ಶಿರಾಡಿಗೆ ಸುರಂಗ ಮಾರ್ಗ: ಅಪಾಯಕ್ಕೆ ಆಹ್ವಾನ

ಸುರಂಗದ ಬದಲು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ಸೂಕ್ತ

Team Udayavani, Jan 25, 2023, 7:00 AM IST

ಶಿರಾಡಿಗೆ ಸುರಂಗ ಮಾರ್ಗ: ಅಪಾಯಕ್ಕೆ ಆಹ್ವಾನ

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಶಿರಾಡಿ ಘಾಟಿಯಲ್ಲಿ 23 ಕಿ.ಮೀ. ಸುರಂಗ ಮಾರ್ಗ ಕಾಮಗಾರಿಯ ಗುಮ್ಮ ಮತ್ತೆ ಮುನ್ನೆಲೆಗೆ ಬಂದಿದೆ.
ಡಿಸೆಂಬರ್‌ನಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯವರೇ “ಈ ಯೋಜನೆ ಕಾರ್ಯ ಸಾಧುವಲ್ಲ’ ಎಂದು ಸಂಸತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದರು. ಆದರೆ ಇತ್ತೀಚೆಗೆ ಸಂಸದ  ನಳಿನ್‌ ಕುಮಾರ್‌ ಕಟೀಲು ಅವರಿಗೆ ಬರೆದ ಪತ್ರದಲ್ಲಿ “ವಿಸ್ತೃತ ಯೋಜನಾ ವರದಿಯನ್ನು ಪೂರ್ಣಗೊಳಿಸಲಾಗುತ್ತಿದೆ. ಮೇಯಲ್ಲಿ ಬಿಡ್‌ ಆಹ್ವಾನಿಸಲಾಗುವುದು’ ಎಂದು ತಿಳಿಸಿದ್ದಾರೆ. ಈ ಯೋಜನೆ ಸುಮಾರು 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತಗೊಳಿಸುವ ಉದ್ದೇಶ ರಾ. ಹೆ.ಸಚಿವಾಲಯದ್ದಾಗಿದೆ.

ಇದರ ಬೆನ್ನಿಗೇ ಪರಿಸರಾಸಕ್ತರು “ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ ಸುರಂಗ ಕೊರೆಯುವಂಥ ಯೋಜನೆಗಳು ನೂರಾರು ಸಂಕಷ್ಟಗಳನ್ನು ತಂದೊಡ್ಡಲಿವೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಪರಿಸರಕ್ಕೆ ತೀರಾ ಹಾನಿ ಎಸಗುವ ಹಾಗೂ ಪಶ್ಚಿಮ ಘಟ್ಟದ ಆರೋಗ್ಯವನ್ನು ಹಾಳುಗೆಡಹುವ ಈ ಯೋಜನೆಯನ್ನು ಕೈ ಬಿಟ್ಟು ಬೆಂಗಳೂರು ತಲುಪುವ ಪರ್ಯಾಯ ಮಾರ್ಗಗಳನ್ನು ಅಭಿವೃದ್ಧಿಗೊಳಿಸಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ವಿಭಾಗದ ಮಾರನಹಳ್ಳಿ – ಅಡ್ಡಹೊಳೆ ನಡುವೆ ಚತುಷ್ಪಥ ನಿರ್ಮಾಣ ಪ್ರಗತಿಯಲ್ಲಿದ್ದು, 1,976 ಕೋಟಿ ರೂ. ಮೊತ್ತದ ಬಿಡ್‌ ಆಹ್ವಾನಿಸಲಾಗಿದೆ. ಜತೆಗೆ 23 ಕಿ.ಮೀ. ಉದ್ದದ ಸುರಂಗ ಮಾರ್ಗ ಕಾಮಗಾರಿಯನ್ನು 15 ಸಾವಿರ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ.

