![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶಿರಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮೀನಮೇಷ
Team Udayavani, Sep 22, 2018, 10:06 AM IST
![shiradi.jpg](https://www.udayavani.com/wp-content/uploads/2018/09/22/shiradi-620x299.jpg)
ಸುಬ್ರಹ್ಮಣ್ಯ: ಅತಿವೃಷ್ಟಿ ಸಂದರ್ಭ ಭೂಕುಸಿತದಿಂದಾಗಿ ಹಾನಿಗೀಡಾಗಿರುವ ಶಿರಾಡಿ ಘಾಟಿ ರಾಷ್ಟ್ರೀಯ ಹೆದ್ದಾರಿಯ ದುರಸ್ತಿ ಕಾರ್ಯಕ್ಕೆ ಇನ್ನೂ ಚಾಲನೆಯೇ ಸಿಕ್ಕಿಲ್ಲ. ಇಲ್ಲಿ ಘನ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲವಾದ್ದರಿಂದ ಸರಕು ಸಾಗಾಟ ಲಾರಿಗಳ ಚಾಲಕರು, ವ್ಯಾಪಾರಸ್ಥರು, ಶ್ರಮಿಕ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಜನರ ಸಹನೆಯ ಕಟ್ಟೆಯೂ ಒಡೆಯುತ್ತಿದೆ. ಗುಂಡ್ಯದಿಂದ ಹೆಗ್ಗದ್ದೆ ತನಕ ಕಾಂಕ್ರೀಟ್ ರಸ್ತೆ 12 ಕಡೆ ಭೂಕುಸಿದಿದೆ. ಹಲವು ಕಡೆ ಹೊಳೆ ಬದಿಯ ರಸ್ತೆಯ ಮಣ್ಣು ಜರಿದಿದೆ. ಅಲ್ಲೆಲ್ಲ ಮರಳಿನ ಚೀಲ ಜೋಡಿಸಿ ಟರ್ಪಾಲು ಮುಚ್ಚಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಇದರ ಹೊರತು ಈ ಮಾರ್ಗದಲ್ಲಿ ಯಾವುದೇ ತುರ್ತು ಕಾಮಗಾರಿಗೆ ಗಮನ ಹರಿಸಿಲ್ಲ.
ಇಂದು ಗುಂಡ್ಯದಲ್ಲಿ ಪ್ರತಿಭಟನೆ
ಶಿರಾಡಿ ಘಾಟಿ ರಸ್ತೆ ಬಂದ್ ಮಾಡಿ ದ.ಕ. ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವ್ಯವಸ್ಥೆಗೆ ಧಕ್ಕೆ ಮಾಡಿರುವ ಆಡಳಿತ ವ್ಯವಸ್ಥೆಯ ಕ್ರಮ ಖಂಡಿಸಿ, ಸಾರಿಗೆ ಬಸ್ ಸಹಿತ ಅಗತ್ಯ ಘನವಾಹನಗಳಿಗೆ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸುವಂತೆ ಆಗ್ರಹಿಸಿ ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸೆ. 22ರಂದು ಗುಂಡ್ಯ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಮಲೆ ನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ತಿಳಿಸಿದ್ದಾರೆ.
9 ತಿಂಗಳು ಬಂದ್
ಈ ರಾ.ಹೆ.ಯನ್ನು 2ನೇ ಹಂತದಲ್ಲಿ ಕಾಂಕ್ರೀಟ್ ಹಾಸಲು ಜನವರಿ 19ರಿಂದ ಬಂದ್ ಮಾಡಲಾಗಿತ್ತು. ಬಳಿಕ ಜೂನ್ 15ರಿಂದ ಲಘು ವಾಹನಗಳಿಗೆ ಸಂಚರಿಸಲು ಅವಕಾಶ ಮಾಡಲಾಗಿತ್ತು. ಈ ಅವಧಿಯಲ್ಲಿ ಮಳೆ ಬಂದು ಅಲ್ಲಲ್ಲಿ ಭೂಕುಸಿತವಾದ ಕಾರಣ ಪುನಃ ವಾಹನ ಸಂಚಾರ ನಿಷೇಧಿಸಲಾಗಿತ್ತು. ಕೇವಲ 10 ದಿನ ಮಾತ್ರ ಲಘು ವಾಹನ ಸಂಚಾರಕ್ಕೆ ರಸ್ತೆ ಮುಕ್ತವಾಗಿತ್ತು.
ಕಳೆದ 9 ತಿಂಗಳಿಂದ ಈ ಮಾರ್ಗದಲ್ಲಿ ವಾಹನ ಓಡಾಟವಿಲ್ಲದೆ ಲಾರಿ ಚಾಲಕ-ಮಾಲಕರು, ಗುಂಡ್ಯ, ನೆಲ್ಯಾಡಿ, ಮಾರನಹಳ್ಳಿಯ ವ್ಯಾಪಾರಸ್ಥರು ವ್ಯಾಪಾರ ವಿಲ್ಲದೆ ಭಾರೀ ನಷ್ಟಕ್ಕೆ ಒಳಗಾಗಿದ್ದಾರೆ. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲೂ ಅಸಾಧ್ಯವಾಗಿದೆ. ಸಾಲ ಮಾಡಿ ವಾಹನ ಖರೀದಿಸಿದ ಕೆಲವರು ಕಂತು ಕಟ್ಟಲು ಸಾಧ್ಯವಾಗದೆ ವಾಹನ ಮಾರಿದ್ದಾರೆ. ಕಷ್ಟ ಕೇಳಲು ಯಾರೂ ಬಂದಿಲ್ಲ ಎಂದು ಗುಂಡ್ಯದ ಗ್ಯಾರೇಜ್ ಮೆಕ್ಯಾನಿಕ್ ಸುರೇಶ್ ಅಳಲು ತೋಡಿಕೊಂಡರು.
ಒಂದೇ ದಿನ 9 ಅಪಘಾತ !
ರಸ್ತೆ ಕುಸಿತದ ಸ್ಥಳಗಳಲ್ಲಿ ಲಘು ವಾಹನಗಳು ಏಕಮುಖವಾಗಿ ಸಂಚರಿಸುತ್ತಿವೆ. ಬುಧವಾರ ಒಂದೇ ದಿನ ಈ ಮಾರ್ಗದಲ್ಲಿ 9 ಕಡೆ ಅಪಘಾತ ಸಂಭವಿಸಿದೆ. ದೊಡ್ಡತಪ್ಪಲು ಮತ್ತು ದೋಣಿಗಲ್ನಲ್ಲಿ ದೊಡ್ಡ ಮಟ್ಟದ ಸಮಸ್ಯೆ ಕಂಡುಬರುತ್ತಿದೆ. ಹೆದ್ದಾರಿ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಕೂಡ ಅರ್ಧಕ್ಕೆ ನಿಂತಿದೆ. ಮಣ್ಣನ್ನು ತೆರವುಗೊಳಿಸಿದರೆ ವಾಹನಗಳ ಸಂಚಾರಕ್ಕೆ ಮತ್ತಷ್ಟು ಅನುಕೂಲ ವಾಗುತ್ತಿತ್ತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.