವರ್ಷ ವಯಸ್ಸಿನ ಬಳಿಕ ವ್ರತಾಚರಣೆಗೆ ಅರ್ಹರಾಗಿದ್ದು, ಆಹಾರ, ಪೂಜೆ, ಧಾರ್ಮಿಕ ಕ್ರಿಯೆಗಳಿಗೆ ಅರ್ಹರಾಗುತ್ತಾರೆ. ವ್ರತ, ಜನಿವಾರವಿಲ್ಲದೆ ಬಸದಿ ಪ್ರವೇಶಿಸಿದರೆ, ವ್ರತವಿಲ್ಲದೆ ಮದುವೆಯಾದರೆ ಪಿಂಡಶುದ್ಧಿಯನ್ನು ಕಳೆದುಕೊಳ್ಳುತ್ತಾರೆ. ಉಪವಾಸ ಆಚರಣೆಯೇ ಜೈನರ ಹಬ್ಬವಾಗಿದೆ ಎಂದರು.

ಶ್ರೀಕ್ಷೇತ್ರ ಹೊಂಬುಜದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಪ್ರವಚನ ನೀಡಿ, ವ್ರತಾಚರಣೆ ಮಾಡಿದವರು ಅಹಿಂಸೆ ಹಾಗೂ ಸತ್ಯ ಮಾರ್ಗದಲ್ಲಿ ನಡೆಯುವ ದೃಢ ನಿರ್ಧಾರ ಕೈಗೊಳ್ಳಬೇಕು. ಮದ್ಯ, ಮಾಂಸ, ಮಧು (ಜೇನು) ಸೇವನೆ ತ್ಯಾಗ ಪ್ರಮುಖ ಅಂಗವಾಗಿದೆ. ಜೇನು ಸೇವಿಸಿದರೆ 7 ಗ್ರಾಮದ ಜೀವರಾಶಿ 
ನಾಶ ಮಾಡಿದ ದೋಷ ಉಂಟಾಗು ತ್ತದೆ ಎಂದರು.

ಕಾರ್ಕಳ ದಾನ ಶಾಲೆ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ಪ್ರವಚನ ನೀಡಿ,
ಶಾಸ್ತ್ರಗಳನ್ನು ಭಗವಂತನ ಆದೇಶ ಎಂದು ತಿಳಿದು ಪಾಲಿಸಬೇಕು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.