ಈ ಮೊದಲು ಡಿಸೆಂಬರ್‌ನಲ್ಲಿ ಶಿರಾಡಿ ಘಾಟಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ ಎಂದು ಹೇಳಿದ್ದ ಸಚಿವರೇ ಈಗ ಯೋಜನೆಗೆ ಹೇಗೆ ಅನುಮತಿ ನೀಡುತ್ತಿದ್ದಾರೆ? ಯಾವುದು ಸರಿ? ಯಾವುದನ್ನು ನಂಬಬೇಕು ಎಂಬುದು ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರ ಪ್ರಶ್ನೆ.

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಈಗಾಗಲೇ ವಿವಿಧ ಯೋಜನೆಗಳಿಂದ ಹಾನಿಗೀಡಾಗಿದೆ. ಕಾಡು ಪ್ರಾಣಿಗಳ ಹಾವಳಿ, ಭೂಕಂಪ, ಭೂ ಕುಸಿತಗಳ ಪ್ರಮಾಣ ಹೆಚ್ಚಾಗಿದೆ. ಇಂಥ ಸ್ಥಿತಿಯಲ್ಲಿ ಸುರಂಗ ಮಾರ್ಗ ಬಂದರೆ ಸಮಸ್ಯೆ ಹೆಚ್ಚಲಿದೆ. ಅದರ ಬದಲಾಗಿ ಘಟ್ಟದ ಮೇಲಿನ ಪ್ರದೇಶಗಳನ್ನು ಸಂಪರ್ಕಿಸುವ ಎಲ್ಲ ಸಂಪರ್ಕ ರಸ್ತೆಗಳನ್ನು ಬಲಗೊಳಿಸಿದರೆ ಸುರಂಗ ಮಾರ್ಗದ ಅಗತ್ಯ ಉದ್ಭವಿಸದು ಎಂದು ಸಚಿವರಿಗೆ ಪತ್ರ ಬರೆದು ಮನವರಿಕೆ ಮಾಡಲು ಪರಿಸರಾಸಕ್ತರು ಮುಂದಾಗಿದ್ದಾರೆ.

ಅಪಾಯದ ಬಾಗಿಲು ತೆರೆದಂತೆ
ಈಗಾಗಲೇ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ರೈಲು ಹಳಿ, ಎತ್ತಿನ ಹೊಳೆ ಯೋಜನೆ, ಜಲ ವಿದ್ಯುತ್‌ ಯೋಜನೆ ಎಂದು ಪಶ್ಚಿಮ ಘಟ್ಟವನ್ನು ಹಾಳು
ಗೆಡವಲಾಗಿದೆ. ಶಿರಾಡಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಭೂಕುಸಿತ ಹೆಚ್ಚುತ್ತಿದೆ. ಅದೇ ಕಂಪನ ಚಾರ್ಮಾಡಿ, ಬಿಸಿಲೆ, ಕಡ್ತಕಲ್‌, ಎಳನೀರು ಘಾಟಿಗೂ ಹಬ್ಬಿ ಪಶ್ಚಿಮ ಘಟ್ಟದ ಉದ್ದಗಲಕ್ಕೂ ಭೂ ಕುಸಿತ, ಜಲ ಪ್ರವಾಹಗಳು ಉಂಟಾಗುತ್ತಿವೆ. ಇಂಥ ಸಂದರ್ಭದಲ್ಲಿ ಸುರಂಗ ಮಾರ್ಗ ಸೂಕ್ತವಲ್ಲ ಎನ್ನುತ್ತಾರೆ ಪರಿಸರಾಸಕ್ತ ದಿನೇಶ ಹೊಳ್ಳ.

ಸದ್ಯದ ಪರಿಸ್ಥಿತಿಯಲ್ಲಿ ಸುರಂಗ ಮಾರ್ಗಕ್ಕಿಂತ ಪರ್ಯಾಯ ರಸ್ತೆಗಳ ಅಭಿವೃದ್ಧಿಯೇ ಅಗತ್ಯ. ಒಂದುವೇಳೆ ಸುರಂಗ ಮಾರ್ಗ ನಿರ್ಮಾಣವಾದರೂ ಪ್ರಕೃತಿ ವಿಕೋಪ ಸಂಭವಿಸಿ ಏನಾದರೂ ಅನಾಹುತವಾದರೆ ಘಟ್ಟದ ಮೇಲಿನ ಪ್ರದೇಶಗಳೊಂದಿಗೆ ಕರಾವಳಿ ಸಂಪರ್ಕವೇ ಕಡಿತಗೊಂಡೀತು. ಹಾಗಾಗಿ ಅಭಿವೃದ್ಧಿ ಅಗತ್ಯ. ಆದರೆ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸುವುದು ಸೂಕ್ತ ಎನ್ನುತ್ತಾರೆ ಮಲೆನಾಡು ಜನಹಿತ ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್‌ ಶಿರಾಡಿ.

ಪರ್ಯಾಯ ಉಪಾಯವೇ ಸೂಕ್ತ ಯಾಕೆ?
ಸಂಪಾಜೆ ಮಡಿಕೇರಿ, ಚಾರ್ಮಾಡಿ, ಶಿಶಿಲ-ಬೈರಾಪುರ ರಸ್ತೆ, ಬಿಸಿಲೆ ಘಾಟಿ ಮೊದಲಾದ ರಸ್ತೆಗಳು ಬೆಂಗಳೂರು ಹಾಗೂ ಕರಾವಳಿ ಸಂಪರ್ಕಕ್ಕೆ ಇರುವ ಪರ್ಯಾಯ ಮಾರ್ಗಗಳು. ಅವುಗಳನ್ನು ಅಭಿವೃದ್ಧಿಪಡಿಸಿದರೆ ಹೆಚ್ಚು ಅನುಕೂಲವಾಗಲಿದೆ.

1 ಪಶ್ಚಿಮ ಘಟ್ಟದ ಮೇಲಿನ ಒತ್ತಡವನ್ನು (ವಾಹನ ದಟ್ಟಣೆ ಹಾಗೂ ಸುರಂಗ ಮಾರ್ಗದಿಂದಾಗುವ ಅನಾಹುತ) ಕೊಂಚ ಕಡಿಮೆ ಮಾಡಬಹುದು.

2 ಈ ರಸ್ತೆಗಳ ಅಭಿವೃದ್ಧಿಗೆ ಕೆಲವು 400-500 ಕೋಟಿ ರೂ. ಸಾಕಾಗಬಹುದು. ಅನಾವಶ್ಯಕವಾಗಿ 15 ಸಾವಿರ ಕೋಟಿ ರೂ. ಪೋಲಾಗುವುದನ್ನು ತಡೆಯಬಹುದು.

3 ಪರ್ಯಾಯ ಮಾರ್ಗಗಳನ್ನು ಅಭಿವೃದ್ಧಿಗೊಳಿಸು ವುದರಿಂದ ವಾಹನ ದಟ್ಟಣೆಯೂ ಹಂಚಿ ಹೋಗಿ ರಸ್ತೆಯ ಬಾಳಿಕೆಯೂ ಹೆಚ್ಚುತ್ತದೆ. ಅವಘಡ ಸಂಭವಿಸಿದಾಗ ಆಗುವ ಟ್ರಾಫಿಕ್‌ ಜಾಮ್‌ನಂಥ ಸಮಸ್ಯೆಗೂ ಪರಿಹಾರ ಸಿಗಲಿದೆ.

4 ಪರ್ಯಾಯ ಮಾರ್ಗಗಳಿಗೆ ವಾಹನ ದಟ್ಟಣೆ ಹಂಚಿ ಹೋಗುವುದರಿಂದ ಆ ರಸ್ತೆಗಳ ಸುತ್ತಮುತ್ತಲಿನ ಪಟ್ಟಣಗಳ ಸ್ಥಳೀಯ ಆರ್ಥಿಕತೆಗೂ ಪುನಃಶ್ಚೇತನ ನೀಡಿದಂತಾಗಲಿದೆ.

– ಭರತ್ ಶೆಟ್ಟಿಗಾರ್

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.